ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಆಲೆಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.6 ನೇ ತರಗತಿಯ ಮುಹಮ್ಮದ್ ಸಾಹಿಲ್, ಶೇಖ್ ಮುಹಮ್ಮದ್ ಮರ್ಝೂಖ್, 7ನೇ ತರಗತಿಯ ಶೇಖ್ ಮುಹಮ್ಮದ್ ಫವಾಝ್, ಶರಫುದ್ದೀನ್, 8 ನೇ ತರಗತಿಯ ಮುಹಮ್ಮದ್ ತಫ್ಸೀರ್ ಹಾಗೂ ಅಹ್ಮದ್ ಮುಯೀನುದ್ದೀನ್  ಈ ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾ.ಪಂ. ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್...
Ad Widget

ಐವರ್ನಾಡು : ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.26 ರಂದು ಮುಂಜಾನೆ ಐವರ್ನಾಡಿನಲ್ಲಿ ನಡೆದಿದೆ.ದರ್ಕಾಸ್ ರಬ್ಬರ್ ಫ್ಯಾಕ್ಟರಿ ಬಳಿಯ ನಿವಾಸಿ ವಿಜಯಕಾಂತ ಎಂಬವರ ಪುತ್ರ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.‌ ತನ್ನ ಮನೆಯ ಸಮೀಪದ ಸಾರ್ವಜನಿಕ ಬಾವಿಗೆ ಕೌಶಿಕ್ ಕುಮಾರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪೈಚಾರಿನ ಮುಳುಗು ತಜ್ಞರು ಬಂದು ಬಾವಿಯಿಂದ ಮೃತದೇಹವನ್ನು ಮೇಲೆತ್ತಿದ್ದಾರೆ....

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ವಿಮಾ ಮೊತ್ತ ಹಸ್ತಾಂತರ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪಂಚಶ್ರೀ ವಿಕಾಸ ವಾಹಿನಿ ಸ್ವಸಹಾಯ ಸಂಘದ ಸದಸ್ಯರಾದ ಶಂಕರರವರು  ಮೃತಪಟ್ಟಿದ್ದು, ಇವರ ಜೀವ ಭದ್ರತಾ ವಿಮಾ ಮೊತ್ತ ರೂ. 75,000/- ದ ಚೆಕ್ ಅನ್ನು ಅವರ ಪತ್ನಿ ಮೀನಾಕ್ಷಿಯವರಿಗೆ  ಸುಳ್ಯ ಓಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ಧ ಸಹಕಾರಿ ಸಂಘದ ವತಿಯಿಂದ ನೀಡಲಾಯಿತು.‌...

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸ್ವಾಗತಿಸಿ ವರದಿ ವಾಚಿಸಿದರು.ಕಾರ್ಯದರ್ಶಿ ಸುಂದರ ಸಾರ್ವಜನಿಕರ ಅರ್ಜಿ ಓದಿದರು.ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪಂಚಾಯತ್ ರಾಜ್ ಇಲಾಖೆಯಲ್ಲಿ ಇಂಜಿನಿಯರ್ ಕೊರತೆ ಇದ್ದು ಪಂಚಾಯತ್ ಕೆಲಸಗಳು ವಿಳಂಬ ಆಗುತ್ತಿದೆ. ಶೀಘ್ರ ಸರ್ಕಾರ...

ಕುಕ್ಕೆ ಸುಬ್ರಹ್ಮಣ್ಯ : ನಾಗ ಪ್ರತಿಷ್ಠಾ ಮಂಟಪದ ಬಳಿ ಪ್ರಸಾದಕ್ಕಾಗಿ ಸೇವಾರ್ತಿಗಳ ಜಮಾವಣೆ

ಸುಬ್ರಹ್ಮಣ್ಯ ಆಗಸ್ಟ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗೌರಿ ತೃತೀಯದಲ್ಲಿ ಶೃಂಗೇರಿ ಮಠದ ಪಕ್ಕದಲ್ಲಿ ಗೌರಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಇದೇ ಭಾಗದ ಎದುರುಗಡೆಯಲ್ಲಿ ಭಕ್ತಾದಿಗಳು ಆದಿ ಸುಬ್ರಹ್ಮಣ್ಯ ಯಾಗ ಶಾಲೆಯಲ್ಲಿ ಸೋಮವಾರ ಸರ್ಪಸಂಸ್ಕಾರ ಪೂಜೆಯನ್ನು ಮುಗಿಸಿ ಇಂದು ಕುಕ್ಕೆ ಕ್ಷೇತ್ರದ ನಾಗ ಪ್ರತಿಷ್ಠಾ ಮಂಟಪದಲ್ಲಿ ನಾಗ ಪ್ರತಿಷ್ಠೆ ಸೇವೆಯನ್ನು ಸಲ್ಲಿಸಿ...

ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟ – ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ರನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಜೂನಿಯರ್ ಕಾಲೇಜು ಗುತ್ತಿಗಾರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ   ವಾಲಿಬಾಲ್ ಪಂದ್ಯಾಟದಲ್ಲಿ   ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಧನ್ವಿ.ಕೆ, ದೀಕ್ಷಾ ಹತ್ತನೇ, ಖುಷಿ, ವೈಷ್ಣವಿ.ಜಿ.ಕೆ, ಮಿತ್ರ 9ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಸ್ಟ್  ಸ್ಮ್ಯಾಶರ್...

ಹರಿಹರ ಪಲ್ಲತ್ತಡ್ಕ : ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘದ ಒಕ್ಕೂಟಗಳು, ವಲಯ ಜನಜಾಗೃತಿ ವೇದಿಕೆ, ವಲಯ ಭಜನಾ ಪರಿಷತ್ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಇದರ ವತಿಯಿಂದ ಸುಳ್ಯ ತಾಲೂಕಿನಲ್ಲಿ ನಡೆಯುವ ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ ಸಭೆಯಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷರಾದ ತೀರ್ಥರಾಮ...

ಸುಬ್ರಹ್ಮಣ್ಯದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭ

ಸುಬ್ರಹ್ಮಣ್ಯ ಆಗಸ್ಟ್ 26 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ಸೊಸೈಟಿ ಕಟ್ಟಡದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭಗೊಂಡಿತು.ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ 5,491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುವ ಗುರಿಯನ್ವಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...

ಪಂಜ : ದೇವಸ್ಥಾನದಲ್ಲಿ ಕದಿರು ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಮಾಡಲಾಯಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗೆದರು. ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಐ...
Loading posts...

All posts loaded

No more posts

error: Content is protected !!