- Saturday
- April 19th, 2025

ಕೊರೊನ ವೈರಸ್ ಭೀತಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 6012 ಗ್ರಾಮ ಪಂಚಾಯತ್ ಗಳಿದ್ದು ಇದರಲ್ಲಿ ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿ ಉಳಿದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿ ಜೂನ್ -ಜುಲೈರೊಳಗೆ ಅಂತ್ಯಗೊಳ್ಳಲಿದೆ. ಆದರೆ ಕೊರೊನ...

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕೋವಿಡ್-19 ಪರಿಹಾರ ಪ್ಯಾಕೇಜ್ ಆಗಿ ರೂ.5000 ಘೋಷಣೆ ಮಾಡಿದ್ದರು. ಇಂತಹ ಪರಿಹಾರದ ಹಣವನ್ನು ಹೇಗೆ ಪಡೆಯಬೇಕು ಎಂಬುದೇ ರಾಜ್ಯದ ಅನೇಕ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಪ್ರಶ್ನೆಯಾಗಿತ್ತು. ಇದೀಗ ಆ ಪ್ರಶ್ನೆ, ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ...

ಲಾಕ್ ಡೌನ್ ಅವಧಿಯಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಸಂಚರಿಸಿದ ಪಾಸ್ ಇಲ್ಲದ ವಾಹಗಳನ್ನು ಪೋಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ರಾಜ್ಯಾದ್ಯಂತ ಸುಮಾರು ೫೦ ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿತ್ತು.ಲಾಕ್ ಡೌನ್ ಸಡಿಲಗೊಂಡ ಬಳಿಕ ಸೂಕ್ತ ದಾಖಲೆ ನೀಡಿ ವಾಹನಗಳನ್ನು ಪಡೆದುಕೊಳ್ಳಲು ಸೂಚಿಸಿತ್ತು. ಆದರೇ ಇನ್ನೂ ಸುಮಾರು ೮೦೦೦ ವಾಹನಗಳ ಮಾಲಕರು ಬಾರದೇ ಪೋಲಿಸ್ ಠಾಣೆಯಲ್ಲಿ...

14 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಪೂರ್ಣಗೊಂಡು ಮೇ ೧೬ ಪ್ರಾಯೋಗಿಕ ಚಾಲನೆ ನೀಡಲಾಯಿತು. ಶಾಸಕ ಎಸ್. ಅಂಗಾರ ಬ್ರೇಕರ್ ಆನ್ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಬೆಳ್ಳಾರೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.ದಶಕಗಳ ಹಿಂದಿನ ಬೇಡಿಕೆಯಾದ ಮಾಡಾವು 110...

ಕೊರೊನಾ ವೈರಸ್ ಹೋಗಲಾಡಿಸಲು ವಿಧಿಸಿದ್ದ ಲಾಕ್ಡೌನ್ ಅನ್ನು ಸರಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಇದರ ಭಾಗವಾಗಿ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ವೈರಸ್ ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮಕ್ಕಾಗಿ ಸರ್ಕಾರ...
ಬೆಳ್ಳಾರೆಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ದನದ ಮಾಂಸ ಮಾಡುತ್ತಿದ್ದಲ್ಲಿಗೆ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ದನದ ಮಾಂಸ ವಶಪಡಿಸಿಕೊಂಡು ಹಾಗೂ ಮೂವರನ್ನು ಬಂಧಿಸಿದ ಘಟನೆ ಮೇ ೧೫ ರಂದು ನಡೆದಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ...

ಸುಬ್ರಹ್ಮಣ್ಯ ಠಾಣೆಯ ನೂತನ ಎ ಎಸ್ ಐ ಆಗಿ ಜಯರಾಮ ಪಿ. ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ನಗರ ಠಾಣೆಯಿಂದ ಭಡ್ತಿ ಹೊಂದಿ ಇಲ್ಲಿಗೆ ಬಂದಿರುತ್ತಾರೆ. ಮೂಲತಃ ವಿಟ್ಲದ ಪೂರ್ಲಪ್ಪಾಡಿ ನಿವಾಸಿಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಹಾಗೂ ವೀಲ್ಚೇರ್ ವಿತರಣೆ ಕಾರ್ಯಕ್ರಮವನ್ನು ಬೆಳ್ಳಾರೆ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿತರಿಸಲಾಯಿತು .ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ...
ಸುಳ್ಯದಲ್ಲಿ ಹಲವಾರು ವರ್ಷಗಳಿಂದ ಜನಪ್ರಿಯ ವೈದ್ಯರಾಗಿದ್ದ ಡಾ. ಸುಗುಣ ಗೌಡ ಮಿತ್ತಮಜಲು (೭೫)ಮೇ. ೧೫ ರಂದು ನಿಧನರಾದರು. ಮೃತರು ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಳ್ಯದಲ್ಲಿ ಕ್ಲಿನಿಕ್ ನಡೆಸಿ ಖ್ಯಾತ ವೈದ್ಯರಾಗಿದ್ದ ಅವರು ಇತ್ತೀಚೆಗೆ ಕೆ.ವಿ.ಜಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

All posts loaded
No more posts