- Thursday
- July 30th, 2026
ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯ ವಠಾರದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಎಸ್. ಸಿ, ಎಸ್. ಟಿ. ಕುಂದು ಕೊರತೆ ಸಭೆ ಜು. 4ರಂದು ನಡೆಯಿತು.ಬೆಳ್ಳಾರೆ ಠಾಣೆಯ ಎ.ಎಸ್.ಐ. ಕುಂಞ ಅವರು ಅಹವಾಲು ಆಲಿಸಿದರು. ಅವರು ಅಮಲು ಪದಾರ್ಥ ಸೇವನೆ ವಿರುದ್ಧ ಕೇಸಿನ ಟೆನ್-51,ಅಮಲು ಪದಾರ್ಥ ಸೇವಿಸುವವರನ್ನು ಸರಿದಾರಿಗೆ ತರುವ ಟೆನ್-52,...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 29 ಸೋಮವಾರದಿಂದ ಜುಲೈ 04...
ಸುಳ್ಯ, ಜು. 4: ರಾಷ್ಟ್ರಾದ್ಯಂತ ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದರು. ಅವರು...
ಸುಬ್ರಹ್ಮಣ್ಯ ಜುಲೈ 04: ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕಡಬ ತಾಲೂಕು ಪಂಚಾಯತ್ ಹಾಗೂ ಮಹಾತ್ಮ ಗಾಂಧಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸುಬ್ರಹ್ಮಣ್ಯದ ಕಾಶಿಕಟ್ಟೆಯಿಂದ ಮುಖ್ಯ ರಸ್ತೆಯಾಗಿ ಕುಮಾರಧಾರ, ಕುಲ್ಕುಂದ, ವೆಂಕಟಪುರದವರೆಗೆ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು...
ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಜುಲೈ 01 ರಂದು 'ಮಾದಕ ದ್ರವ್ಯಗಳ ಬಳಕೆ ವಿರುದ್ಧ ಅರಿವು' ಕಾರ್ಯಕ್ರಮವು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಮಾದಕ ದ್ರವ್ಯ ಎಂದರೇನು? ಅದರ ದುಷ್ಪರಿಣಾಮವೇನು? ತಡೆಗಟ್ಟುವ ವಿಧಾನಗಳಾವುವು? ಹಾಗೂ ಇತರ ಮಾಹಿತಿಯನ್ನು ಗಣೇಶ ಪ್ರಸಾದ್, ಪ್ರೊಬೆಶನರಿ ಪಿಎಸ್ಐ ಪೊಲೀಸ್ ಸ್ಟೇಷನ್ ಬೆಳ್ಳಾರೆ ಇವರು ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಸ್ಟೇಷನ್...
ಸುಳ್ಯ ಪಟ್ಟಣ ಪಂಚಾಯತ್ ನ ಬೋರುಗುಡ್ಡೆ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಹಿಂದೆ ಮನವಿ ಸಲ್ಲಿಸಿದ್ದರು. ನಗರ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ಬಾರಿ ನೇರವಾಗಿ ನಗರಾಭಿವೃದ್ಧಿ ಇಲಾಖೆಗೆ ಎಸ್.ಡಿ.ಪಿ.ಐ ನಾವೂರು ಬ್ರಾಂಚ್ ಕಾರ್ಯದರ್ಶಿ ಮೊಹಮ್ಮದ್ ಸಾಜಿದ್ ರವರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಸ್ಥಳೀಯರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಿಂದೆ...
ಅಲೆಟ್ಟಿ ಗ್ರಾಮದ ದೋಣಿಮೂಲೆ ಮನೆಯ ಸೂಂತೋಡು ದಿ. ಶಿವಣ್ಣ ಗೌಡರ ಪತ್ನಿ ಎಸ್. ಜಾನಕಿ ಎಂಬವರು ಇಂದು ಸಂಜೆ (ಜುಲೈ 4) ರಂದು ವಯೋ ಸಹಜವಾಗಿ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 96 ವರ್ಷ ವಯಸ್ಸಾಗಿತ್ತು.ಮೃತರು ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಳ್ಯ, ಜು. 4: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯದಲ್ಲಿ ಶನಿವಾರ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ನ ಅಧ್ಯಕ್ಷರಾದ ರೊ. ಮೇಜರ್ ಡೋನರ್ ಲತಾ ಮಧುಸೂದನ್ ವಹಿಸಿದ್ದರು. ಕಾಲೇಜಿನ ಸಂಚಾಲಕರಾದ ರೊ. ಪಿಪಿ ಎಂಪಿಎಚ್ಎಫ್ ಪ್ರಭಾಕರನ್ ನಾಯರ್ ವಿದ್ಯಾರ್ಥಿಗಳು ಉನ್ನತ...
ದಿನಾಂಕ : 04 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
2025-26ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು 3ನೇ ಸುತ್ತಿನಲ್ಲಿ ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಸಾನ್ವಿ ಬಿ.ಜಿ. ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಸುಳ್ಯ ಬೆಟ್ಟಂಪಾಡಿಯ ಗೌರಿಶಂಕರ ಮತ್ತು ಸವಿತಾ ಕುಮಾರಿ ದಂಪತಿಗಳ ಪುತ್ರಿ ಸುಳ್ಯದ ಸೈoಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಬಿ.ಜಿ....
Loading posts...
All posts loaded
No more posts
