ಕಮಿಲ : ಪಂಚಶ್ರೀ ಪ್ರಗತಿಬಂಧು ಸಂಘ ರಚನೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯದ ಕಮಿಲ ಒಕ್ಕೂಟದ ಆಜಡ್ಕ ಎಂಬಲ್ಲಿ ನೂತನವಾಗಿ ಪಂಚಶ್ರೀ ಪ್ರಗತಿಬಂಧು ಸಂಘ ವನ್ನು ಒಕ್ಕೂಟದ ಅಧ್ಯಕ್ಷರಾದ ಕೇಶವ ಗೌಡ ಕಾಂತಿಲ ಉದ್ಘಾಟಿಸಿದರು. ಸಂಘದ ದಾಖಲಾತಿಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಶಾರದಾ ಹಾಗೂ ಶ್ರೀಮತಿ ಲತಾ ಕುಮಾರಿ ಹಸ್ತಾಂತರಿಸಿದರು. ಈ ಸಂದರ್ಭ...

ಸುಳ್ಯ : ಗ್ರಂಥಾಲಯ ಮೇಲ್ವಿಚಾರಕರ ಸಭೆ

ಸುಳ್ಯ ತಾಲೂಕು ಗ್ರಂಥಾಲಯ ಮೇಲ್ವಿಚಾರಕರ ಸಭೆಯ ಆ 27ರಂದು ತಾಲೂಕು ಪಂಚಾಯತ್ ಮಿನಿ ವಿಧಾನಸೌಧದಲ್ಲಿ ನಡೆಯಿತು. ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ ಮತ್ತು ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ರವರು ಗ್ರಂಥಾಲಯದ ಡಿಜಿಟಲೀಕರಣ ಮತ್ತು ಬೇಕನ್ ಗ್ರಂಥಾಲಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಸುಳ್ಯ ತಾಲೂಕಿನ 10 ಗ್ರಂಥಾಲಯವನ್ನು ತಕ್ಷಣ ಡಿಜಿಟಲೀಕರಣ ಗೊಳಿಸುವಂತೆ ಕಾರ್ಯಪ್ರವರ್ತರಾಗಲು ತಿಳಿಸಿದರು. ತಾಲೂಕಿನ 25...
Ad Widget

ವಿಶ್ವಾಸವಿಲ್ಲದ ವ್ಯವಸ್ಥೆಯ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುತ್ತಾರೆ. ಪ್ರತಿಯೊಬ್ಬರೂ ತಮ್ಮ ತಮ್ಮ ಕಾರ್ಯಕ್ಷೇತ್ರಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು- ಸಚಿವ ಎಸ್.ಅಂಗಾರ

ಮಾದಕ ದ್ರವ್ಯ ಜಾಲ ಹಾಗೂ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಇಂಥ ಕೃತ್ಯಗಳನ್ನು ನಾವು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ . ಇದನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಎಸ್ ಅಂಗಾರ ಅವರು ಹೇಳಿದರು. ಸುಳ್ಯದ ಯುವಜನ ಸಂಯುಕ್ತಮಂಡಳಿಯ ಸಭಾಂಗಣದಲ್ಲಿ ನಡೆದ ನೂತನ ಗೃಹರಕ್ಷಕ ದಳದ ಕಚೇರಿಯ...

ಸುಬ್ರಹ್ಮಣ್ಯದ ಜನಾನುರಾಗಿ ವೈದ್ಯ ಬಿ.ಕೆ.ಭಟ್ ನಿಧನ

ಸುಬ್ರಹ್ಮಣ್ಯದ ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಪ್ರಖ್ಯಾತ ವೈದ್ಯ ಬಿ.ಕೆ.ಭಟ್ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಸುಬ್ರಹ್ಮಣ್ಯದಲ್ಲಿ ಹಲವಾರು ವರ್ಷಗಳಿಂದ ನೆಲೆಸಿದ್ದ ಇವರು ಭಾಗದ ಜನರಿಗೆ ಉತ್ತಮ ಚಿಕಿತ್ಸೆ ನೀಡಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ , ಪುತ್ರ, ಸೊಸೆ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ.

ಗೌಡ ಸಂಸ್ಕೃತಿ, ಆಚಾರ-ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕು – ಕಜೆಗದ್ದೆ

ಗೌಡ ಜನಾಂಗದ ಸಂಸ್ಕೃತಿ, ಆಚಾರ -ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕಿದ್ದರೆ ಯುವ ಜನಾಂಗ ಅದರತ್ತ ಆಕರ್ಷಿತವಾಗುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅಕಾಡೆಮಿಯ ವತಿಯಿಂದ ನಡೆಯುವ ಶಿಬಿರಗಳಲ್ಲಿ ಯುವಕ ಯುವತಿಯರು ಪಾಲ್ಗೊಂಡು ಸಂಸ್ಕೃತಿ ಆಚಾರ ವಿಚಾರಗಳನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹೇಳಿದ್ದಾರೆ‌.  ಅವರು ಮಂಡೆಕೋಲು ಗ್ರಾ.ಪಂ...

ಬೆಳ್ಳಾರೆಯಲ್ಲಿ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ, ಸಭಾ ಕಾರ್ಯಕ್ರಮ

ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್(ರಿ.) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಆ.27 ರಂದು ನಡೆಯಿತು. ಬೆಳ್ಳಾರೆ ದರ್ಗಾ ಶರೀಫಿನಲ್ಲಿ ಝಿಯಾರತ್ ನಡೆಸಿ ಆ ಬಳಿಕ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿತು. ಟ್ರಸ್ಟ್ ನ ಅಧ್ಯಕ್ಷ ಯು ಹೆಚ್ ಅಬೂಬಕ್ಕರ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳಲಿ ಕೇಂದ್ರ...

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಆ.27 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮುಂದಿನ ಕಾರ್ಯಚಟುವಟಿಕೆಗಳ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಸಂಚಾಲಕರಾಗಿ ಸೌಜನ್ಯ ಭಟ್ ಅವರನ್ನು...

ಗುತ್ತಿಗಾರು ಬಿ. ಎಂ. ಎಸ್. ಅಟೋ ಘಟಕ ವತಿಯಿಂದ ಮಾದರಿ ಕಾರ್ಯಕ್ರಮ – ಸನ್ಮಾನ, ದಿನಸಿ ಕಿಟ್ ವಿತರಣೆ

ಗುತ್ತಿಗಾರು ಸ. ಪ. ಪೂ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ ಈ ಬಾರಿಯ 10ನೇ ಪರೀಕ್ಷಾ ಫಲಿತಾಂಶದಲ್ಲಿ 623ಅಂಕ ತೆಗೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ನಿಶ್ಮಿತಾ ಕೆ. ಜಿ. ಹಾಗೂ 579 ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದ ಅನುಷಾ ಎಂ. ವಿ. ಮೋಟ್ನೂರ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅನಾರೋಗ್ಯ ದಿಂದ ಬಳಲುತ್ತಿರುವ...

ಹರಿಹರ ಪಲ್ಲತ್ತಡ್ಕ :- ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದ.ಕ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್" ದ ಪ್ರಯುಕ್ತ ನಾಯಿಗಳಿಗೆ "ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಹಾಗೂ ಮಾಹಿತಿ ಶಿಬಿರ" ಆ.27 ರಂದು ನಡೆಯಿತು.ಈ ಕಾರ್ಯಕ್ರಮವನ್ನು ಹರಿಹರ ಪಲ್ಲತ್ತಡ್ಕ...

ವಳಲಂಬೆ : ಜೈ ಮಾರುತಿ ಪ್ರಗತಿಬಂಧು ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ವಳಲಂಬೆಯ ಕಾಜಿಮಡ್ಕದಲ್ಲಿ ಜೈಮಾರುತಿ ಪ್ರಗತಿ ಬಂಧು ಸಂಘವು ಉದ್ಘಾಟನೆಗೊಂಡಿತು. ವಳಲಂಬೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಲಿಂಗಪ್ಪ ನಾಯ್ಕ ಕಾಜಿಮಡ್ಕ ದೀಪ ಬೆಳಗಿ ಸಂಘವನ್ನು ಉದ್ಘಾಟಿಸಿ, ಶುಭಹಾರೈಸಿದರು. ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ ರವರು ಸಂಘದ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿ ದಾಖಲೆಯನ್ನು...
Loading posts...

All posts loaded

No more posts

error: Content is protected !!