ಕೂತ್ಕುಂಜ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣಾ ಕಾರ್ಯಕ್ರಮ

ಜೇಸಿಐ ಪಂಜ ಪಂಚಶ್ರೀ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ.17ರಂದು ಕೂತ್ಕುಂಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ...

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಧನಸಹಾಯ ವಿತರಣೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಈ ವರ್ಷ ಸಮಾಜ ಸೇವಾ ಯೋಜನೆಯಡಿ ನೀಡುವ 1 ಲಕ್ಷ ರೂ. ಧನಸಹಾಯವನ್ನು ಕಲ್ಲುಮುಟ್ಲು ನಿವಾಸಿ ಜಯರಾಮನ್ ನಾಯರ್ ಅವರಿಗೆ ಮನೆ ಕಟ್ಟಲು ನೀಡುವುದೆಂದು ತೀರ್ಮಾನಿಸಲಾಗಿತ್ತು. ಅದರಂತೆ ನ.17 ರಂದು ಮಂಜೂರಾತಿ ಪತ್ರ ಮತ್ತು ಪ್ರಥಮ ಕಂತು ರೂ 50,000 ವನ್ನು ಅವರಿಗೆ ಸುಳ್ಯ ಹಬ್ಬ ಸಮಿತಿ...
Ad Widget

ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದಿಂದ ಸಕಲೇಶಪುರದಲ್ಲಿ ಚೆಂಡೆ ಪ್ರದರ್ಶನ

ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ಚಾರ್ವಾಕ ಕಲಾವಿದರ ತಂಡವುಸಕಲೇಶಪುರದ ಮರೆನಹಳ್ಳಿಯ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಮರವ್ವ ಜಾತ್ರೆಯಲ್ಲಿ ಭಾಗವಹಿಸಿದ್ದು, ಚೆಂಡೆ ಪ್ರದರ್ಶನ ನೀಡಿದೆ. ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳವು 2 ದಿನಗಳಿಂದ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದೆ ಎಂದು ಮೇಳದ ವ್ಯವಸ್ಥಾಪಕ ಕಾರ್ಯದರ್ಶಿ ಶಿವಪ್ರಸಾದ್ ಜಿ., ಅಧ್ಯಕ್ಷರಾದ...

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ಪೂದೆ ಶ್ರೀ ವಿಷ್ಣು ಮಹಾಗಣಪತಿ ದೇವಸ್ಥಾನದಲ್ಲಿ ಕುಣಿತ ಭಜನಾ ಸೇವೆ

ಪೂದೆ ಶ್ರೀ ವಿಷ್ಣು ಮಹಾಗಣಪತಿ ದೇವಸ್ಥಾನ ಮುರುಳ್ಯ ಇಲ್ಲಿ ಇಂದು ನಡೆದ ನಿಧಿ ಕುಂಭ ಶಢಾದರ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ವಿದ್ಯಾರ್ಥಿಗಳು ಕುಣಿತ ಭಜನೆ ಸೇವೆ ನಡೆಸಿಕೊಟ್ಟರು. ತಂಡವನ್ನು ಶಿಕ್ಷಕ ಶಿವಪ್ರಸಾದ್.ಜಿ ಹಾಗೂ ಭಜನಾ ತರಬೇತುದಾರ ಸದಾನಂದ ಆಚಾರ್ಯ ಕಾಣಿಯೂರು ಇವರು ನಿರ್ದೇಶಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ,...

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ಬಹುಮಾನ ದೀಕ್ಷಾ ಟ್ರೇಡರ್ಸ್ ನಲ್ಲಿ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ನಿಧೀಶ್ ಕುದ್ಪಾಜೆಗೆ ದೀಕ್ಷಾ ಡ್ರೇಡರ್ಸ್ ಮಾಲಕರಾದ ಮಾಧವ ರಾವ್ ಕೆ. ಬಹುಮಾನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಮಮತಾ ಬ್ರಿಜೇಶ್, ಬ್ರಿಜೇಶ್ ಕುದ್ಪಾಜೆ ಹಾಗೂ ಪತ್ರಿಕಾ...

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ವಿಜೇತರಿಗೆ ಕುಂಕುಂ ಫ್ಯಾಷನ್ ನಲ್ಲಿ ಬಹುಮಾನ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅದ್ವಿಕ್ ಗೆ ಕುಂಕಂ ಫ್ಯಾಷನ್ ಮಾಲಕರಾದ ಭೀಮಾ ಪಟೇಲ್ ಹಾಗೂ ಧನು ಪಟೇಲ್ ನ.17ರಂದು ಬಹುಮಾನ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಹವ್ಯಾ, ವಿಜಯಕುಮಾರ್ ಪಾಲಾರ್ ಗುಂಡ್ಯ,...

ಡಿ.12 ರಂದು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ – ಡಾ. ರೇಣುಕಾಪ್ರಸಾದ್ ಕೆ.ವಿ. ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಗೆ ದ.ಕ. ಜಿಲ್ಲೆ, ಕಾಸರಗೋಡು ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಮತ ಕ್ಷೇತ್ರದಿಂದ ಸ್ಪರ್ಧಿಸಲು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ನ.16ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಹಕಾರ ಸಂಘಗಳ ಉಪ...

ಹರಿಹರ ಪಲ್ಲತಡ್ಕ :ಶಾಲೆಯಲ್ಲಿ ಇಂದು ಸಹ ಶೂನ್ಯ ಹಾಜರಾತಿ

ಹರಿಹರ ಪಲ್ಲತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಪಾಠ ಪ್ರವಚನ ಸರಿಯಾಗಿ ನಡೆಸುತ್ತಿಲ್ಲ, ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುತ್ತಿಲ್ಲ ಎಂದು ಆರೋಪಿಸಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ತಾವೇ ಶಾಲೆಗೆ ಬಂದು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ(ನ.16) ನಡೆದಿದ್ದು, ಇಂದು(ನ.17) ವಿದ್ಯಾರ್ಥಿಗಳು ಶಾಲೆಗೆ ಬಾರದೆ ಶೂನ್ಯ ಹಾಜರಾತಿ ಆಗಿದೆ. ನಿನ್ನೆ ದಿನ ಕ್ಷೇತ್ರ ಶಿಕ್ಷಣಾಧಿಕಾರಿ...

ಬಾಳಿಲ: ವಿದ್ಯಾರ್ಥಿ ಸರಕಾರದ ಪದಗ್ರಹಣ ಕಾರ್ಯಕ್ರಮ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ 2021 --22ನೆಯ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭವು ನಡೆಯಿತು. ವಿದ್ಯಾರ್ಥಿ ಸರಕಾರದ ರಾಜ್ಯಪಾಲರಾದ ಶಾಲೆಯ ಮುಖ್ಯೋಪಾಧ್ಯಾಯರು ಸಮಾರಂಭದಲ್ಲಿ ಭಾಗವಹಿಸಿ ಸಭಾಪತಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಂಪುಟ ದರ್ಜೆಯ ಸಚಿವರುಗಳಿಗೆ ಶಾಲಾ ಸಂವಿಧಾನದಂತೆ ಸಂಸ್ಕೃತ , ಕನ್ನಡ ,ಇಂಗ್ಲಿಷ್ ,ಹಿಂದಿ ,ತುಳು ಭಾಷೆಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರಾಜ್ಯಪಾಲರ ನೆಲೆಯಿಂದ...

ನ.18 ರಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಡಾ.ಕೆ.ವಿ.ಚಿದಾನಂದ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದಕ್ಷಿಣ ಕನ್ನಡ, ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ನ.18 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಡಿಸೆಂಬರ್ 12ರಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Loading posts...

All posts loaded

No more posts

error: Content is protected !!