ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:11/07/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ, ಗಮನಿಸಿ:-ಇಂದು ನಿಮಗೆ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಲು...

ದಿ. ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಭೇಟಿ

ಪದ್ಮಶ್ರೀ ಪುರಸ್ಕೃತ ದಿ.ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುಪ್ರೀತ್ ಮೋoಟಡ್ಕ, ಸುಧಾಕರ ರೈ, ಜೂನಿಯರ್ ಕಾಲೇಜು ಪ್ರಿನ್ಸಿಪಾಲ್ ಮೂಡಿತ್ತಾಯ, ಗಿರೀಶ್ ಭಾರದ್ವಾಜ್ ಮನೆಯರು ಉಪಸ್ಥಿತರಿದ್ದರು.
Ad Widget

ಮಂಗಳೂರು ಮಿತ್ರ ಮಂಡಳಿ ಪುನರಾರಂಭ – ಜುಲೈ 18 ರಂದು ಉದ್ಘಾಟನೆ

1920 ರ ಕಾಲಘಟ್ಟದಲ್ಲಿ ಕರಾವಳಿ ಕರ್ನಾಟಕವೂ ಸೇರಿದಂತೆ ಇಡೀ ರಾಷ್ಟ್ರವು ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ರಾಷ್ಟ್ರೀಯತೆ ಎನ್ನುವುದು ಸಾಹಿತ್ಯದ ಮುಖ್ಯ ತಿರುಳಾಗಿ ಸಾಹಿತಿಗಳ ಲೇಖನದಿಂದ ಹೊರಹೊಮ್ಮುತ್ತಿದ್ದ ಕಾಲ. ಈ ಹಂತದಲ್ಲಿ ಕನ್ನಡ ಭಾಷೆಯ ಮೂಲಕ ರಾಷ್ಟ್ರೀಯತೆಯ ಭಾವವನ್ನು ಹರಡಿಸಲು ಕರಾವಳಿಯ ಕನ್ನಡ ಪಂಡಿತರು ದೃಢವಾದ ಹೆಜ್ಜೆಯನ್ನು ಇಟ್ಟಿದ್ದರು. ಮಂಗಳೂರಿನ ಕೆನರಾ ಹೈಸ್ಕೂಲಿನ ಮರದಡಿಯಲ್ಲಿ...

ಇಂದಿನ(ಜುಲೈ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಮತ್ತೆ ಜಿಗಿತ ; ಕೊಬ್ಬರಿ ಬೆಲೆಯಲ್ಲೂ ಭಾರಿ ಏರಿಕೆ! ; ಅಡಿಕೆ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಅಗಲಿದ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಜು.20 ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಭೆ – ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಜು.07 ರಂದು ಅಗಲಿದ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಜು.20 ರಂದು ಕುಂಭಕೋಡು ಕಸ್ತೂರಿ ಅಚ್ಚುತ ಭಟ್ ಕಲಾ ಮಂದಿರದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸುವ ಬಗ್ಗೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಸುಳ್ಯದ ವರ್ತಕರ ಸಂಘದ ಸಭಾಭವನದಲ್ಲಿ ಜು.9 ರಂದು ನಡೆಯಿತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ...

ಸುಬ್ರಹ್ಮಣ್ಯ : ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ರಾಮನಗರ ಜಿಲ್ಲೆಯ 30 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೈಲಂಜ ಹೋಬಳಿ, ಕೆ.ಪಿ.ದೊಡ್ಡ ಅಂಚೆ, ಉಚ್ಚಮ್ಮನದೊಡ್ಡಿ ನಿವಾಸಿ ಮಧು.ಎಸ್(30) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಧು ಅವರು ಜುಲೈ 8ರಂದು ಕುಕ್ಕೆ ಶ್ರೀ...

ಕೊಲ್ಲಮೊಗ್ರು : ಮಾವಿನ ಮರಕ್ಕೆ ಗುದ್ದಿ ಜಖಂಗೊಂಡ ಕಾರು – ಕೂದಲೆಳೆ ಅಂತರದಲ್ಲಿ ಪಾರಾದ ಪಾದಾಚಾರಿ

ಕೊಲ್ಲಮೊಗ್ರದಲ್ಲಿ ಕಾರೊಂದು ಮಾವಿನ ಮರಕ್ಕೆ ಗುದ್ದಿದ ಘಟನೆ ಜು.09ರಂದು ನಡೆದಿದೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ 7:30ರ ಸುಮಾರಿಗೆ ಹರಿಹರ ಪಳ್ಳತ್ತಡ್ಕ ಕಡೆಯಿಂದ ಬಂದ ಡಸ್ಟರ್ ಕಾರೊಂದು ಕೊಲ್ಲಮೊಗ್ರು ಪೇಟೆಯ ತಂಬಿನಡ್ಕ ಸಮೀಪ ಹಾಲಿನ ಡೈರಿ ಪಕ್ಕದಲ್ಲಿ ಇದ್ದ ಪಂಚಾಯತ್ ಪಂಪ್‌ಸೆಟ್ ಗೆ ಗುದ್ದಿ ಸುಮಾರು 50 ಮೀಟರ್ ಮುಂದಕ್ಕೆ ಹೋಗಿ ಮಾವಿನ ಮರಕ್ಕೆ ಗುದ್ದಿ...

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನ | ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ "ಸಿಂಧು-2026"ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ...

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್

ಸುಳ್ಯದ ಬೆಟ್ಟಂಪಾಡಿ ನಿವಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ಮತ್ತೊಂದು ವಿಶೇಷ ಕಲಾಸಾಧನೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ. ಕೇವಲ 3 ನಿಮಿಷ 30 ಸೆಕೆಂಡ್ ನಲ್ಲಿ 1.4 ಸೆ. ಮೀ. ಕಥಕಳಿ ಚಿತ್ರವನ್ನು ಕಡಲೆಕಾಳಿನಲ್ಲಿ ಬಿಡಿಸುವುದರೊಂದಿಗೆ ದಾಖಲೆ ನಿರ್ಮಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪಟ್ಟಿಯನ್ನು ಸೇರಿದ್ದಾರೆ....

ಬಿಳಿಯಾರು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಅರಂತೋಡು ಗ್ರಾಮದ ಬಿಳಿಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರಿಗೆ ಜು. 6ರಂದು ಬಿಳಿಯಾರು ಸ.ಕಿ.ಪ್ರಾ. ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಹಾಗೂ ಮಾಜಿ...
Loading posts...

All posts loaded

No more posts

error: Content is protected !!