- Thursday
- July 30th, 2026
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಮಲೆಯಾಳ ನಿವಾಸಿ ಗೋಪಾಲಕೃಷ್ಣ ಭಟ್ ಮಲೆಯಾಳ(93) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿಯೂ, ಹವ್ಯಾಸಿ ಯಕ್ಷಗಾನ ವೇಷ ಧಾರಿಯೂ, ಯಕ್ಷ ಗುರುಗಳಾಗಿಯೂ ಪ್ರಸಿದ್ಧಿ ಹೊಂದಿದ್ದರು. ಯಕ್ಷಗುರುಗಳಾದ ಇವರು ಪುತ್ತೂರು, ಸುಳ್ಯ ತಾಲೂಕಿನ ಅನೇಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿ ನೀಡಿ ಮಕ್ಕಳು ಯಕ್ಷ ರಂಗಸ್ಥಳದಲ್ಲಿ ಮಿಂಚುವಂತೆ ಮಾಡಿದವರು....
ಸುಬ್ರಹ್ಮಣ್ಯ ಜುಲೈ 11 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಾಗ ಪ್ರತಿಷ್ಠ ಮಂಟಪದಲ್ಲಿ ಶೇಖರಣೆಯಾದ ನಾಗ ಶಿಲಾ ಕಲ್ಲುಗಳನ್ನು ಶನಿವಾರ ಕುಮಾರಧಾರ ನದಿಯಲ್ಲಿ ಜಲ ಸ್ತಂಭಗೊಳಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಳದ ಅರ್ಚಕರು, ಸರ್ಪಸಂಸ್ಕಾರ ವಿಭಾಗದ ಅರ್ಚಕರು ಹಾಗೂ ಕ್ರಿಯಾಕರ್ತರು ನಾಗ ಪ್ರತಿಷ್ಠಾ ಶಿಲಾ ಕಲ್ಲುಗಳನ್ನು ಪ್ರತಿಷ್ಟಾ ಮಂಟಪದಿಂದ ತೆರವುಗೊಳಿಸಿ ಕುಮಾರಧಾರ ನದಿಗೆ ಕೊಂಡೊಯ್ಯಲು ಜುಲೈ...
ಸುಳ್ಯ: ಸುಳ್ಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ, ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಹಾಗೂ ಕಡಬ ತಾಲೂಕಿನ ಐನೆಕಿದು...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ. ಕ. ಇದರ ಮಾಸಿಕ ಸಭೆಯು ಜು. 11ರಂದು ಸಂಘದ ಕಚೇರಿ ತಿಲಕ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಲಾಯಿತು. ಈ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...
ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.ದ್ವಿತೀಯ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದೆ. ಪಿಯುಸಿ...
ಸುಬ್ರಹ್ಮಣ್ಯ ಜುಲೈ 11 : ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕಳಿಗೆ ಧರ್ಮಪ್ಪ ಗೌಡ, ಆನಂದ ಗೌಡ, ಹಾಗೂ ಚಿದಾನಂದ ಗೌಡ ಎಂಬವರ ಕೃಷಿ ತೋಟಕ್ಕೆ ಶುಕ್ರವಾರ ರಾತ್ರಿ ಮೂರು ಆನೆಗಳು ಬಂದು ಫಲವತ್ತಾದ ತೆಂಗಿನ ಮರಗಳು ,ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿರುತ್ತವೆ. ರಾತ್ರಿಯೇ ಸುಬ್ರಹ್ಮಣ್ಯ ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ...
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜು. 4ರಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜ್ಞಾನವಿ ಎಂ.ಕೆ. ಮಂಗಳೂರು ವಲಯದ Pool Campusನಲ್ಲಿ ಪಾಲ್ಗೊಂಡು Tessolve Semiconductorಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.1 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ....
Loading posts...
All posts loaded
No more posts
