- Tuesday
- August 11th, 2026
ಪಂಜದ ಮೊರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿತವಾದ ಸುವ್ಯವಸ್ಥಿತವಾದ ಕೋವಿಡ್ ಕೇರ್ ಸೆಂಟರ್ನಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಭಾಗ್ಯ ಸಮೃದ್ಧಿಗೆ ಪೂರಕವಾಗಿದೆ.ಇಲ್ಲಿ ಸೋಂಕಿತರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ.ಅಲ್ಲದೆ ಆಮ್ಲಜನಕ ಕನ್ಸಲೇಟರ್ ಅನ್ನು ಒದಗಿಸಿದ್ದೇವೆ. ಕಾಲಕಾಲಕ್ಕೆ ಬೇಕಾದ ಪೌಷ್ಠಿಕ ಆಹಾರವನ್ನು ವ್ಯವಸ್ಥಿತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ವರೂ ಆರೋಗ್ಯ ರಕ್ಷಣೆಗೆ ಕರ ಜೋಡಿಸಬೇಕು. ನಮ್ಮೊಳಗೆ ಉಂಟಾಗುವ...
ಕೊರೊನಾ ವಾರಿಯರ್ ಗಳೆಂದು ಮೆಸ್ಕಾಂ ಸಿಬ್ಬಂದಿಗಳನ್ನು ಸರಕಾರ ಪರಿಗಣಿಸಿರುವ ಹಿನ್ನೆಲೆಯಲ್ಲಿ ಇಂದು ಪುರಭವನದಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ವಿತರಣೆ ನಡೆಯಿತು.
ಸುಳ್ಯ ತಾಲೂಕಿನಲ್ಲಿ ಇಂದು 55 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಿನ್ನೆ 44 ಪ್ರಕರಣ ಸೇರಿದಂತೆ ಕಳೆದೊಂದು ವಾರದಿಂದ ಇಳಿಕೆ ಕಂಡಿದ್ದ ಕೊರೊನಾ ಪ್ರಕರಣ ಪುನಃ ಏರಿಕೆ ಕಂಡಿದೆ.
ಸುಳ್ಯ ತಾಲೂಕಿನಲ್ಲಿ 44 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮಡಪ್ಪಾಡಿಯಲ್ಲಿ 3, ನೆಲ್ಲೂರು ಕೆಮ್ರಾಜೆಯಲ್ಲಿ 2, ಆಲೆಟ್ಟಿಯಲ್ಲಿ 3, ಬೆಳ್ಳಾರೆಯಲ್ಲಿ 1, ಸುಳ್ಯದಲ್ಲಿ 6, ಕಳಂಜದಲ್ಲಿ 2, ಉಬರಡ್ಕ ಮಿತ್ತೂರಿನಲ್ಲಿ 3, ಗುತ್ತಿಗಾರಿನಲ್ಲಿ 1, ದೇವಚಳ್ಳದಲ್ಲಿ 4, ಎಡಮಂಗಲದಲ್ಲಿ 2, ಅಮರಮುಡ್ನೂರಿನಲ್ಲಿ 1, ಕೊಡಿಯಾಲದಲ್ಲಿ 5, ಮುರುಳ್ಯದಲ್ಲಿ 2, ಮರ್ಕಂಜದಲ್ಲಿ 1, ನಾಲ್ಕೂರಿನಲ್ಲಿ 2, ಜಾಲ್ಸೂರಿನಲ್ಲಿ 1,...
ರಾಜ್ಯದ ಕವಿಪ್ರನಿನಿ ಮತ್ತು ಎಲ್ಲಾ ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿ ಮತ್ತು ನೌಕರರನ್ನು ಕೊರೊನಾ ವಾರಿಯರ್ ಗಳೆಂದು ಪರಿಗಣಿಸಿ ಲಸಿಕೆ ಹಾಗೂ ಇತರ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ಇಂದನ ಇಲಾಖೆಯು ಅವಶ್ಯ ಸೇವೆಯಾಗಿರುವುದರಿಂದ ಲಸಿಕೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಿ ಕರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಅವಲಂಬಿತರಿಗೆ ರೂ. 50 ಲಕ್ಷದ ಮೊತ್ತವನ್ನು ನೀಡುವಂತೆ ಆದೇಶದಲ್ಲಿ...
ಸಾಲ ಪಡೆದು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಲಕ್ಕೆ ಜಾಮೀನು ಹಾಕಿದವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದಿವಾಳಿತನ ಸಂಹಿತೆ (ಐಬಿಸಿ) ಅಡಿಯಲ್ಲಿ ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದರೆ ವೈಯಕ್ತಿಕ ಜಾಮೀನುದಾರರ ವಿರುದ್ಧ ಕ್ರಮ ಜರುಗಿಸಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಕಾರ್ಪೋರೇಟ್ ಸಾಲಗಾರರಿಗೆ ಇಲ್ಲವೇ ಕಂಪೆನಿಗಳಿಗೆ ನೀಡಲಾದ ಸಾಲಕ್ಕೆ ಜಾಮೀನು...
ಕಡಬ ತಾಲೂಕು ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಹರೀಶ ಗೌಡರ ಪುತ್ರಿ ಚೇತನಾರವರ ವಿವಾಹವು ಕಡಬ ತಾಲೂಕು ಚಾರ್ವಾಕ ಗ್ರಾಮದ ನಾಣಿಲ ಶ್ರೀ ತಿಮ್ಮಪ್ಪ ಗೌಡರ ಪುತ್ರ ಗಣೇಶ್ ರವರೊಂದಿಗೆ ಮೇ.20ರಂದು ನಾಣಿಲ ವರನ ಮನೆಯಲ್ಲಿ ನಡೆಯಿತು.
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ ದಿ. ಸುಬ್ಬಯ್ಯ ಗೌಡರ ಧರ್ಮಪತ್ನಿ ಶ್ರೀಮತಿ ಮುತ್ತಕ್ಕರವರು ಮೇ.22 ರಂದು ಮುಂಜಾನೆ ನಿಧನರಾದರು.ಮೃತರು ಪುತ್ರರಾದ ಯಶವಂತ ಗೌಡ ಕುಕ್ಕೇಟಿ, ಗಂಗಾಧರ ಗೌಡ ನೆಟ್ಟಣ, ದಯಾನಂದ ಗೌಡ ನಾವೂರು, ಪುರೂಷೋತ್ತಮ ಗೌಡ ಕೊಲ್ಯ, ಶಿವರಾಮ ಗೌಡ ಕುಕ್ಕೇಟಿ, ಪುತ್ರಿಯರಾದ ಶ್ರೀಮತಿ ಶೇಷಮ್ಮ ಉತ್ತಯ್ಯ ಗೌಡ ಬೊಳುಗಲ್ಲು, ಶ್ರೀಮತಿ ಲಲಿತಾ ಚಂದ್ರಶೇಖರ್ ಗೌಡ,...
ಮುಖ್ಯಮಂತ್ರಿ ಯಡಿಯೂರಪ್ಪ ರವರು ಮತ್ತೆ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ನಿರ್ಧಾರ ಕೈಗೊಂಡಿರುವುದು ಉತ್ತಮವಾಗಿದೆ. ಕೋವಿಡ್ ನಿಯಂತ್ರಣದಲ್ಲಿದ್ದರೂ ಸಂಪೂರ್ಣ ಹತೋಟಿಗೆ ತರುವಂತದ್ದು ಅನಿವಾರ್ಯವಾಗಿದೆ. ರಾಜ್ಯದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಲಾಕ್ ಡೌನ್ ಅನಿವಾರ್ಯವಾಗಿದೆ. ಸರಕಾರಕ್ಕೆ ಲಾಕ್ ಡೌನ್ ನಿಂದ ನಷ್ಟ ಸಂಭವಿಸಿದ್ದರೂ, ಸರ್ಕಾರ ಜನತೆಯ ಆರೋಗ್ಯದ ಬಗ್ಗೆ ಚಿಂತಿಸುತ್ತಿದೆ. ಯಡಿಯೂರಪ್ಪನವರು ಯಾವಾಗಲೂ ರಾಜ್ಯದ...
ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್ಡೌನ್ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ....
Loading posts...
All posts loaded
No more posts
