ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ(ಆ.29) ಶಾಲೆ ಹಾಗೂ ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಆ.29 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆ.31: ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ ; ದರುಶನದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ  ನೆರವೇರಲಿದೆ. ನಂತರ...
Ad Widget

ಕುಕ್ಕೆ ಸುಬ್ರಹ್ಮಣ್ಯ : ಸೆ.07 ರಂದು ಚಂದ್ರಗ್ರಹಣದ ನಿಮಿತ್ತ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...

ಪಾಲೆಪ್ಪಾಡಿ : ಗಣೇಶೋತ್ಸವ , ಸಾಧಕರಿಗೆ ಸನ್ಮಾನ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವುಗಳ ಆಶ್ರಯದಲ್ಲಿ 33ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ರಂದು ಮಂಜುಶ್ರೀ ಕ್ರೀಡಾಂಗಣ ದರ್ಖಾಸ್ತು ಪಾಲೆಪ್ಪಾಡಿ ಇಲ್ಲಿ ಜರುಗಿತು. ಆ.27 ರಂದು ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠಾಪನೆ ನಡೆಯಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ...

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಪಂಜ ದೇವಸ್ಥಾನಕ್ಕೆ ಭೇಟಿ

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ ವಿ ರವರು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ಶ್ರೀ ದೇವರ ದರ್ಶನ ಪಡೆದರು. ಬಳಿಕ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಅವರನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಶಾಲು ಹೊದಿಸಿ ಗೌರವಿಸಿದರು. ದೇವಳದ ಅರ್ಚಕ...

ದೇವರಹಳ್ಳಿ : 29ನೇ ವರ್ಷದ ಗಣೇಶೋತ್ಸವ

ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು. ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ...

ಹಳೆಗೇಟು : ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ 42ನೇ  ಗಣೇಶೋತ್ಸವ

ಸಾಂಸ್ಕೃತಿಕ ಸಂಘ ಹಳೆಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಅಗಸ್ಟ್ 27ರಂದು ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ...

ಸುಳ್ಯ : ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ವೃತ್ತಿ ಜೀವನ ಯಶಸ್ವಿಗೆ ವಿಘ್ನ ವಿನಾಯಕನಲ್ಲಿ ವಿಶೇಷ ಪ್ರಾರ್ಥನೆ

ಎಸ್.ಎಸ್.ಸಿ.ಜಿ.ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಅರಂತೋಡು ಗ್ರಾಮದ ಆಡ್ತಲೆಯ ಕು.ಸುಶ್ಮಿತಾ.ಎಂ.ಎ ಇವರ ವೃತ್ತಿ ಜೀವನವು ಯಶಸ್ವಿಯಾಗಲು ವಿಘ್ನ ವಿನಾಯಕ ಆಶೀರ್ವಾದ ನೀಡುವಂತೆ ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಆರಾಧಿಸಲ್ಪಡುವ ಶ್ರೀ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಲಾಯಿತು.‌ ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ...

ಮೇದಿನಡ್ಕ ಶ್ರೀ ಗಣೇಶ ಚತುರ್ಥಿ ಆಚರಣೆ

ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...

ಪಂಜ : ಗಣೇಶೋತ್ಸವ

ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ  ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ‌ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.
Loading posts...

All posts loaded

No more posts

error: Content is protected !!