- Saturday
- September 12th, 2026
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ., ಬಿ.ಸಿ.ರೋಡ್ ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಬೆಳಗ್ಗೆ 10.30ಕ್ಕೆ ಸುಳ್ಯದ ಗಾಂಧಿನಗರದ ಆರ್.ಕೆ. ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ....
ಪಂಜ: ಕ್ಷೇತ್ರಕ್ಕೆ ಪೂಜೆಗಾಗಿ ಅರ್ಚಕರನ್ನು ನಿಯೋಜಿಸುವ ಮೊದಲು ಅವರ ಕುಟುಂಬದ ಹಿನ್ನೆಲೆ, ಈ ಹಿಂದೆ ಅವರು ಎಲ್ಲಿ ಸೇವೆ ಸಲ್ಲಿಸಿದ್ದಾರೆ ಹಾಗೂ ಅವರ ಅರ್ಹತೆಗಳೇನು ಎಂಬುದನ್ನು ಆಡಳಿತ ಮಂಡಳಿಯು ಕೂಲಂಕಷವಾಗಿ ಪರಿಶೀಲಿಸಿ ಕರೆತರಬೇಕಾದ ಮಹತ್ವದ ಜವಬ್ದಾರಿ ಇದೆ ಎಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ತಿಳಿಸಿದ್ದಾರೆ.ಕ್ಷೇತ್ರಕ್ಕೆ...
ಗುತ್ತಿಗಾರು: ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ಮತ್ತು 15ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 14ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, 9.15ರಿಂದ ಸಾಮೂಹಿಕ ಗಣಪತಿ ಹವನ...
ಸುಳ್ಯ, ಸೆ. 9: ಸುಳ್ಯ ತಾಲೂಕು ಪ್ರೌಢಶಾಲಾ ವಿಭಾಗದ ಬಾಲಕ–ಬಾಲಕಿಯರ ಖೋ-ಖೋ ಪಂದ್ಯಾಟವು ಸೆ. 9ರಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಯಾನಂದ ಮುತ್ಲಾಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ . ಜಿ.ಎಂ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ...
ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14 ಮತ್ತು 15ರಂದು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಸೆ.14ರಂದು ಬೆಳಗ್ಗೆ 8.30ಕ್ಕೆ ಸ್ಥಳಶುದ್ಧಿ ಹಾಗೂ ಗಣಪತಿ ಪ್ರತಿಷ್ಠೆ, 10.30ರಿಂದ ಸ್ಥಳೀಯ ಭಕ್ತರಿಂದ...
ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ(ರಿ.), ಸುಳ್ಯ ಹಾಗೂ ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ವತಿಯಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 58ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14ರಿಂದ 18ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.14ರಂದು ಬೆಳಗ್ಗೆ 7.30ಕ್ಕೆ ಗಣಪತಿ ಹವನ ಹಾಗೂ ಮೂರ್ತಿ ಪ್ರತಿಷ್ಠೆ ನಡೆಯಲಿದ್ದು, ಬೆಳಗ್ಗೆ...
ಸುಳ್ಯ: ಮಲೆನಾಡಿನ ಆಚಾರ–ವಿಚಾರ, ಆಹಾರ ಪದ್ಧತಿ, ಸಂಸ್ಕೃತಿ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜಂಟಿ ಕ್ರಿಯಾ ಸಮಿತಿ (ರಿ.) ಸುಳ್ಯ, ದಕ್ಷಿಣ ಕನ್ನಡ ಹಾಗೂ ರೈತ ಸಂಘದ ವತಿಯಿಂದ ಸೆಪ್ಟೆಂಬರ್ 18ರಂದು ಮಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಮಲೆನಾಡು ಪ್ರದೇಶಕ್ಕೆ ಸಂವಿಧಾನದ 371ನೇ ವಿಧಿಯಡಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬುದು...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಸೆ.09ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಕೊಲ್ಲಮೊಗ್ರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡುತ್ತಾ “ಕಸ್ತೂರಿ...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಗ್ರಾಮಸ್ಥರು ಸೆ.09ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಹರಿಹರ ಪಳ್ಳತ್ತಡ್ಕ ಗ್ರಾಮ ಆಡಳಿತ ಅಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡುತ್ತಾ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರಾಗಿ ಶೇಷಗಿರಿ ಭಟ್ ಶಿರಸಿ ಅವರು ನೇಮಕ ಗೊಂಡಿದ್ದು ಆವರು ಕ್ಷೇತ್ರ ತಂತ್ರಿಗಳಾದ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಸದಸ್ಯ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ,ಚೆಂಡೆ ವಾದಕ ಸುಕುಮಾರನ್...
Loading posts...
All posts loaded
No more posts
