ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ "ನಶಾ ಮುಕ್ತ ಕರ್ನಾಟಕ ಅಭಿಯಾನ"ವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆಗೆ ಸ್ವಾಗತ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ...

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ.20 ರಂದು ನಡೆಯಿತು.  ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಶಾಲಾ ಧ್ವಜಾರೋಹಣವನ್ನು  ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ.ಆಲ್ವಿನ್ ಎಡ್ವರ್ಡ್ ಡಿ'ಕುನ್ನಾ   ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ಪಿ.ಬಿ ಸುಧಾಕರ್ ರೈ ಸಭಾಪತಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ತಾಲೂಕು  ಇವರು...
Ad Widget

ಸುಬ್ರಹ್ಮಣ್ಯ : ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ – ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಡಿ.22 ರಂದು ಪ್ರತಿಭಟನೆ

ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗಿರುವುದನ್ನು ಖಂಡಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ಡಿ.22 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ.ಡಿ.22 ರಿಂದ 26 ರವರೆಗೆ ಕಿರುಷಷ್ಠಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು, ಈ...

ವಳಲಂಬೆ : ಪಲ್ಸ್ ಪೋಲಿಯೊ ಲಸಿಕೆ ವಿತರಣೆ

ಗುತ್ತಿಗಾರು ಗ್ರಾಮದ ವಳಲಂಬೆ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ 21 ರಂದು ನಡೆಯಿತು. ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕುಸುಮಾವತಿ , ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಾವತಿ, ವಿಮಲ, ಗುಲಾಬಿ, ಆಶಾಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ ಉಪಸ್ಥಿತರಿದ್ದರು. 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ...

ಆರು ತಿಂಗಳುಗಳಿಂದ ವೇತನ ಪಾವತಿ ಮಾಡದ ಸರ್ಕಾರ ; ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರಾಜಿನಾಮೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ.ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕುಲದೀಪ್ ರವರಿಗೆ ಸರ್ಕಾರ ಆರು ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಿರುವುದಿಲ್ಲ, ಆದ್ದರಿಂದ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಸರಿಸುಮಾರು 1,700 ನೌಕರರು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶ್ವ ಧ್ಯಾನ ದಿನಾಚರಣೆ ಪ್ರಯುಕ್ತ  ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಹಾಗೂ ಧ್ಯಾನ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ದಿನಾಂಕ ಡಿ.21 ಭಾನುವಾರ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಮತ್ತು ಧ್ಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹರೀಶ್.ಎಸ್ ಇಂಜಾಡಿ ಅಧ್ಯಕ್ಷರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವ್ಯವಸ್ಥಾಪನ ಸಮಿತಿ, ಗಣೇಶ್ ಪ್ರಸಾದ್ ನಾಯರ್ ಅಧ್ಯಕ್ಷರು ಕುಮಾರಸ್ವಾಮಿ ವಿದ್ಯಾಲಯ, ನಾರಾಯಣ ಶಿಬರಾಯ ಜಿಲ್ಲಾ ಸಂಚಾಲಕರು, ಪ್ರಭಾಕರ ಪಡ್ರೆ ಕಾರ್ಯಕ್ರಮ ಸಂಚಾಲಕರು...

ಚೊಕ್ಕಾಡಿ : ಡಿ.22ರಂದು “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಹಾಲು ಕರೆಯುವ ಸ್ಪರ್ಧೆ”

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ದಕ್ಷಿಣ ಕನ್ನಡ, ಸುಳ್ಯ ತಾಲೂಕು ಪಶುವೈದ್ಯಕೀಯ ಆಸ್ಪತ್ರೆ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಕುಲಶೇಖರ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ನಿ. ಚೊಕ್ಕಾಡಿ-ಕಳಂಜ-ಕುಕ್ಕುಜಡ್ಕ, ಲಕ್ಷ್ಮೀ ಫೀಡ್ಸ್ & ಫಾರ್ಮ್ಸ್ ಮಂದಾರ್ತಿ ಉಡುಪಿ ಜಿಲ್ಲೆ, ಬ್ಯಾಂಕ್...

ಕೊಲ್ಲಮೊಗ್ರು : ಅಮಾನತಿನಲ್ಲಿದ್ದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ತೆಗೆದುಕೊಳ್ಳಲು ಆದೇಶ

ಕೆಲವು ತಿಂಗಳುಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಂತೋಷ್ ಎಂಬುವವರ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅವರನ್ನು ಅಮಾನತಿನಲ್ಲಿರಿಸಿತ್ತು. ಇದನ್ನು ಪ್ರಶ್ನಿಸಿ ಸಂತೋಷ್ ರವರು ಜಿಲ್ಲಾ ಪಂಚಾಯತ್ ನ...

ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ – ಸಾರ್ವಜನಿಕರಿಗೆ ಮ್ಯಾಪಿಂಗ್ ಮಾಡಿಸಿಕೊಳ್ಳಲು ಸೂಚನೆ ; ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು ಹಾಗೂ ಹೊಸದಾಗಿ ಸೇರ್ಪಡೆಗೊಂಡವರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ಮುಖಾಂತರ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಮ್ಯಾಪಿಂಗ್...

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

ಸುಳ್ಯ ನಗರ ಪಂಚಾಯತ್‌ ಅನುದಾನದಡಿ ಬೂಡು ವಾರ್ಡ್‌ನಲ್ಲಿ ಪ್ರಗತಿಯಲ್ಲಿರುವ ವಿವಿಧ ಜನಪರ ಕೆಲಸಗಳನ್ನು ಬೂಡು ವಾರ್ಡ್ ನ ನಿಕಟ ಪೂರ್ವ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ರವರು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ರವರೊಂದಿಗೆ ವೀಕ್ಷಿಸಿದರು.ವಾಲಸಿರಿಮಜಲು ಪ್ರದೇಶದ ಚರಂಡಿ ದುರಸ್ತಿ ಹಾಗೂ ಸ್ಲ್ಯಾಬ್ ಅಳವಡಿಕೆ ಕಾರ್ಯ, ಬೂಡು ಪರಿಶಿಷ್ಟ ಜಾತಿ(SC) ಕಾಲೋನಿಯಲ್ಲಿ ನಿರ್ಮಾಣವಾಗುತ್ತಿರುವ...
Loading posts...

All posts loaded

No more posts

error: Content is protected !!