- Wednesday
- August 5th, 2026
ಇನೋವಾ, ಜೀಪು ಹಾಗೂ ಸ್ಕೂಟಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಸೆ.20 ರಂದು ಸಂಭವಿಸಿದೆ.ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಡ್ಕಾರು ಅಯ್ಯಪ್ಪ ಮಂದಿರದ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹಾಗೂ ಜೀಪಿಗೆ ಡಿಕ್ಕಿ ಹೊಡೆದು ಮೂರೂ ವಾಹನಗಳು ಜಖಂಗೊಂಡಿದೆ. ಇನೋವಾದಲ್ಲಿ ಒಟ್ಟು ನಾಲ್ವರು ಪ್ರಯಾಣಿಕರಿದ್ದು,...
ಭಾರತೀಯ ಜನತಾ ಪಾರ್ಟಿ, ಗ್ರಾಮ ಸಮಿತಿ ಪೆರುವಾಜೆ ಇದರ ವತಿಯಿಂದ ಪ್ರಧಾನಮಂತ್ರಿ ಪ್ರಜಾ ಸುರಕ್ಷಾ ಯೋಜನೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳ ಉಚಿತ ನೋಂದಣಿ ಶಿಬಿರವು ಸೆ.20 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಜರುಗಿತು. ಶಿಬಿರವನ್ನು ನಂದಿ ಅಸೋಸಿಯೇಟ್ಸ್ ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಶ್ರೀ ಲಕ್ಷ್ಮೀನಾರಾಯಣ ಐವರ್ನಾಡು...
ಸುಳ್ಯ ಅರಂಬೂರು ಬಳಿ ಮಾಣಿ-ಮೈಸೂರು ರಸ್ತೆಯ ಬದಿ ಒಂದು ಬಡಕುಟುಂಬ ವಾಸಿಸುತ್ತಿದ್ದು ಮನೆಯಲ್ಲಿ ತಾಯಿ ಮತ್ತು ಒಬ್ಬ ಅಸ್ವಸ್ಥ ಮಗಳು ಮಾತ್ರ ಜೀವನ ಸಾಗಿಸುತ್ತಿದ್ದಾರೆ. ಸೆಪ್ಟೆಂಬರ್ 19ರಂದು ಮನೆಯಲ್ಲಿ ಇದ್ದ ಮಾನಸಿಕವಾಗಿ ಅಸ್ವಸ್ಥ ಗೊಂಡಿರುವ 17 ವರ್ಷದ ಬಾಲಕಿ ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ನಂತರ ಮನೆಯವರು ಮತ್ತು ಸ್ಥಳೀಯರು ಹುಡುಕಾಡಿದರು ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕೆಲ ಗಂಟೆಗಳ...
ವಳಲಂಬೆಯಲ್ಲಿ ಆತ್ಮನಿರ್ಭರಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಎ.ಸಿ. ಯತೀಶ್ ಉಳ್ಳಾಲ್ ಚಾಲನೆಗ್ರಾಮವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು(ರಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ನಡೆಯಲಿರುವ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಇಂದು ಉದ್ಘಾಟನೆಗೊಂಡಿತು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು....
ಬಾಳಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದಯಾನಂದ ಪಂಜಿಗಾರು ಅಸೌಖ್ಯದಿಂದ ಸೆ. 19 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಶ್ರೀಮತಿ ಪೂರ್ಣಿಮಾ, ಪುತ್ರ ಕಾರ್ತಿಕ್, ಸಹೋದರರಾದ...
Harish nekraje Manoj padpu Vijeth kolambe ಗರುಡ ಯುವಕ ಮಂಡಲ ಚೊಕ್ಕಾಡಿ ಇದರ 2019- 2020 ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು 2020-2021 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮ ಗರುಡ ಯುವಕ ಮಂಡಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗರುಡ ಯುವಕ ಮಂಡಲದ ಅಧ್ಯಕ್ಷರಾದ ಸತೀಶ್ ಪಿಲಿಕಜೆ ವಹಿಸಿದ್ದರು,ಅತಿಥಿಗಳಾಗಿ...
ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಇಂದು (ಸೆ.19) ಇಂದ್ರಾಜೆ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನದ ಅಂಗವಾಗಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ತೆಂಗಿನಗುಂಡಿಗಳನ್ನು ರಚಿಸಲಾಯಿತು.
ಸುಳ್ಯತಾಲೂಕು ವಾಲಿಬಾಲ್ ಎಸೋಸಿಯೇಶನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವತಿಯಿಂದ ಉದ್ಯಮಿಗಳಾದ ಗುರು ಕೇಬಲ್ ನೆಟ್ ವರ್ಕ್ ಮಾಲಕ,ಕ್ರೀಡಾ ಪ್ರೋತ್ಸಾಹಕರು ಹಾಗೂ ಕ್ರೀಡಾ ಪೋಷಕರಾದ ಗುರುತ್ತದ್ ನಾಯಕ್ ಹಾಗೂ ಮಲ್ನಾಡ್ ಕಾಶ್ಯೂಶ್ ಮಾಲಕ, ಕೊಡುಗೈದಾನಿ, ಕೈಗಾರಿಕೋದ್ಯಮಿ ಹಾಜಿ ಅಬ್ದುಲ್ಲಾ ಮಲ್ನಾಡ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.19ರಂದು ಕೆವಿಜಿ ಸುಳ್ಯ ಹಬ್ಬ ಸಮಿತಿ...
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಧ್ವಜ ದಿನದ ಅಂಗವಾಗಿ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸೆಪ್ಟಂಬರ್ 19ರಂದು ನಗರ ಪಂಚಾಯತ್ ಪೌರ ಸಮ್ಮೇಳನ ಸಭಾಂಗಣದಲ್ಲಿ ಜರಗಿತು. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ನ ವಿವಿಧ ಕ್ಷೇತ್ರಗಳ ಕಾರ್ಯಾಚರಣೆಗಳನ್ನು...
Loading posts...
All posts loaded
No more posts
