- Thursday
- August 13th, 2026
ಕುಂಬ್ರದ ಮಂದಾರ ಸಂಕೀರ್ಣದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ರಸಗೊಬ್ಬರ ಮತ್ತು ಕ್ರಿಮಿನಾಶಕ ವಿತರಕ ಕೇಂದ್ರ ಶ್ರೀ ದೇವಿ ಎಂಟರ್ಪ್ರೈಸಸ್ ಆ.24ರಂದು ಶುಭಾರಂಭಗೊಂಡಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಕಛೇರಿ ಉದ್ಘಾಟಿಸಿ ಮಾತನಾಡಿ, ರೈತರಿಗೆ ಬೇಕಾದ ಎಲ್ಲಾ ರೀತಿಯ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಪೂರೈಸುವ ಗ್ರಾಮೀಣ ಭಾಗದ ಒಂದು ಉತ್ತಮ...
ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಇವರು ಬಿಕಾಂ ಪದವಿಧರೆಯಾಗಿರುತ್ತಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ರುಕ್ಮಯ್ಯ ಗೌಡರ ಪುತ್ರ ಶ್ರೀನಿವಾಸ ಗೌಡ ಎಂಬವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಇವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜು.೧೫ರಂದು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಇವರಿಗೆ ಬ್ರೈನ್ಟ್ಯೂಮರ್ ಎಂದು ತಿಳಿದುಬಂದಿದೆ. ಸುಮಾರು ೧ ತಿಂಗಳಿನಿಂದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ ಲಕ್ಷಾಂತರ...
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ...
ಐವರ್ನಾಡು: ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಐವರ್ನಾಡು ಗ್ರಾಮ ಪಂಚಾಯತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಐವರ್ನಾಡು ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವರ ಸಹಯೋಗದಲ್ಲಿ “ಆಚಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಆ.23 ರಂದು ಐವರ್ನಾಡಿನಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ...
ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಹಾಗು ಮೇಲುಸ್ತುವಾರಿ ಸಮಿತಿ ಸಭೆ ಮತ್ತು ಸಮಿತಿಯ ಪುನರ್ ರಚನೆ ಕಾರ್ಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುದರ್ಶನ್ ಪಾತಿಕಲ್ಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ಕಣಕ್ಕೂರು, ಶಾಲಾ ಮುಖ್ಯ ಅಧ್ಯಾಪಕಿ ಯಶೋದ, ಅಂಗನವಾಡಿ ಶಿಕ್ಷಕಿ ರತ್ನಾವತಿ ವಾಲ್ತಾಜೆ ಉಪಸ್ಥಿತರಿದ್ದರು.ನೂತನ ಸಮಿತಿಯ ಅಧ್ಯಕ್ಷರಾಗಿ ಸುದರ್ಶನ್ ಪಾತಿಕಲ್ಲು...
ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕಣ್ವ ವೃಕ್ಷ ಸಂವರ್ಧನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂರ ಎಂಟು (108) ಬಿಲ್ವಪತ್ರೆ ಗಿಡಗಳನ್ನು ಪೂಜಾಕೈಂಕರ್ಯ ನೆರವೇರಿಸಿ ನೆಡಲಾಯಿತು.ಇದೇ ಸಂದರ್ಭ ಟ್ರಸ್ಟ್ ನ ಅಧ್ಯಕ್ಷರಾದ ಪುರುಷೋತ್ತಮ ಕಿರ್ಲಾಯ, ಕಾರ್ಯದರ್ಶಿ ಪ್ರದೀಪ್ ರೈ ಪನ್ನೆ, ಡಾ.ಯಶೋಧ ರಾಮಚಂದ್ರ, ಅಡ್ಯಡ್ಕ ಕರುಣಾಕರ ಮತ್ತಿತರ ಸದಸ್ಯರು, ದೇವಸ್ಥಾನ ಮೊಕೇಸ್ತರು, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕುಡೇಕಲ್ಲು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಸುಳ್ಯ ತಾಲೂಕು ಗುತ್ತಿಗಾರು ವಲಯದ ಗುತ್ತಿಗಾರಿನ ಚಣಿಲದಲ್ಲಿ "ದೇವಿ ಕೃಪಾ" ಹೆಸರಿನ ಪ್ರಗತಿ ಬಂಧು ಸಂಘವನ್ನು ವಲಯದ ಮೇಲ್ವಿಚಾರಕರಾದ ಶ್ರೀ ಮುರಳೀಧರ ರವರು ದೀಪ ಬೆಳಗಿಸಿ ಉದ್ಘಾಟಿಸಿ ಐದು ಮಂದಿಯೂ ಏಕ ಮನಸ್ಸಿನಿಂದ ಜತೆಗೂಡಿ ನಿಮ್ಮ ವೈಯಕ್ತಿಕ ಅಭಿವೃದ್ಧಿ ಮತ್ತು...
ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್( ರಿ) ಅರಂತೋಡು ಇದರ 44 ನೇ ವಾರ್ಷಿಕ ಮಹಾಸಭೆಯು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಆ.8ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಎಸ್.ಎಮ್.ಅಬ್ದುಲ್ ಮಜೀದ್ ವಹಿಸಿದ್ದರು. ಅರಂತೋಡು ಜುಮ್ಮಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೆರವೇರಿಸಿ ಉದ್ಘಾಟಿಸಿದರು....
Loading posts...
All posts loaded
No more posts
