- Monday
- August 10th, 2026
ಸುಳ್ಯ ನಗರದ ಬೂಡು - ಪನ್ನೆಬೀಡು ಭಗವತೀ ಅಮ್ಮನಿಗೆ ಕಲಶೋತ್ಸವದ ಸಂಭ್ರಮ. ಮಾ.8 ರಿಂದ 10 ರ ವರೆಗೆ ಕ್ಷೇತ್ರದಲ್ಲಿ ಉತ್ಸವಗಳನ್ನು ನಡೆಸಲು ಈಗಾಗಲೇ ಕ್ಷೇತ್ರದ ತಂತ್ರಿಗಳು ದಿನ ಗೊತ್ತುಪಡಿಸಿದ್ದು ಯಶಸ್ವಿಯಾಗಿ ಕಾರ್ಯಕ್ರಮ ನಡೆಸಲು ಸಮಿತಿ ರಚನೆ ಮಾಡಲಾಗಿದೆ.ಪೂರ್ವಭಾವಿ ಸಭೆ, ಊರಿನ ಭಕ್ತಾದಿಗಳ ಸಹಭಾಗಿತ್ವದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಯುತ್ತಿದೆ. ಮಾ.8ರಿಂದ ಕಲಶೋತ್ಸವ ಆರಂಭಗೊಳ್ಳಲಿದ್ದು,...
ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಯಂತ ಬಾಳುಗೋಡು ಅವರನ್ನು ಬಾಳುಗೋಡು ಕುಟುಂಬದ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥರು ಉಪಸ್ಥಿತರಿದ್ದರು.
ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ 2020 -21 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಘಟಕ ನಾಯಕರಾಗಿ ನಿತಿನ್ ಕೆ ಆರ್ (ದ್ವಿತೀಯ ಬಿ ಎಸ್ ಡಬ್ಲ್ಯೂ) ಹಾಗೂ ಕೃತಿಕಾ ಕೆ ಜೆ (ದ್ವಿತೀಯ ಬಿ ಕಾಂ ‘ಎ’) ಉಪನಾಯಕರಾಗಿ ಗಗನ್ ಎನ್ ಎಚ್ (ದ್ವಿತೀಯ ಬಿ ಎ),...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ರಚನೆಗೊಂಡಿದ್ದು ಇದರ ಉದ್ಘಾಟನೆ ಫೆ. 24 ರಂದು ನಡೆಯಲಿದೆ. ಸಭಾಧ್ಯಕ್ಷತೆಯನ್ನು ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಲಿದ್ದಾರೆ. ಉದ್ಘಾಟನೆಯನ್ನು ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್ ಎಂ ಸಿ...
ಸರಕಾರದ ಆದೇಶದಂತೆ ಸುಳ್ಯ ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ (ಆರ್ಟಿಸಿ)ಗೆ ಆಧಾರ್ ನೋಂದಣಿ ಮಾಡಿಸಿಕೊಳ್ಳುವಂತೆ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಸೂಚನೆ ನೀಡಿದ್ದಾರೆ. ಕರ್ನಾಟಕ ಸರಕಾರದ ನಿರ್ದೆಶನದಂತೆ ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಹಭಾಗಿತ್ವದಲ್ಲಿ ಆಧಾರ್ ಪಹಣಿ ಜೋಡಣೆ ಆಂದೋಲನ ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ರೈತರು ತಮ್ಮ ಜಮೀನಿನ...
ದ. ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಇದರ ಸಹಯೋಗದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಹೆಣ್ಣು ಶಿಶು ಪ್ರದರ್ಶನ, ಅನ್ನ ಪ್ರಾಶಣ ಮತ್ತು ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಫೆ. 19 ರಂದು ನಡ್ಕ ಶಿವಗೌರಿ ಕಲಾ ಮಂದಿರ...
ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ವೆಂಕಟರಮಣ ದೇವರ ಹರಿಸೇವೆ ಮತ್ತು ಧರ್ಮ ನಡಾವಳಿಯು ಫೆ.20 ಮತ್ತು ಫೆ.21 ರಂದು ಕುಟುಂಬದ ಧರ್ಮಚಾವಡಿಯಲ್ಲಿ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯವರು, ಕುಟುಂಬಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಎಡಮಂಗಲ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಡಮಂಗಲಕ್ಕೆ 2 ಕೆ.ವಿ. ಇನ್ವರ್ಟರ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಾಲೆಂಗ್ರಿ, ನಿರ್ದೇಶಕರಾದ ಅವಿನಾಶ್ ದೇವರಮಜಲು ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಮೇಶ್ ಡಿ. ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ, ಉಪಾಧ್ಯಾಯರಾದ ಪದ್ಮನಾಭ ಮತ್ತು ರಮೇಶ್ ಉಪಸ್ಥಿತರಿದ್ದರು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19 ರಂದು ಜರುಗಲಿದ್ದು, ನಡಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.21 ರಂದು ನಡೆಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ರೈ ಕಳಂಜ, ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ರಘುನಾಥ ರೈ ಕಳಂಜ, ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ, ಉಪಾಧ್ಯಕ್ಷರಾದ ಶೇಷಪ್ಪ...
Loading posts...
All posts loaded
No more posts
