- Thursday
- August 13th, 2026
ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆ ಇದರ ವತಿಯಿಂದ " ಶ್ರೀ ಕೃಷ್ಣ ಜನ್ಮಾಷ್ಟಮಿ" ಕಾರ್ಯಕ್ರಮ ಆ. 29ರಂದು ಪೆರುವಾಜೆಯ ಯುವಕ ಮಂಡಲದ ವೇದಿಕೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕೆಲವು ಸ್ಪರ್ಧೆಯನ್ನು ಆನ್ಲೈನ್ ಮುಖಾಂತರ ನಡೆಸಲಾಯಿತು. ಕಾರ್ಯಕ್ರಮವನ್ನು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ...
ಕ್ರೀಡಾ ಭಾರತೀ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಆ.29 ರಂದು ಸುಳ್ಯ ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಕ್ರೀಡಾ ಭಾರತೀ ಅಧ್ಯಕ್ಷರಾದ ಎ.ಸಿ.ವಸಂತ ಅಮಚೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ|ಹರಿಪ್ರಸಾದ್...
ದರ್ಖಾಸ್ತು ಸ.ಹಿ.ಪ್ರಾ.ಶಾಲೆಗೆ ಕರ್ನಾಟಕ ಸರ್ಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹರೀಶ್.ಡಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಹಾಗೂ ಶಿಕ್ಷಕ ವೃಂದದವರು,...
ಮಾವಿನಕಟ್ಟೆ ಹಿರಿಯ ಪ್ರಾಥಮಿಕ ಶಾಲಾ ಅವರಣವನ್ನು ಆ.29 ರಂದು ಶ್ರಮದಾನದ ಮೂಲಕ ಸುಚಿಗೊಳಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿ ಮತ್ತು ಊರವರ ಸಹಕಾರದಲ್ಲಿ ನಡೆದ ಶ್ರಮದಾನದ ಉಸ್ತುವಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ...
ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ ಸಭೆಯು ಆ.26ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಎಸ್.ಡಿ.ಎಂ.ಸಿ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರೀಶ್.ಡಿ, ಉಪಾಧ್ಯಕ್ಷೆಯಾಗಿ ಭವಾನಿ, ಸದಸ್ಯರಾಗಿ ಗೀತಾ, ಸುಜಾತ, ಸಂಜೀವ, ಹಸೀನಾ, ನುಸೈಬಾ, ಜಯಶ್ರೀ, ಬಾಲಕೃಷ್ಣ, ಗಿರಿಜ, ಸುಜಾತ.ಬಿ, ಸುಜಾತ, ಕಲಾ, ಜಯಂತಿ, ಜಾನ್...
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...
ವೈಯಕ್ತಿಕ ದ್ವೇಷವನ್ನಿಟ್ಟುಕೊಂಡು ತನ್ನ ಸ್ವಾರ್ಥಕ್ಕಾಗಿ ಸಮಾಜಕ್ಕೆ ಊರಿಗೆ ಕೇಡು ಬಯಸುವವರಿಂದ ಗುತ್ತಿಗಾರಿನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಒಗ್ಗಟ್ಟಾಗಿ ಈ ಮೊದಲು ಹೋರಾಟ ನಡೆಸಿದ್ದೇವೆ. ಇನ್ನೂ ಅಂತಹ ಸಂದರ್ಭ ಬಂದಾಗ ರಾಜಕೀಯ ರಹಿತ ಹೋರಾಟಕ್ಕೆ ಸಿದ್ಧ ಎಂದು ಮಾಜಿ ಜಿ.ಪಂ.ಸದಸ್ಯ ಭರತ್ ಮುಂಡೋಡಿ ಹೇಳಿದರು.ಅವರು ಇಂದು ಗುತ್ತಿಗಾರಿನಲ್ಲಿ ನಡೆದ ನಾಗರಿಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಗುತ್ತಿಗಾರು ಗ್ರಾಮವನ್ನು...
ದೇಶದ ಏಳಿಗೆಗೆ ಜನರ ಸಹಕಾರ ಅಗತ್ಯವಾಗಿದೆ. ಅವಶ್ಯಕವಾಗಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರದ ಗಮನಕ್ಕೆ ತರಬೇಕು. ಆಗ ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿಯನ್ನು ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಅರಿವು ನಮಗಿದೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು.ಅಜ್ಜಾವರದ ಮೇದಿನಡ್ಕದಲ್ಲಿ ಆ. 29 ರಂದು ನೂತನ ಅಂಗನವಾಡಿ ಯನ್ನು...
ಗೃಹರಕ್ಷಕ ದಳದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಮುಖ್ಯ ಕಮಾಂಡರ್ ಮುರಲಿ ಮೋಹನ ಚೋಂತಾರು, ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಹಾಗೂ ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಗೃಹರಕ್ಷಕ ದಳದ ವತಿಯಿಂದ ಸಮ್ಮಾನಿಸಲಾಯಿತು. ಸಚಿವ ಅಂಗಾರರು ಸುಳ್ಯ ಹಾಗೂ ಸುಬ್ರಹ್ಮಣ್ಯದ ಗೃಹರಕ್ಷಕ ದಳ ಕಚೇರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು.
Loading posts...
All posts loaded
No more posts
