- Thursday
- August 13th, 2026
ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ನೂತನ ಎಸ್ಡಿಎಂಸಿ ಇತ್ತೀಚೆಗೆ ರಚನೆಗೊಂಡಿತು. ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ., ಗ್ರಾ.ಪಂ. ಸದಸ್ಯರುಗಳಾದ ಗೀತಾ ಗೋಪಿನಾಥ್ ಬೊಳುಬೈಲು, ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.ನೂತನ ಎಸ್ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಕುಂಬಚೋಡು, ಸದಸ್ಯರುಗಳಾಗಿ ಭವ್ಯ, ದುಗ್ಗಪ್ಪ, ವೇದಾವತಿ, ಭಾರತಿ, ಸರೋಜಿನಿ, ಜಯಚಂದ್ರ, ಗೀತಾ ಚಂದ್ರಹಾಸ, ತೀರ್ಥರಾಮ, ಅನಿತಾ,...
ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ...
ಜಾಲ್ಸೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನವಚೇತನ ಯುವಕ ಮಂಡಲ ವತಿಯಿಂದ 100 ಅಡಿಕೆ ಗಿಡ ನಾಟಿ ಮಾಡುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲರವರು ಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಗಿಡ ನಾಟಿ ಆದ ಬಳಿಕ ಹನಿ ನೀರಾವರಿ ಪದ್ಧತಿಯಲ್ಲಿ ಪೈಪ್ ಲೈನ್...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ |ಮನೋಜ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಎಂ.ಬಾಬು,...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ...
ಅರಂಬೂರಿನ ಬದರ್ ಜುಮಾ ಮಸೀದಿಯ ವಾಣಿಜ್ಯ ಸಂಕೀರ್ಣದಲ್ಲಿ ಅಲ್ ಅಮೀನ್ ಯೂತ್ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಛೇರಿ ಉದ್ಘಾಟನೆ ಹಾಜಿ ಅಬ್ದುಲ್ ರಹಿಮಾನ್ ನೆರವೇರಿಸಿದರು. ಮಸೀದಿ ಖತೀಬರಾದ ಬಹು| ಮೂಸ ಹಾರಿಸ್ ಮಖ್ದೂಮಿ ಕುಕ್ಕಾಜೆ ಉಸ್ತಾದರು ದುವಾಃ ನೇತೃತ್ವ ನೀಡಿ ಸಂಘಟನೆಗೆ ಶುಭಾಶಯ ತಿಳಿಸಿದರು.ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಅಕ್ಬರಲಿ...
ಶೇಣಿ ಶ್ರೀ ಕೖಷ್ಣ ಸೇವಾ ಸಮಿತಿಯ ವತಿಯಿಂದ 19ನೇ ವರ್ಷದ ಶ್ರೀ ಕೖಷ್ಣ ಜನ್ಮಾಷ್ಠಮಿಯನ್ನು ಆ.30ರಂದು ಆಚರಿಸಲಾಯಿತು. ಈ ಪ್ರಯುಕ್ತ ಶೇಣಿ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಕಲಾವಿಕಾಸ (ರಿ.) ಕಳಂಜ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಾಂಕೇತಿಕವಾಗಿ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ ಲಕ್ಷೀಶ್ ರೈ ಗುರಿಕ್ಕಾನ, ಗೌರವಾಧ್ಯಕ್ಷರಾದ...
ಕರ್ನಾಟಕ ರಕ್ಷಣಾ ವೇದಿಕೆ ಸುಳ್ಯ ಘಟಕ ವತಿಯಿಂದ ಆ.29 ರಂದು ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಟ್ರಕ್ ಚಾಲಕರಿಗೆ ಮತ್ತು ಬಡ ಕಾರ್ಮಿಕರಿಗೆ ಊಟದ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಗೌರವಾಧ್ಯಕ್ಷ ಅಶೋಕ್ ಕುಮಾರ್ ಮತ್ತು ಸದಸ್ಯರಾದ ರಾಮಚಂದ್ರ, ರುಕ್ಮಯ್ಯ, ಪುರುಷೋತ್ತಮ, ಕೃಷ್ಣಕುಮಾರ್ ಕೇರ್ಪಳ, ಸುರೇಶ್ ಬೆಟ್ಟಂಪಾಡಿ, ಮೋಹನ್ ಕಲ್ಲಗದ್ದೆ, ಯೋಗೀಶ್...
ಬೆಳ್ಳಾರೆ: ಕ್ಷಯ ಮುಕ್ತ ಭಾರತ ಕಿರುಚಿತ್ರ ತರಬೇತಿ ಕೇಂದ್ರಕ್ಕೆ ಸಚಿವ ಎಸ್ ಅಂಗಾರ ಭೇಟಿ- ಶಿಬಿರಾರ್ಥಿಗಳೊಂದಿಗೆ ಸಂವಾದ
ಜೇಸಿಐ ಬೆಳ್ಳಾರೆ,ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ಜಂಟಿ ಆಶ್ರಯದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ರಂಗ ತರಬೇತಿಗೆ ಕರ್ನಾಟಕ ಸರ್ಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಆ.29ರಂದು ಭೇಟಿ...
Loading posts...
All posts loaded
No more posts
