- Saturday
- April 25th, 2026
ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿಯ ಬೊಳಿಯಾನ ಮನೆಯ ಮಹಿಳೆಯೋರ್ವರ ಮೈಮೇಲೆ ಬೆಂಕಿ ತಗಲಿ ಗಾಯಗೊಂಡಿದ್ದು, 10 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.ಬೊಳಿಯಾನ ಮನೆ ದಿ.ಚಿನ್ನಪ್ಪ ಗೌಡ ಅವರ ಪತ್ನಿ ತಿಲಕ ಮಾ.10ರಂದು ಅಡುಗೆ ಮನೆಯಲ್ಲಿ ಬೆಳಿಗ್ಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹಿಡಿದು ತಿಲಕರವರ...
ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ...
ದಿನಾಂಕ : 20 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯ : “ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ...
ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಮಾರ್ಚ್ 20) ಈದುಲ್ ಫಿತ್ವರ್(ರಂಝಾನ್ ಹಬ್ಬ) ಆಚರಣೆಗೆ ನಿರ್ಧರಿಸಲಾಗಿದೆ. ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ ಈದುಲ್ ಫಿತ್ವರ್ ಆಚರಿಸಲಾಗುತ್ತದೆ.ಮಧುರ ಹಬ್ಬದಾಚರಣೆಗೆ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿಯೂ ಮಾರ್ಚ್ 20 ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ( ವರದಿ: ಮುಸ್ತಾಫ ಬೆಳ್ಳಾರೆ)
ಕಲ್ಲುಗುಂಡಿ ಸ್ಟಡಿ ಲಿಂಕ್ ಟ್ಯುಟೋರಿಯಲ್ನ 06 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಚೆಂಬು ಗ್ರಾಮದ ಪರಿವಾರ ಶಿವಪ್ರಕಾಶ್ ಪಿ.ಕೆ ಹಾಗೂ ಪ್ರಮೀಳಾ ಪಿ.ಎಸ್ ದಂಪತಿಗಳ ಪುತ್ರಿ ಗೂನಡ್ಕ ಮಾರುತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿಕ್ಷಾ, ನೀರಬಿದಿರೆ ಪ್ರಶಾಂತ್ ಎನ್.ಜೆ ಹಾಗೂ ಸುಮಲತಾ ಎಂ.ಪಿ ದಂಪತಿಗಳ ಪುತ್ರ ದಿಶಾನ್ ಎನ್.ಪಿ, ಹಂಡನ ಪುರುಷೋತ್ತಮ ಹೆಚ್.ಎಸ್ ಹಾಗೂ ಸವಿತಾ.ಜಿ ದಂಪತಿಗಳ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ವೈತ್ ಹುಂಡೈ ಸುಳ್ಯ ಶಾಖಾ ಮೆನೇಜರ್ ಸುಮನಾ ಬೆಳ್ಳಾರ್ಕರ್ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಾಹಿತಿಗಳಾದ ವಿಮಲಾರುಣ ಪಡ್ಡಂಬೈಲು ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯ ಒಳಿತು ಕೆಡುಕುಗಳ ಬಗ್ಗೆ ಮಾತನಾಡಿದರು. ಗ್ರಂಥಾಲಯದ ಸ್ಪೋಕನ್ ಇಂಗ್ಲಿಷ್ ಶಿಕ್ಷಕಿ ಗೀತಾಂಜಲಿ ಟಿ.ಜಿ ಅಧ್ಯಕ್ಷತೆ...
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಹಾಲ್ ನಲ್ಲಿ “ಸಿಂಧೂರ ಬಿಗ್ಗೆಸ್ಟ್ ಸೀರೆ ಮೇಳ” ವು ಮಾ.17ರಿಂದ ಮತ್ತೆ ಪ್ರಾರಂಭಗೊಂಡಿದ್ದು, ಯುಗಾದಿ ಹಬ್ಬದ ಸಂಭ್ರಮದ ಈ ಸಂದರ್ಭದಲ್ಲಿ ಹೊಸ ಹೊಸ ಸೀರೆಗಳ ಬೃಹತ್ ಸಂಗ್ರಹವೇ ಇಲ್ಲಿ ಲಭ್ಯವಿದ್ದು, ಟ್ರೆಂಡಿ ಡಿಸೈನ್ ಗಳ ಹೊಸ ಹೊಸ ಸ್ಟೈಲ್ ಗಳ ಸಿಲ್ಕ್, ಕಾಟನ್, ಡಿಸೈನರ್, ಡೈಲಿವೇರ್ ಹೀಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿ ಎರಡನೇ ಸಭೆ ಮಾ.19 ರಂದು ನಡೆಯಿತು. ಸಭೆಯಲ್ಲಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಾಧಿಕಾರ ರಚನೆ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ಶಿವರಾಮ್ ರೈ ಅವರು, “ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಿಂದ ಭೂಸ್ವಾಧೀನದ ಆತಂಕ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರೋರ್ವರು ಕಾಶಿಕಟ್ಟೆಯ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಕಸ ಎಸೆದ ಘಟನೆ ನಡೆಯಿತು. ಈ ಸಂಧರ್ಭದಲ್ಲಿ ಸ್ವಚ್ಛ ಜಾಗೃತಿ ಸಮಿತಿ ಅಭಿಯಾನದ ಸದಸ್ಯರಾದ ಶಿವರಾಮ್ ರೈ ಹಾಗೂ ಪವನ್ ಎಮ್.ಡಿ ಸ್ಥಳಕ್ಕೆ ಆಗಮಿಸಿ ಕಸವನ್ನು ಎಸೆಯದಂತೆ ಮತ್ತು ಸ್ವಚ್ಛ ಭಾರತವೆಂಬ ಅಭಿಯಾನವಿದ್ದು, ಈ ರೀತಿ ಪುಣ್ಯ ಕ್ಷೇತ್ರಕ್ಕೆ ಬಂದು ಎಲ್ಲೆಂದರಲ್ಲಿ ಕಸ...
Loading posts...
All posts loaded
No more posts
