Ad Widget

ಕಂದ್ರಪ್ಪಾಡಿ ಜಾತ್ರೋತ್ಸವ – ಭಕ್ತರಿಗೆ ಅಭಯ ನೀಡಿದ ಪುರುಷ ದೈವ ಹಾಗೂ ರಾಜ್ಯದೈವ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವ ವಿಜ್ರಂಭಣೆಯಿಂದ ನಡೆಯಿತು.ಮಾ.14 ರಂದು ಮುಂಡೋಡಿ ತರವಾಡು ಮನೆಯಿಂದ ಮತ್ತು ಶ್ರೀ ರುದ್ರಚಾಮುಂಡಿ ದೈವಸ್ಥಾನದಿಂದ ದೈವದ ಭಂಡಾರ ಆಗಮನ, ಉಗ್ರಾಣ ತುಂಬಿಸುವ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು. ತಳೂರು ಹಾಗೂ ಮಾಳಿಗೆಯಿಂದ ಪಲ್ಲಕ್ಕಿ ಉತ್ಸವದೊಂದಿಗೆ ದೈವಗಳ ಭಂಡಾರ ತರುವ ಕಾರ್ಯಕ್ರಮ ನಡೆಯಿತು.ಮಾ....

ಗುತ್ತಿಗಾರಿಗೆ ಆಗಮಿಸಿದ ನಂದಿ ರಥಯಾತ್ರೆ – ಪೂರ್ಣಕುಂಭ ಸ್ವಾಗತ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು ಇಂದು ಗುತ್ತಿಗಾರಿಗೆ ಆಗಮಿಸಿದ್ದು ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು. ಸಂಜೆ ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಗೆ ಜ್ಯೋತಿ ಸರ್ಕಲ್ ನಲ್ಲಿ ಸ್ವಾಗತ...
Ad Widget

ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ಕರ್ ನೇಮಕ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ನೂತನವಾಗಿ ರಚಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ಕರ್ ಇವರು ನಾಮನಿರ್ದೇಶನಗೊಂಡಿರುತ್ತಾರೆ. ದ. ಕ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಈ ಸಮಿತಿಯಲ್ಲಿ ಜಿಲ್ಲೆಯ ಒಟ್ಟು ಐವರು ಸದಸ್ಯರುಗಳಿದ್ದಾರೆ. ಈ ನಿಗಮದ ಮೂಲಕ ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ...

ಎಂಎಸ್‌ಡಬ್ಲೂ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಪಂಜದ ಆಯಿಶತುಲ್ ಜಾಫ್ನ

ಎಂಎಸ್‌ಡಬ್ಲೂ ಪದವಿಯಲ್ಲಿ 1ನೇ ಬ್ಯಾಂಕ್ ಪಡೆಯುವ ಮೂಲಕ ಪಂಜದ ಆಯಿಶತುಲ್‌ ಜಾಪ್ಟರವರು ಊರಿಗೆ ಕೀರ್ತಿ ತಂದಿದ್ದಾರೆ. ಕೊಣಾಜೆಯ ಮಂಗಳೂರು ಯೂನಿವರ್ಸಿಟಿಯ ವಿದ್ಯಾರ್ಥಿನಿಯಾಗಿರುವ ಇವರು 2023-2024ನೇ ಸಾಲಿನಲ್ಲಿ ನಡೆದ ಎಂಎಸ್‌ಡಬ್ಲೂ ಪದವಿ ಪರೀಕ್ಷೆಯಲ್ಲಿ ಮೊದಲ ಬ್ಯಾಂಕ್‌ ಪಡೆದಿದ್ದಾರೆ. ಇವರು ಪಂಜ ಕಾಲೇಜು ಬಳಿಯ ನಿವಾಸಿ ಅಬ್ದುಲ್ ಕರೀಂ ಮತ್ತು ಜಮೀಲಾ ದಂಪತಿಗಳ ಪುತ್ರಿ.

ಪುತ್ತೂರು : 4ನೇ ವಾರದಲ್ಲಿ ಮುನ್ನಡೆಯುತ್ತಿರುವ ಭಾವ ತೀರ ಯಾನ – ಮಾ.15 ಮತ್ತು 16 ರಂದು ಶೋ ನೋಡಲು ಅವಕಾಶ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.15 ಶನಿವಾರದಂದು ಮಧ್ಯಾಹ್ನ 1.45 ಕ್ಕೆ ಹಾಗೂ ಮಾ.16 ಆದಿತ್ಯವಾರದಂದು ಮಧ್ಯಾಹ್ನ 2-30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book...

ಹೀಟ್ ಸ್ಟ್ರೋಕ್ (ಶಾಖಾಘಾತ)

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಅರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲಿ ಬೆಂಡಾಗಿ ಹೀಟ್ ಸ್ಟ್ರೋಕ್ಗೆ ತುತ್ತಾಗುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್‌ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.ನಮ್ಮ ದೇಹದಲ್ಲಿ ನಿರಂತರವಾಗಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ...

ಕನಕಮಜಲು : ಮಾ 27 ಮತ್ತು 28 ರಂದು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ಮಾ.‌ 27 ಮತ್ತು 28 ರಂದು ನಡೆಯಲಿದೆ. ಮಾ. 20 ಗುರುವಾರದಂದು ಬೆಳಿಗ್ಗೆ ಗಂಟೆ 7-00ಕ್ಕೆ ಗೊನೆ ಮುಹೂರ್ತ ನಡೆಯಲಿದೆ. ಮಾ. 23 ಆದಿತ್ಯವಾರದಂದು ರಾತ್ರಿ ಗಂಟೆ 7-00ಕ್ಕೆ ದೈವಸ್ಥಾನ ಪುನಃ ಪ್ರತಿಷ್ಠಾ ದಿನದ ಅಂಗವಾಗಿ ಕೈವೀದು...

ಸುಳ್ಯ : ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.13ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ...

ಮಡಪ್ಪಾಡಿ : ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ಕೊಡುಗೆ

ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ...

ಮಾ.16 : ಕುಕ್ಕುಜಡ್ಕದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಅಮರ ಸಂಘಟನಾ ಸಮಿತಿ (ರಿ.), ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇದರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಮಾ. 16 ಭಾನುವಾರದಂದು ಕುಕ್ಕುಜಡ್ಕದ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು. ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!