Ad Widget

ಸುಬ್ರಹ್ಮಣ್ಯ : ಬಸ್ಸಿನ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಪ್ರತಿಭಟನೆ – ಸರಿಪಡಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎಚ್ಚರಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ “ಭಾವ ತೀರ ಯಾನ – ಮಾರ್ಚ್ 21ರಂದು ಸಂಜೆ 4.00 ಗಂಟೆಗೆ ಚಿತ್ರ ಪ್ರದರ್ಶನ – 5 ನೇ ವಾರಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ನಾಯಕ, ನಾಯಕಿ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಭೇಟಿ

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ "ಭಾವ ತೀರ ಯಾನ " ಮಾ. 21ರಂದು ಶುಕ್ರವಾರ ಸಂಜೆ 4.00 ಗಂಟೆಗೆ ಪುತ್ತೂರಿನ ಭಾರತ್ ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರ 5 ನೇ ವಾರಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಚಿತ್ರತಂಡದ ನಾಯಕ, ನಾಯಕಿಯರೂ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಆಗಮಿಸಲಿದೆ. ಜತೆಗೆ ತುಳು ಚಿತ್ರರಂಗದ...
Ad Widget

ಕೆ. ಎಸ್.ಎಸ್ ಕಾಲೇಜಿನಲ್ಲಿ ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸ

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ 01/03/2025 ರಂದು ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.ಖ್ಯಾತ ವನ್ಯಜೀವಿ ಸಂರಕ್ಷಕ ಭುವನೇಶ್ ಕೈಕಂಬ ಅವರು ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯನಾಶ, ಪರಿಸರ ಮಾಲಿನ್ಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಮುಂತಾದ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗುವ ಮಾನವ...

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ನೂತನ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ರವರಿಗೆ ಅಭಿನಂದನೆ

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕಿ ಡಾ.ಅಭಿಜ್ಞಾ ಕೆ.ಆರ್ ಮುಖ್ಯ ಕಾರ್ಯನಿರ್ವವಣಾಧಿಕಾರಿ ಡಾ.ಉಜ್ವಲ್ ಯು.ಜೆ,...

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಮಾ.19ರಂದು ರಾತ್ರಿ ಶ್ರೀ ರುಧಿರ ಚಾಮುಂಡಿ ದೈವದ ನೇಮೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಂಜೆ ನಡುಬೆಟ್ಟು ಚಾವಡಿಯಿಂದ ಶ್ರೀ ದೈವಗಳ ಭಂಡಾರ ಆಗಮಿಸಿ ರುಧಿರ ಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ...

ಮಾರ್ಚ್ 20 : ವಿಶ್ವ ಬಾಯಿ ಆರೋಗ್ಯ ದಿ‌ನ

ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಬಾಯಿ ಆರೋಗ್ಯ ದಿನ ಎಂದು ಆಚರಿಸಿ ಬಾಯಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸಲಾಗುತ್ತದೆ. 2007ರಲ್ಲಿ ಈ ಆಚರಣೆ ಆರಂಭವಾಯಿತು. ಬಾಯಿಯ ಆರೋಗ್ಯವನ್ನು ಕಾಪಾಡುವುದು ಹೇಗೆ ಮತ್ತು ಬಾಯಿ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಹದ ಆರೋಗ್ಯದ ಮೇಲೆ ಉಂಟಾಗುವ ಧನ್ಮಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸದುದ್ದೇಶ ಈ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕ

ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ ನಡೆದ 2024-25ನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್‌ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ, 8ನೇ ಸೆಮಿಸ್ಟರ್ ವಿದ್ಯಾರ್ಥಿ ಟಿಷನ್ ಮಾದಪ್ಪ ಅವರು 21 ಕಿಲೋ ಮೀಟರ್ ಹಾಗೂ 5೦೦೦ ಮಿ. ಓಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಅದಲ್ಲದೆ...

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾಗಿ ವಿನುತಾ ಪಾತಿಕಲ್ಲು ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ‌ ಒಕ್ಕೂಟ ‌ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ‌ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು‌ ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು...

ತಿಂಗಳು ಪೂರೈಸುತ್ತಿರುವ ಭಾವ ತೀರ ಯಾನ – ಮಾರ್ಚ್ 20 ರಂದು ಸಂಜೆ 7.30ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 20 ರಂದು ಗುರುವಾರ ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...

ಪಂಜ : ಯುವ ತೇಜಸ್ಸು ಬಳಗದಿಂದ ಸಹಾಯಧನ‌ ಹಸ್ತಾಂತರ

ಐವತೊಕ್ಲು ಗ್ರಾಮದ ಪಲ್ಲೋಡಿ ನಿವಾಸಿ ,ಮೀನಾಕ್ಷಿ ಇವರು ಕಳೆದ ಒಂದು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಯುವ ತೇಜಸ್ಸು ಬಳಗದಿಂದ ಆರ್ಥಿಕ ಸಹಾಯಧನದ ₹. 12000/- ಚೆಕ್ ಅನ್ನು ಮಾ.16ರಂದು ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವ ತೇಜಸ್ಸು ಬಳಗದ ಸದಸ್ಯರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!