ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ – ಇಲಾಖಾಧಿಕಾರಿಗಳಿಂದ ಮಾಹಿತಿ

ಕೊಡಿಯಾಲ ಗ್ರಾಮ ಪಂಚಾಯತ್ 2021-22 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿ ನ.8 ರಂದು ಪಂಚಾಯತ್ ಆವರಣದಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ, ಸದಸ್ಯರಾದ ಕರುಣಾಕರ ಆಳ್ವ, ಶ್ರೀಮತಿ ಚಿತ್ರ, ಶ್ರೀಮತಿ ವಿಜಯಕುಮಾರಿ, ಶ್ರೀಮತಿ ಯಶವಂತಿ ಉಪಸ್ಥಿತರಿದ್ದರು.ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ...

ನ.10 : ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ. ಪೋಲೀಸ್ ಠಾಣಾ ಕಾಮಗಾರಿ ಶೀಘ್ರ- ಸಚಿವರಿಂದ ಭರವಸೆ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಆಶಿರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ಡಾ|ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ...

ಎನ್ನೆಂಸಿ: ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾಹಿತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ಪ್ರಥಮ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 8 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಮಂಗಳೂರು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕರ ಕಛೇರಿಯ ವಿಶೇಷ ಅಧಿಕಾರಿ ಡಾ. ಜಯಕರ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು...

ಸಿಪಿಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆ

ಸುಳ್ಯ ತಾಲೂಕು ಸಿಪಿ ಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆಗೊಂಡಿದ್ದಾರೆ.ಸುಳ್ಯ ತಾಲೂಕು ಸಮ್ಮೆಳನದಲ್ಲಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಅವರ ಸಮ್ಮುಖದಲ್ಲಿ ಆಯ್ಕೆಮಾಡಲಾಯಿತು. ಪ್ರಸ್ತುತ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾಗಿ, ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಕಾರ್ಮಿಕ ಸಂಘಟನೆಗಳಲ್ಲಿ ಹಾಗೂ ಇತರ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಸಮಾಜ ಸೇವಕರಾಗಿ ದುಡಿಯುತ್ತಿದ್ದಾರೆ.

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆ

ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...

ಸುಳ್ಯ : ರಬ್ಬರ್ ಟ್ಯಾಪರ್ಸ್ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ಸಭೆ

ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘ ಸುಳ್ಯ ಇದರ ಕಾರ್ಯಕಾರಿ ಸಮಿತಿ ರಚನಾ ಸಭೆಯು ನ. 07ರಂದು ಸುಳ್ಯ ಕಲ್ಕುಡ ದೈವಸ್ಥಾನ ವಠಾರದಲ್ಲಿ ನಡೆಯಿತು. ಸುಳ್ಯ ತಾಲೂಕಿನ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ರಚನಾ ಸಭೆಯು ಶಶಿಕುಮಾರ್ ಅಡ್ಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವಿಭಜಿತ...

ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವ

ಸರ್ಕಾರದ ಆದೇಶದಂತೆ ಸೂಕ್ತ ಮುಂಜಾಗೃತ ಕ್ರಮಗಳನ್ನು ಪಾಲಿಸಿಕೊಂಡು ಅಂಗನವಾಡಿಗಳನ್ನು ತೆರೆಯಲು ನಿರ್ಧರಿಸಿದ್ದು ಈ ನಿಟ್ಟಿನಲ್ಲಿ ಇಂದು ಕಳಂಜ ಗ್ರಾಮದ ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಮಕ್ಕಳ ಪ್ರಾರಂಭೋತ್ಸವವನ್ನು ನಡೆಸಲಾಯಿತು. ಪುಟಾಣಿಗಳಿಗೆ ಹೂವು ನೀಡುವುದರ ಮೂಲಕ ಅಂಗನವಾಡಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಕು. ದೀಪ್ತಿ ಎನ್, ಸಹಾಯಕಿ ಶ್ರೀಮತಿ ಲಲಿತಾ ಮಣಿಮಜಲು, ಎ.ಎನ್.ಎಂ ಬೇಬಿ ಕೆ ಸಿ,...

ಸುಬ್ರಹ್ಮಣ್ಯ: ಯುವ ಬ್ರಿಗೇಡ್ ವತಿಯಿಂದ ಗಂಗಾ ಆರತಿ

ಸುಬ್ರಹ್ಮಣ್ಯ ಘಟಕ ಯುವ ಬ್ರಿಗೇಡ್ ವತಿಯಿಂದ ಸುಬ್ರಹ್ಮಣ್ಯದ ಕುಮಾರಧಾರ ನದಿ ತಟದಲ್ಲಿ ಗಂಗಾ ಆರತಿ ಕಾರ್ಯಕ್ರಮ ನೆರವೇರಿತು.ಪುರೋಹಿತ ಶಂಕರ್ ನಾರಾಯಣ ಶಾಸ್ತ್ರೀ ಅವರು ವೈಧಿಕ ವಿಧಿ ವಿಧಾನ ನೆರವೇರಿಸಿದರು. ಮನೋಜ್ ನಾಯರ್ ಗಂಗಾ ಆರತಿ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಮಿಲನ್ ಕುಮಾರ್, ದಿತೇಶ್, ಕಾರ್ತಿಕ್, ರಮೇಶ್ ಭಟ್,...

ನ.14ರಿಂದ ನ.20: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ, ಲಕ್ಷದೀಪೋತ್ಸವ

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.14ರಿಂದ ನ.20ರ ತನಕ ವಿಜೃಂಭಣೆಯಿಂದ ನಡೆಯಲಿದೆ. ನ.14 ಆದಿತ್ಯವಾರದಂದು ಬೆಳಗ್ಗೆ 10.00 ಗಂಟೆಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ಕಾರ್ಯಕ್ರಮ ನಡೆಯಲಿದೆ. ನ.15 ಸೋಮವಾರದಂದು ಬೆಳಗ್ಗೆ 10.00 ಗಂಟೆಗೆ ದೀಪೋಜ್ವಲನ, ಏಕಾಹ ಭಜನೆ, ರಾತ್ರಿ...
Loading posts...

All posts loaded

No more posts

error: Content is protected !!