- Monday
- August 3rd, 2026
ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಶಾ ಡಿ.ಕೆ., ಎಸ್ ಎಸ್ ಎಲ್.ಸಿ.ಪರಿಕ್ಷೆಯಲ್ಲಿ 601 ಅಂಕ (ಶೇ 96.16) ಗಳಿಸಿರುತ್ತಾಳೆ. ಈಕೆ ಸುಳ್ಯ ತಾಲೂಕು ಎಣ್ಮೂರು ಗ್ರಾಮದ ಗುತ್ತಿಗೆ ಮನೆ ದಿ.ಇಸ್ಮಾಯಿಲ್ ಮತ್ತು ಖದೀಜ ದಂಪತಿಗಳ ಪುತ್ರಿ.
ಐವರ್ನಾಡು ಗ್ರಾಮದ ಬಾಂಜಿಕೋಡಿ ಪ್ರಭಾಕರ ನಾಯಕ್ ಇವರ ಮನೆ ಇಂದು ಕುಸಿದು ಬಿದ್ದಿದೆ. ಮನೆಯ ಮಾಡು ಸಂಪೂರ್ಣ ಕುಸಿದಿದ್ದು, ಗೋಡೆ ಶಿಥಿಲಗೊಂಡಿದೆ. ಸ್ಥಳಕ್ಕೆ ಪಿಡಿಓ, ಗ್ರಾಮಲೆಕ್ಕಾಧಿಕಾರಿ, ಹಾಗೂ ಪಂಚಾಯತ್ ಮಾಜಿ ಸದಸ್ಯರು ಭೇಟಿ ನೀಡಿದ್ದಾರೆ. ಸ್ಥಳೀಯರು ಹಾಗೂ ಹಿತೈಷಿಗಳು ಕುಸಿದಿರುವ ಮನೆಯ ಸಾಮಾಗ್ರಿ ತೆರವುಗೊಳಿಸುವ ಕಾರ್ಯನಡೆಸಿದ್ದಾರೆ. ಕೂಡಲೇ ಸ್ಪಂದಿಸಿದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ಐವರ್ನಾಡು ಗ್ರಾಮದ ಬಾಂಜಿಕೋಡಿ ಪ್ರಭಾಕರ ನಾಯಕ್ ಇವರ ಮನೆ ಕುಸಿದು ಬಿದ್ದಿದ್ದು ಇವರಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಒಂದು ವಾರಕ್ಕೆ ಬೇಕಾದ ಆಹಾರ ಕಿಟ್ ಹಾಗೂ ವಿಲೇಜ್ ಟಾಸ್ಕ್ ಫೋರ್ಸ್ ಸಮಿತಿ ಯಿಂದ ರೂ.5000 ದ ಚಕ್ ನೀಡಲಾಯಿತು.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಿನ್ನೆ ಹಾಗೂ ಇಂದು ಮಗು,ಪತ್ರಕರ್ತ, ಶಿಕ್ಷಕ ಸೇರಿ ಒಟ್ಟು ಐದು ಕೊವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.ಸೋಮವಾರ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡವಾದ ವ್ಯಕ್ತಿಯೊಬ್ಬರ ಪತ್ನಿ ಹಾಗೂ 2 ವರ್ಷದ ಮಗುವಿಗೂ ಮಂಗಳವಾರ ಪಾಸಿಟಿವ್ ಧೃಡವಾಗಿತ್ತು. ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು ಬುಧವಾರ 3 ಪಾಸಿಟಿವ್ ಧೃಡವಾಗಿದ್ದು, ಇದರಲ್ಲಿ...
ಪಾಲ್ತಾಡಿ : ಶ್ರೀ ವಿಷ್ಣು ಮಿತ್ರ ವೃಂದ ಇದರ ಆಶ್ರಯದಲ್ಲಿ 9 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳವಾಗಿ ಆಚರಿಸಲಾಯಿತು. ಪ್ರತಿ ವರ್ಷ ಮೊಸರು ಕುಡಿಕೆ ಆಚರಣೆ ಅಂಗವಾಗಿ ಪಾಲ್ತಾಡು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ, ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ರಾಮಣ್ಣ ನಾಯ್ಕ್ ಕಾಪಿನಕಾಡು ಉದ್ಘಾಟಿಸಿದರು. ಸುಧಾಮ ಮಣಿಯಾಣಿ, ಮಯೂರ ಮಿತ್ರ ವೃಂದದ ಅಮರನಾಥ ರೈ ಬಾಕಿಜಾಲು,...
ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(12.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಬಳ್ಪ ಗ್ರಾಮದ ಎಣ್ಣೆಮಜಲು ನಿವಾಸಿ ಮೆಸ್ಕಾಂ ಗುತ್ತಿಗಾರು ಶಾಲೆ ಪ್ರಭಾರ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ರವರ ಪುತ್ರ ಅನುಷ್ ಮನೆಗೆ ಭೇಟಿ ಸನ್ಮಾನಿಸಿದರು.
ಸುಳ್ಯ ತಾಲೂಕು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದ ಅನುಷ್ ಗೆ ಸನ್ಮಾನಿಸಲಾಯಿತು
Loading posts...
All posts loaded
No more posts
