- Sunday
- August 9th, 2026
ಜ.25 ರಂದು ನಡೆದ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಬಂದರು ಮೀನುಗಾರಿಕಾ, ಒಳನಾಡು ಜಲಸಾರಿಗೆ ಸಚಿವ ಅಂಗಾರರಿಗೆ ಸುುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬಾಳಿಲ ಗ್ರಾಮ ಪಂಚಾಯತಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಈ ಪ್ರಯುಕ್ತ ಆಡಳಿತಾಧಿಕಾರಿ ಶ್ರೀ ನಿರಂಜನ್ ಚಿದಾನಂದ್ ಹಿರೇಮಠ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತ್ರಿವೇಣಿ ಹಾಗೂ ಶ್ರೀಮತಿ ಸುಶೀಲಾ, ಪಂಚಾಯತ್ ಕಾರ್ಯದರ್ಶಿಗಳಾದ ಶ್ರೀ ಜಯಶೀಲ ರೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ರಾಮ್ ಭಟ್ ಧ್ವಜಾರೋಹಣ ನೆರವೇರಿಸಿದರು. ಶುಭಾ.ಡಿ ಗಣರಾಜ್ಯೋತ್ಸವ ಭಾಷಣಗೈದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಶಿಕ್ಷಕ ಶಿವಪ್ರಸಾದ್ ಜಿ ನಿರೂಪಿಸಿದರು. ಈ ವೇಳೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭುವನೇಶ್ವರ್, ಶಾಲೆಯ ಶಿಕ್ಷಕ ವೃಂದದವರು, ಅಂಗನವಾಡಿ...
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಖಾತೆಯ ನೂತನ ಸಚಿವ ಎಸ್. ಅಂಗಾರ ಅವರು ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ಧ್ವಜಾರೋಹಣ ನೆರವೇರಿಸಿದರು.ಬಳಿಕ 72ನೇ ಗಣರಾಜ್ಯೋತ್ಸವದ ಪ್ರಯುಕ್ತ ಶುಭಹಾರೈಸಿದರಲ್ಲದೆ ಹುತಾತ್ಮ ಸೈನಿಕರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ...
ಸುಳ್ಯ ಮೆಸ್ಕಾಂನಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜರೋಹಣ ಕಾರ್ಯಕ್ರಮ ಇಂದು ನಡೆಯಿತು. ಜೆ.ಇ.ಬೋರಯ್ಯ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೆ.ಇ.ಸುರೇಶ್ ಭಟ್, ಪ್ರಭಾರ ಜೆಇ ಜಯಪ್ರಕಾಶ್ ಕೆ. ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಇವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪೆರುವಾಜೆ ಗ್ರಾಮದ ಮುಕ್ಕೂರು ಬಿರುಸಾಗು ನಿವಾಸಿ ಮಾಧವಿ ರೈ ಯವರು ಮನೆಯ ಮೇಲ್ಛಾವಣಿ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದು, ಅಪಾಯವನ್ನು ಆಹ್ವಾನಿಸುವಂತಿತ್ತು. ಈ ವಿಷಯ ಮನಗಂಡ ಯುವಸೇನೆ ಮುಕ್ಕೂರು ಪೆರುವಾಜೆಯ ಸದಸ್ಯರು ಬೀಳುವ ಸ್ಥಿತಿಯಲ್ಲಿದ್ದ ಮನೆಯ ದುರಸ್ತಿ ಕಾರ್ಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕ್ಯಾನ್ಸರ್ ನಿಂದ ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಮಾಧವಿ ರೈ ಯವರು...
ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ಇದೀಗ ಬಂದರು, ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿದ ಎಸ್.ಅಂಗಾರ ಅವರಿಗೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಜ.25 ರಂದು ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಸಚಿವ ಎಸ್.ಅಂಗಾರ ಮತ್ತು ವೇದಾವತಿ ದಂಪತಿಗಳನ್ನು ಈ ಅದ್ದೂರಿ ಕಾರ್ಯಕ್ರಮದಲ್ಲಿ ಪೇಟ ತೊಡಿಸಿ, ಹೂಮಾಲೆ...
Loading posts...
All posts loaded
No more posts
