ದಕ್ಷಿಣ ನೈರುತ್ಯ ರೈಲ್ವೇ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಟ್ ದಂಬೆಕೋಡಿ ನೇಮಕ

ಭಾರತ ಸರ್ಕಾರದ ದಕ್ಷಿಣ ನೈರುತ್ಯ ರೈಲ್ವೇಯ ವಿಭಾಗೀಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ( Zonal Railway User Consultative Commitee of South Western) ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೇಮಕಗೊಂಡಿದ್ದಾರೆ.ಈ ಬಗ್ಗೆ ರೈಲ್ವೇ ಸಚಿವಾಲಯ ಕಾರ್ಯಾಲಯದಿಂದ ಅಧಿಸೂಚನೆ ಬಂದಿದ್ದು ಮುಂದಿನ ಎರಡು ವರ್ಷಗಳ ಕಾಲ ಇವರು...

ಜೂನ್ 21 ರಿಂದ ಜುಲೈ 5ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ ತಿಂಗಳ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು...
Ad Widget

ರೆಡ್ ಕ್ರಾಸ್ ಹಾಗೂ ಅಗ್ನಿ ಶಾಮಕದಳದ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನಯುವ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತುಅಗ್ನಿ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸುಳ್ಯದ ಅಗ್ನಿ ಶಾಮಕ ಠಾಣೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ...

ನಗರ ಪಂಚಾಯತ್ ಕಸ ವಿಲೇವಾರಿ ಇನ್ನೂ ವಿಳಂಬ ಸಾಧ್ಯತೆ!

ನ.ಪಂ.ನ ಆವರಣದಲ್ಲಿರು ಪ್ಲಾಸ್ಟಿಕ್ ಕಸ ವಿಲೇವಾರಿಗೆ ಬರ್ನಿಂಗ್ ಮೆಷಿನ್ ಪಂಚಾಯತ್ ಆವರಣ ತಲುಪಿದ್ದು ಶೀಘ್ರವೇ ಕಸ ವಿಲೇವಾರಿ ಆಗಲಿದೆ ಎಂದು ನ.ಪಂ.ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಆದರೇ ನ.ಪಂ.ಆವರಣಕ್ಕೆ ಪ್ಲಾಸ್ಟಿಕ್ ಪ್ರೆಸ್ಸಿಂಗ್ ಮೆಷಿನ್ ನಂತೆ ಕಂಡುಬರುತ್ತಿದ್ದು ಹಾಗೂ ಹಳೆಯದಾಗಿದ್ದು ಈ ಯಂತ್ರದಿಂದ ಎಲ್ಲಾ ತ್ಯಾಜ್ಯ ವಿಲೇವಾರಿ ಸಾಧ್ಯವೇ ಅಥವಾ ಎಲ್ಲಾ ತ್ಯಾಜ್ಯ ನಿರ್ವಹಣೆಗೆ ಬೇರೆ ಯಂತ್ರ ಇದೇ...

ಕೋಟೆಮುಂಡುಗಾರು : ಕೈಕೊಟ್ಟ ಬಿ.ಎಸ್.ಎನ್.ಎಲ್ ನೆಟ್ವರ್ಕ್

ಕೋಟೆಮುಂಡುಗಾರಿನಲ್ಲಿ ಫೆ. 26 ರಿಂದ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಕೈಕೊಟ್ಟಿದ್ದು ಇದುವರೆಗೆ ನೆಟ್ವರ್ಕ್ ಸರಿಯಾಗದೇ ಜನ ಪೇಚಿಗೆ ಸಿಲುಕಿದ್ದಾರೆ. 4 ದಿನಗಳಿಂದ ಬಿ ಎಸ್ ಎನ್ ಎಲ್ ಸ್ತಬ್ದವಾಗಿದ್ದು ಬೇರೆ ನೆಟ್ವರ್ಕ್ ವ್ಯವಸ್ಥೆ ಇಲ್ಲದೆ ತುರ್ತು ಅಗತ್ಯಗಳಿಗೆ ಪರದಾಡುವಂತಾಗಿದೆ. ಓ ಎಫ್ ಸಿ ಕಡಿತಗೊಂಡಿರುವುದು ನೆಟ್ವರ್ಕ್ ಸಮಸ್ಯೆಗೆ ಕಾರಣವಾಗಿದ್ದು ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಲು...

ವಳಲಂಬೆ : ಜಾತ್ರೋತ್ಸವದ ಪೂರ್ವಭಾವಿ ಸಭೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ಮತ್ತು 25 ರಂದು ನಡೆಯಲಿರುವ ಜಾತ್ರೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ಕಜೆ ಅವರ ನೇತೃತ್ವದಲ್ಲಿ ಮಾ.1 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕುಶಾಲಪ್ಪ ಗೌಡ ಪಾರೆಪ್ಪಾಡಿ,...

ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ

ಹಿಂದುಳಿದ ವರ್ಗಗಳ ಸುಳ್ಯ ಮಂಡಲ ಮೋರ್ಚಾದ ಕಾರ್ಯಕಾರಿಣಿ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೇ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಆರ್.ಸಿ ನಾರಾಯಣ ರೆಂಜಾ, ಜಿಲ್ಲಾ ಕಾರ್ಯದರ್ಶಿ ಉದಯಕುಮಾರ್ ಬಿ.ಸಿ ರೋಡ್, ಜಿಲ್ಲಾ ಕೋಶಾಧಿಕಾರಿ ಮಾಧವ ಚಾಂತಾಳ, ಬಿಜೆಪಿ...

ಮಡಪ್ಪಾಡಿ ಪ್ರೀಮಿಯರ್ ಲೀಗ್ 2021 ವಾಲಿಬಾಲ್ ಪಂದ್ಯಾಟ : ಪ್ರಥಮ – ಶ್ರೀ ವಿಷ್ಣು ಕೇವಳ

ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಆರು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ "ಮಡಪ್ಪಾಡಿ ಪ್ರೀಮಿಯರ್ ಲೀಗ್ 2021" ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯ ಕ್ರೀಡಾಂಗಣದಲ್ಲಿ ಫೆ.28 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...

ಸುಳ್ಯ ಸೆಲ್ಕೋ ಸೋಲಾರ್ ಸಂಸ್ಥೆಯ ಮ್ಯಾನೇಜರ್ ರಾಧಾಕೃಷ್ಣ ನಿವೃತ್ತಿ – ಬೀಳ್ಕೊಡುಗೆ

ಸೆಲ್ಕೋ ಸೋಲಾರ್ ಸುಳ್ಯ ಹಾಗೂ ಕುಶಾಲನಗರದ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಧಾಕೃಷ್ಣ ರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಮಾ. 27 ರಂದು ನಡೆಯಿತು. ಸೆಲ್ಕೋ ಸೋಲಾರ್ ನ ಸಿ.ಇ.ಒ ಮೋಹನ್ ಭಾಸ್ಕರ್ ಹೆಗ್ಡೆ, ಜನರಲ್ ಮ್ಯಾನೇಜರ್ ಜಗದೀಶ್ ಪೈ, ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ...

ಬೂಡು ಭಗವತಿ ಕ್ಷೇತ್ರದಲ್ಲಿ ಕಲಶೋತ್ಸವ – ಆಮಂತ್ರಣ ಬಿಡುಗಡೆ

ಸುಳ್ಯ ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ನೂತನ ಶಿಲಾಸ್ತಂಭ ಮತ್ತು ಶಾಶ್ವತ ಚಪ್ಪರ ಸಮರ್ಪಣೆ ಹಾಗೂ ಕಲಶೋತ್ಸವ ಮಾ.8, 9 ಹಾಗೂ 10 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪ ಗೌಡ ಕೇರ್ಪಳ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ...
Loading posts...

All posts loaded

No more posts

error: Content is protected !!