ಮೋದಿ ಹುಟ್ಟುಹಬ್ಬದ ಅಂಗವಾಗಿ ಮಂಡಲ ಸಮಿತಿ ವತಿಯಿಂದ ವಿಶೇಷ ಪೂಜೆ

ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರ ನೇತೃತ್ವದಲ್ಲಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ,...

ಹರಿಹರ ಪಲ್ಲತ್ತಡ್ಕ : ಬೃಹತ್ ಲಸಿಕಾ ಅಭಿಯಾನ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನವನ್ನು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಪಿಡಿಓ ಪುರುಷೋತ್ತಮ ಮಣಿಯಾನ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ನೋಡೆಲ್ ಅಧಿಕಾರಿ ಮಣಿಕಂಠನ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮೋಹಿನಿ, ಸುಪ್ರಿತಾ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಪಂಚಾಯತ್ ಸಿಬ್ಬಂದಿಗಳು...
Ad Widget

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸಂಪಾಜೆ ಆಯ್ಕೆ

2020-21ನೆ ಸಾಲಿನ ಗಾಂಧಿ ಗ್ರಾಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಗೆ ಪುರಸ್ಕಾರ ಲಭಿಸಿದೆ. ಜಿ.ಪಂ. ಅಧಿಕಾರಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸಿ ಪುರಸ್ಕಾರ ಕ್ಕೆ ಗ್ರಾ.ಪಂ. ಗಳನ್ನು ಆಯ್ಕೆ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಳದ ನೌಕರರ 6ನೇ ವೇತನ ಮಂಜೂರಾತಿ ಕಡತಕ್ಕೆ ಸಹಿ – 122 ಸಿಬ್ಬಂದಿಗಳ ಖಾಯಂಮಾತಿ

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರ ನೇತೃತ್ವದ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿತು. ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 284 ನೌಕರರಿಗೆ 6ನೇ ವೇತನ ನೀಡಲು ಸಚಿವ ಎಸ್.ಅಂಗಾರ ಅವರು...

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಜೀವನ್ ಕುಮಾರ್ ತಳೂರು

ಇತ್ತೀಚೆಗೆ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಜೀವನ್ ಕುಮಾರ್ ಟಿ. ಇವರು ಪತ್ರಿಕೆ-2 ರಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇವರು ತಳೂರು ಕುಶಾಲಪ್ಪ ಗೌಡ ಹಾಗೂ ಪುಷ್ಪಾವತಿ ರವರ ಪುತ್ರ. ಇವರು 2015 ರಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ-1 ರಲ್ಲಿ ಅರ್ಹತೆ ಪಡೆದಿದ್ದರು.

ಐವರ್ನಾಡು : ಬೃಹತ್ ಲಸಿಕಾ ಅಭಿಯಾನ

ಐವರ್ನಾಡು ಗ್ರಾ.ಪಂ. ಹಾಗೂ ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯಿತು.ಈ ಸಂದರ್ಭ ಐವರ್ನಾಡು ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಪಿಡಿಒ ಶ್ಯಾಂಪ್ರಸಾದ್, ಆರೋಗ್ಯ ಇಲಾಖೆ ಸಿಬ್ಬಂದಿ ಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕೊಡಿಯಾಲ : ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

ಕೊಡಿಯಾಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಾ.ಜಯರಾಮ ರೈ, ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ, ಬಿಜೆಪಿ ಪ್ರಮುಖರಾದ ಲೋಹಿತ್ ಪೆರಿಯಾನ, ಹರ್ಷನ್ ಕೆ.ಟಿ.ಕಲ್ಪಡ, ಚೇತನ್ ಕೊಡಿಯಾಲ, ಬಾಸ್ಕರ ಗೌಡ ಕಲ್ಪಡ, ಹರೀಶ್ ಆರ್ವಾರ, ಮನೋಹರ ಕಲ್ಪಡ, ಆನಂದ...

ಮಡಪ್ಪಾಡಿ : ಬೃಹತ್ ಲಸಿಕಾ ಅಭಿಯಾನ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆಯವರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಲಸಿಕಾ ವಿತರಣಾ ಅಭಿಯಾನದಲ್ಲಿ ಕೈ ಜೋಡಿಸಿದರು.

ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಕಲ್ಕುಡ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸುಳ್ಯ ಗಾಂಧಿನಗರ ಕಲ್ಕುಡ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮೋದಿಯವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು ಎಂದು ಪ್ರಾರ್ಥಿಸಲಾಯಿತು. ಧರ್ಮದರ್ಶಿ ಉಮೇಶ್ ವಾಗ್ಲೆ ಪ್ರಾರ್ಥನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಸಮಿತಿಯ ಸದಸ್ಯರು ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಮೊಕ್ತೇಸರರಾದ ಪಿ.ಕೆ ಉಮೇಶ್,...

ವಳಲಂಬೆ : ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಕೆ.ಬೆಳ್ಯಪ್ಪ ಗೌಡ, ಎ.ವಿ.ತೀರ್ಧರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಅರ್ಚಕರಾದ ಪರಮೇಶ್ವರ ಭಟ್, ಮಹಾಬಲೇಶ್ವರ ಭಟ್ ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.(ಚಿತ್ರ :...
Loading posts...

All posts loaded

No more posts

error: Content is protected !!