- Thursday
- August 13th, 2026
ಕಲ್ಚರ್ಪೆ ಸಿರಿಕುರಲ್ ನಗರದಲ್ಲಿರುವ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ನಾಗನ ಸಾನಿಧ್ಯದಲ್ಲಿ ನಾಗರಪಂಚಮಿ ಪ್ರಯುಕ್ತ ಪರಿಸರದ ಭಕ್ತಾದಿಗಳಿಂದ ನಾಗರಪಂಚಮಿ ಆಚರಣೆ ನಡೆಯಿತು. ನಾಗರಪಂಚಮಿ ಪ್ರಯುಕ್ತ ಅರ್ಚಕರಾದ ಶ್ರೀವರ ಭಟ್ ರವರ ನೇತೃತ್ವದಲ್ಲಿ ನಾಗನಿಗೆ ಕ್ಷೀರಾಭಿಷೇಕ, ಎಳನೀರಿನ ಅಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗೋಕುಲ್ ದಾಸ್,...
ಭಾರತ ಸ್ವಾತಂತ್ರ್ಯ ಪಡೆಯುವುದಕ್ಕೆ ಅದೆಷ್ಟೋ ಹಿಂದೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಈ ಜಿಲ್ಲೆಗೆ 13 ದಿನಗಳ ಸ್ವಾತಂತ್ರ್ಯದ ಸವಿಯನ್ನು ನೀಡಿದ ಕೀರ್ತಿ ನಮ್ಮ ಸುಳ್ಯದ ಹಿರಿಯರಿಗೆ ಸಲ್ಲುತ್ತದೆ ಎನ್ನುವುದು ನಮಗೆ ಹೆಮ್ಮೆಯ ವಿಚಾರ. ಅವರ ತ್ಯಾಗ, ಬಲಿದಾನಗಳನ್ನು ಶಾಶ್ವತವಾಗಿ ನೆನಪಿಸುವುದಕ್ಕಾಗಿ ಬೆಳ್ಳಾರೆಯಲ್ಲಿ ಮತ್ತು ಉಬರಡ್ಕದ ಕೆದಂಬಾಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ಸ್ಮಾರಕಗಳನ್ನು ನಿರ್ಮಿಸಲು ಕಟಿಬದ್ಧನಾಗಿದ್ದೇನೆ...
2021 ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕು|ಸಂಜನಾ.ಬಿ.ಎಸ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸುಳ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಂಜೀವ ಗೌಡ.ಬಿ ಹಾಗೂ ಶಿಕ್ಷಕಿ ಶ್ರೀಮತಿ ನಿರ್ಮಲಾರವರ ಪುತ್ರಿ.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳಿಗೆ ಸೂಚಿಸಿದಂತೆ ಸರ್ವೇ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ಶೀಘ್ರವಾಗಿ ನಡೆಸಬೇಕು ಹಾಗೂ ಕಡಬ ತಾಲೂಕಿನ ಅಕ್ರಮ ಸಕ್ರಮ ಕಡತಗಳನ್ನು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತರಕ್ತದಾನ ಶಿಬಿರವು 15- 8-- 2021ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇಲ್ಲಿಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ)...
ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು.ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಕಳಂಜ ಗ್ರಾಮದ ತಂಟೆಪ್ಪಾಡಿ-ನಾಲ್ಗುತ್ತು ಭಾಗಕ್ಕೆ ಕೋವಿಡ್ ಪರೀಕ್ಷೆಗೆ ತೆರಳಿದ್ದು ತಂಟೆಪ್ಪಾಡಿ-ನಾಲ್ಗುತ್ತು ರಸ್ತೆ ತೀರಾ ಹದಗೆಟ್ಟ ಕಾರಣ ವಾಹನ ಹೋಗದೆ ಸ್ವಾಬ್ ಪರೀಕ್ಷೆಗೆ ನಡೆದುಕೊಂಡು ಹೋಗುವಂತಾಯಿತು. ಈ ರಸ್ತೆಯ ದುಸ್ಥಿತಿಯಿಂದ ಈ ಭಾಗದ ಜನರು ಹಲವಾರು ವರ್ಷಗಳಿಂದ ಇದೇ ಗೋಳು ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರಾದ ಲೋಕೇಶ್ ತಂಟೆಪ್ಪಾಡಿಯವರು...
ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ...
ನಾನು ನಾನು ಎಂದು ನೀ ಜಂಭ ಪಡುವೆ…ಎಲ್ಲವೂ ನನ್ನದು ಎಂಬ ಭ್ರಮೆಯಲ್ಲಿ ಬದುಕುವೆ…ಪುಣ್ಯದ ಬೆಲೆಯನ್ನು ನೀ ಮರೆತುಬಿಡುವೆ…ಬದುಕಿನುದ್ದಕ್ಕೂ ಪಾಪ ಕಾರ್ಯವನ್ನೇ ಮಾಡುವೆ… ಅಹಂಕಾರದ ಕೋಟೆಯಲ್ಲಿ ನೀ ಬಂಧಿಯಾದೆ…ನಿನ್ನವರ ಪ್ರೀತಿಯನ್ನು ನೀ ಮರೆತುಹೋದೆ…ಯಾರ ಮಾತಿಗೂ ನೀ ಬೆಲೆ ನೀಡದಾದೆ…ಯಾರ ನೋವಿಗೂ ನೀ ಕರಗದಾದೆ… ಅಹಂಕಾರದ ಅಂಧಕಾರದಲ್ಲಿ ನೀ ಮುಳುಗಿಹೋದೆ…ನಾನೇ ಸರ್ವಸ್ವ ಎಂದು ನೀ ತಿಳಿದುಕೊಂಡೆ…ಜಗದಲ್ಲಿ ನನಗಿಂತ ಮೇಲ್ಯಾರೂ...
Loading posts...
All posts loaded
No more posts
