- Thursday
- August 13th, 2026
ಶ್ರೀ ದುರ್ಗಾ ಸ್ತ್ರೀ ಶಕ್ತಿ ಗುಂಪು ವಳಲಂಬೆ ಇದರ ಸದಸ್ಯೆ ಶ್ರೀಮತಿ ಭಾಗೀರಥಿ ಯವರ ಮಗಳು ಅಂತಿಮ ಬಿ.ಕಾಂ ಓದುತ್ತಿರುವ ಕು. ನವ್ಯಶ್ರೀ ಇವಳು ಅನಾರೋಗ್ಯದಿಂದ ಇದ್ದು ಹೆಚ್ಚಿನ ಚಿಕಿತ್ಸೆ ಬೇಕಾಗಿರುವುದರಿಂದ ಗುಂಪಿನ ವತಿಯಿಂದ ರೂ. 5000 ವನ್ನು ಸದಸ್ಯೆ ಭಾಗೀರಥಿ ಯವರಿಗೆ ನೀಡಲಾಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಸೆ.01 ರಂದು ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಧೀಕ್ಷಕ ಮಂಜುನಾಥ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಹಾಗೂ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಗುತ್ತಿಗಾರು ಇದರ ವತಿಯಿಂದ ಸಚಿವ ಎಸ್.ಅಂಗಾರ ಅವರನ್ನು ಅವರ ನಿವಾಸದಲ್ಲಿ ಬೇಟಿಯಾಗಿ ಟ್ರಸ್ಟ್ ವತಿಯಿಂದ ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕ ಸೇವೆಗೆ ಅಗತ್ಯವಾಗಿರುವ ಅಂಬ್ಯುಲೆನ್ಸ್ ಖರೀದಿಸಿ ಸೇವೆ ನೀಡುವ ವಿಚಾರವಾಗಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ...
ಬೆಳ್ಳಾರೆ: ಕ್ಷಯ ಮುಕ್ತ ಭಾರತ ರಂಗ ತರಬೇತಿ- ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಹಾಗೂ ಮುಖಾಮುಖಿ ಕಾರ್ಯಕ್ರಮ
ಜೇಸಿಐ ಬೆಳ್ಳಾರೆ,ಜೂನಿಯರ್ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ 'ಕ್ಷಯ ಮುಕ್ತ ಭಾರತ' ಕಿರು ಚಿತ್ರದ ರಂಗ ತರಬೇತಿಯ 9ನೇ ದಿನದ ತರಬೇತಿ ಕಾರ್ಯಕ್ರಮದಲ್ಲಿ ಕ್ಷಯ ರೋಗಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮ ಮತ್ತು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ...
ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿತ್ತು. ಬಹುಮಾನ ವಿತರಣಾ ಕಾರ್ಯಕ್ರಮ ಆ.31 ಪೋಷಕರ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ದನ. ಎ , ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬುಗೌಡ , ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ...
ಬಳ್ಪ: ಆದರ್ಶ ಗ್ರಾಮ ಬಳ್ಪದ ಎಡೋಣಿ-ಪಾದೆ ಬಳಿಯಲ್ಲಿ ಉದ್ಘಾಟನೆಗೊಂಡ ನೂತನ ಜಿಯೋ ಟವರ್ ಮೂಲಕ ಮೊಬೈಲ್ ಸಿಗ್ನಲ್ ಲಭ್ಯವಾಗಬಹುದು ಎಂದು ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ಈಗ ನಿರಾಸೆಯಾಗಿದೆ. ಉದ್ಘಾಟನೆಗೊಂಡ ಜೊಯೋ ಟವರ್ ಮೂಲಕ ಬಳ್ಪ ಪೇಟೆಯಲ್ಲಿಯೇ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲ ಮಾತ್ರವಲ್ಲ ತೀರಾ ಗ್ರಾಮೀಣ ಪ್ರದೇಶ ಎಂದು ಗುರುತಿಸಲಾಗಿದ್ದ ಎಡೋಣಿ-ಪಾದೆ ಪರಿಸರ ದಿಂದ ಸ್ವಲ್ಪ ದೂರದಲ್ಲಿಯೇ ಇರುವ...
ಸುಳ್ಯ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಚಂದ್ರಕಾಂತ್ ಎಂ.ಆರ್. ಇವರಿಗೆ ಉಪತಹಶೀಲ್ದಾರ್ ಆಗಿ ಬಡ್ತಿ ದೊರೆತಿದ್ದು ಅವರು ಪಂಜ ನಾಡಕಚೇರಿಗೆ ವರ್ಗಾವಣೆಗೊಂಡಿದ್ದಾರೆ.2001ರಲ್ಲಿ ಗ್ರಾಮ ಕರಣಿಕರ ಸರಕಾರಿ ಸೇವೆಗೆ ಸೇರಿದ ಇವರು ಆರಂಭದಲ್ಲಿ ಕಲ್ಮಡ್ಕ ಗ್ರಾಮ ಸಹಾಯಕರಾಗಿ, ಆ ಬಳಿಕ ಗುತ್ತಿಗಾರು, ಎಡಮಂಗಲ, ಕೊಲ್ಲಮೊಗ್ರ, ಮಂಡೆಕೋಲು, ಕನಕಮಜಲು, ನಾಲ್ಕೂರು, ಸುಳ್ಯ ಕಸಬಾ ಗ್ರಾಮಗಳಲ್ಲಿ ಸೇವೆಸಲ್ಲಿಸಿದರು. 2015ರಲ್ಲಿ...
ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ಮತ್ತು 2020-21ರ ಎರಡು ಅವಧಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಹರೀಶ ಕಡಪಳ ಅವರನ್ನು ಆ. 31 ರಂದು ಸನ್ಮಾನಿಸಲಾಯಿತು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದಾಗ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸುವಲ್ಲಿ ಮತ್ತು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ...
ಸುಳ್ಯ ತಾಲೂಕಿನಲ್ಲಿ ಸೆ. 1ರಂದು ಲಸಿಕೆ ವಿತರಣೆಗೆ ಮೆಘಾ ಕ್ಯಾಂಪ್ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ವಿವಿಧ ಕೇಂದ್ರದಲ್ಲಿ ಒಟ್ಟು 6000 ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.
ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಶ್ರೀಮತಿ ರಾಜೀವಿ ಎಂ. ಸುದೀರ್ಘ ಸೇವೆ ಸಲ್ಲಿಸಿ ಆ.31 ರಂದು ಸ್ವಯಂ ನಿವೃತ್ತರಾದರು. 1985 ರಿಂದ ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕದಲ್ಲಿ ಸೇವೆ ಆರಂಭಿಸಿದ ಇವರು ಒಂದೇ ಶಾಲೆಯಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಶಾಲಾ ಜೀವನದಲ್ಲಿ ವಾಲಿಬಾಲ್,ಬ್ಯಾಡ್ಮಿಂಟನ್, ತ್ರೋಬಾಲ್,ಗುಂಡೆಸೆತ,ಚಕ್ರ ಎಸೆತ, ಮುಂತಾದ ಕ್ರೀಡಾ...
Loading posts...
All posts loaded
No more posts
