ಸುಳ್ಯ : ವೆಂಕಟರಮಣ ಸೊಸೈಟಿ ವತಿಯಿಂದ ಗೌರವಾರ್ಪಣೆ

ಜ್ಞಾನ ಮಂದಾರ ಅಕಾಡೆಮಿ ವತಿಯಿಂದ ನೀಡುವ ಸಮಾಜರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೆಂಕಟರಮಣ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ‌.ಜಯರಾಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ದೇವಚಳ್ಳ ಗ್ರಾ‌.ಪಂ.ಸದಸ್ಯರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ರವರನ್ನು ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ...

ಜ.22- ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜ.22 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Ad Widget

ಜ.24-26 : ಗುಂಡಿಹಿತ್ಲು ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಹರಿಹರಪಲ್ಲತ್ತಡ್ಕ ಗ್ರಾಮದ ಗುಂಡಿಹಿತ್ಲು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ಗುಡಿಗಳು ನವೀಕರಣಗೊಂಡಿದ್ದು ಜ. 24 ಆದಿತ್ಯವಾರದಿಂದ ಜ. 26 ಮಂಗಳವಾರದ ತನಕ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು...

ಭರತನಾಟ್ಯ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಯಶಸ್ವಿ ಪಿ.ಭಟ್

ಕನಾ೯ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಯಶಸ್ವಿ ಪಿ.ಭಟ್ ಶೇ.94.75(ಡಿಸ್ಟಿಂಕ್ಷನ್)ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು, ಸುಳ್ಯ ಶಾಖೆಯ ಗುರು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆ ಹಾಗೂ ಸುಳ್ಯ ದೇವಸ್ಯ ನಿವಾಸಿಯಾದ ಪ್ರಶಾಂತ್ ಭಟ್ ಮತ್ತು ಶ್ರೀ ಮತಿ...

ಜ.27ಕ್ಕೆ ಸುಳ್ಯ, ಜ.28 ಕ್ಕೆ ಕಡಬ ತಾಲೂಕಿನ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿ

ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿಪಡಿಸಲು ಈ ಹಿಂದೆ ನಿಗದಿಪಡಿಸಲಾಗಿದ್ದ ಸ್ಥಳ ಮತ್ತು ದಿನಾಂಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ಹಾಗೂ ಕಡಬ ತಾಲೂಕಿನ ಮೀಸಲಾತಿ ಪ್ರಕ್ರಿಯೆ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಜ.23 ರಂದು ಆಯೋಜಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದಕ್ಕೆ ಜನಪ್ರತಿನಿಧಿ ಹಾಗೂ ಪಕ್ಷಗಳಿಂದ ವಿರೋಧ ವ್ಯಕ್ತವಾಗಿ...

ಸುಬ್ರಹ್ಮಣ್ಯ ಕಿರುಷಷ್ಠಿ ಧರ್ಮ ಸಮ್ಮೇಳನ : ಬಂದ ದಾರಿಯನ್ನು ಮರೆಯುವುದಿಲ್ಲ. ನೀವು ಮರೆಯಬೇಡಿ, ಆಡಳಿತವನ್ನು ಪ್ರೀತಿ ಮತ್ತು ವಿಶ್ವಾಸದಿಂದ ನಡೆಸುತ್ತೇನೆ – ಸಚಿವ ಅಂಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರು ಷಷ್ಠಿಯ ಪ್ರಯುಕ್ತ ಧರ್ಮ ಸಮ್ಮೇಳನ ದೇವಸ್ಥಾನದ ಧರ್ಮಸಮ್ಮೇಳನ ಮಂಟಪದಲ್ಲಿ ಜ.19 ರಂದು ನಡೆಯಿತು ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಂಗಾರ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಹಣ ಅಗತ್ಯ ಬಿದ್ದಿಲ್ಲ. ಇಲ್ಲಿ...

ಕೇರ್ಪಳ : ಮಹಿಳೆ ಕಾಣೆ – ಪೋಲೀಸ್ ದೂರು

ಸುಳ್ಯದ ಕೇರ್ಪಳದಲ್ಲಿ ಸುಮಾರು 5 ವರ್ಷದಿಂದ ನೆಲೆಸಿರುವ ಆನಂದ ಎಂಬವರ ಪತ್ನಿ ಚಂದ್ರಾವತಿ (49)ಎಂಬವರು ಜ.18 ರಂದು ಮನೆಯಿಂದ ಕಾಣೆಯಾಗಿದ್ದರು. ಮನೆಯವರು ಹುಡುಕಾಟ ಆರಂಭಿಸಿದಾಗ ಪರ್ಸ್ ಮತ್ತು ಮೊಬೈಲ್ ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಹೊಳೆಗೆ ಬಿದ್ದಿರಬಹುದೆಂದು ಶಂಕಿಸಲಾಗಿತ್ತು. ಹಾಗಾಗಿ ಪೋಲೀಸರು,ಅಗ್ನಿಶಾಮಕ ದಳದವರು,ಮುಳುಗು ತಜ್ಞರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ . ಯಾವುದೇ...

ಸುಳ್ಯ : ಮೆಸ್ಕಾಂ ಭೂಗತ ಕೇಬಲ್ ಅಳವಡಿಕೆ; ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ಆರೋಪ

ಸುಳ್ಯದ ಜೂನಿಯರ್ ಕಾಲೇಜು ಬಳಿಯಿಂದ ಜ್ಯೋತಿ ವೃತ್ತದವರೆಗೆ ಸುಮಾರು 1 ಕಿಮೀ 33 ಕೆ.ವಿ ವಿದ್ಯುತ್ ಪೂರೈಕೆ ಸಾಮರ್ಥ್ಯದ ಭೂಗತ ಕೇಬಲ್ ಅಳವಡಿಕೆ ಮಾಡಲಾಗುತ್ತಿದೆ. ಆದರೆ ಈ ಕೆಲಸವನ್ನು ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.ಸುಳ್ಯದ ಜೂನಿಯರ್ ಕಾಲೇಜ್ ಬಳಿಯಿಂದ ಜ್ಯೋತಿ ವೃತ್ತದವರೆಗೆ ಸುಮಾರು 1 ಕಿಮೀ 33 ಕೆ.ವಿ ವಿದ್ಯುತ್...

ಸುಳ್ಯ : ವಿಶೇಷ ಕಾರ್ಯಾಗಾರ ಮತ್ತು ಯೋಗ ಪ್ರದರ್ಶನ

ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಕರ್ನಾಟಕ ಮಂಗಳೂರು ವಿಭಾಗ, ಸುಳ್ಯ ನಗರ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರ ಮತ್ತು ಯೋಗ ಪ್ರದರ್ಶನವು ಸುಳ್ಯದ ಶಿವಕೃಪಾ ಕಲಾ ಮಂದಿರ ನಡೆಯಿತು. ಕಾರ್ಯಕ್ರಮವನ್ನು ಸುಳ್ಯದ ಆನಂದ್ ಇಲೆಕ್ಟ್ರಿಕಲ್ಸ್ ನ ಮಾಲಕ ಆನಂದ್ ಪೂಜಾರಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯತ್...

ಬೆಳ್ಳಾರೆ : ಸ್ವಚ್ಚತಾ ಕಾರ್ಯಕ್ರಮ

ಬೆಳ್ಳಾರೆ ಪೇಟೆಯಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿಯ ಪಟ್ಟಣ ಸವಾರಿಯ ಸಲುವಾಗಿ ಸ್ವಚ್ಛತಾ ಕಾರ್ಯ ಇಂದು ನಡೆಸಲಾಯಿತು. ಗ್ರಾ.ಪಂ.ನ ನೂತನ ಸದಸ್ಯರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಈ ಸ್ವಚ್ಚತಾ ಕಾರ್ಯ ನಡೆಯಿತು.
Loading posts...

All posts loaded

No more posts

error: Content is protected !!