ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 18 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿ ಯ ಜ್ಞಾನದೀಪ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಒಟ್ಟು 18 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಅಮರಪಡ್ನೂರು ಗ್ರಾಮದ ಮಂಗಲ್ಪಾಡಿ ಮನೋಹರ ಎಂ ಮತ್ತು ಲಲಿತಾ...

ಸುಳ್ಯ : 110ಕೆವಿ ವಿದ್ಯುತ್ ಲೈನ್ ನಿರ್ಮಾಣ ವಿಳಂಬ ಸಾಧ್ಯತೆ – ರೈತರ ಸಭೆ ಕರೆದ ಶಾಸಕರು – ಈಗ ಯೋಜಿಸಿರುವ ಮಾರ್ಗ ಬದಲಿಸಲು ರೈತರ ಒತ್ತಾಯ

ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ತುರ್ತಾಗಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣವಾಗಿಬೇಕಿದ್ದು, ಇದೀಗ ಲೈನ್ ನಿರ್ಮಾಣಕ್ಕೆ ರೈತರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ರೈತರಿಗೆ ನೊಟೀಸ್ ನೀಡದೇ ಕೃಷಿ ಜಾಗಗಳಿಗೆ ಅಧಿಕಾರಿಗಳು ಬಂದು ದಬ್ಬಾಳಿಕೆ ಹಾಗೂ ಬೆದರಿಕೆ...
Ad Widget

ಓಡಬಾಯಿ : ಧೂಮಾವತಿ , ಮೂಕಾಂಬಿಕಾ ಗುಳಿಗ ದೈವಸ್ಥಾನದ ದಾರಂದ ಮೂಹೂರ್ತ – ಮೇ 01 ರಂದು ಪ್ರತಿಷ್ಠಾ ಬ್ರಹ್ಮಕಲಶ, ಮೇ 08,09 ರಂದು ದೈವಗಳ ನೇಮ

ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

“ಭಾವ ತೀರ ಯಾನ” ಚಲನಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ – ಮಾ.27 ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಮಾ.27ರಂದು ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಉಬರಡ್ಕ : ಮಾವಿನ ಮಿಡಿ ಕೊಯ್ಯುವಾಗ ಮರದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಉಬರಡ್ಕದಲ್ಲಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದ ಪರಿಣಾಮ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಜನಾರ್ದನ ಪೂಜಾರಿಯವರು ಮಾ.22ರಂದು ಕೆಲಸಕ್ಕೆ ಹೋಗಿದ್ದರು. ಅಲ್ಲಿ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ...

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸಲು ಚಿಂತನೆ – ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನಾಂಕ

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಸುವುದಾಗಿ ಚಿಂತನೆ ನಡೆಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಏಪ್ರಿಲ್ ತಿಂಗಳ 5ನೇ ತಾರೀಖಿನೊಳಗೆ ಹೆಸರನ್ನು ನೋಂದಾಯಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತೀರ್ಥಕುಮಾರ್ ಕುಂಚಡ್ಕ ತಿಳಿಸಿದ್ದಾರೆ. ವಿವಾಹದ ದಿನಾಂಕವನ್ನುನಿಗದಿಪಡಿಸಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ 72598944079483288240, 9449471373 ಇವರನ್ನು ಸಂಪರ್ಕಿಸಬಹುದು.

ಅರಂತೋಡಿನಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ – ಗ್ರಾ. ಪಂ. ಮನವಿಗೆ ಶೀಘ್ರ ಸ್ಪಂದಿಸಿದ ಸುಳ್ಯದ ಪಶು ವೈದ್ಯಾಧಿಕಾರಿ ನಿತಿನ್ ಪ್ರಭು

ಆರಂತೋಡಿನ ಮನೆಯೊಂದರ ಕೆಲಸಕ್ಕೆ ಬಂದು ನಾಯಿ ಕಡಿತದಿಂದ ನಾಲ್ಕೈದು ದಿನಗಳ ಹಿಂದೆ ಸಂಪಾಜೆಯ ಗೂನಡ್ಕದಲ್ಲಿ ಮಹಿಳೆಯೊಬ್ಬರು ಮೃತರಾದ ಹಿನ್ನಲೆಯಲ್ಲಿ ಆರಂತೋಡು ಗ್ರಾಮ ಪಂಚಾಯತ್ ಆಡಳಿತ ತಕ್ಷಣ ಕಾರ್ಯಪ್ರವೃತ್ತವಾಗಿ ಸುಳ್ಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ನಿತಿನ್ ಪ್ರಭು ಅವರ ಸಹಕಾರದಿಂದ ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯ ಮಾಡಲಾಯಿತು. ಆರಂತೋಡು ಮತ್ತು ತೊಡಕಾನ...

ಸಂವಿಧಾನ ಬದಲಾವಣೆ ಕುರಿತು ಡಿಕೆಶಿ  ಹೇಳಿಕೆಗೆ ಸುಳ್ಯ ಬಿಜೆಪಿ ಖಂಡನೆ – ಕ್ಷಮೆಯಾಚನೆಗೆ ಒತ್ತಾಯ

ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಡಿಕೆಶಿ ತಮ್ಮ ಹೇಳಿಕೆ ಹಿಂಪಡೆದು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.‌ಸಭೆಯಲ್ಲಿ ಮುಖಂಡರಾದ ಪಿ.ಕೆ.ಉಮೇಶ್, ಯುವ...

ಪೈಚಾರ್: ವಿದ್ಯುತ್ ತಂತಿ ಮೇಲೆ ಬಿದ್ದ ತೆಂಗಿನ ಮರ – ತಪ್ಪಿದ ಸಂಭಾವ್ಯ ಅಪಾಯ

ಸುಳ್ಯದಲ್ಲಿ ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಪೈಚಾರ್ ಜಂಕ್ಷನ್ ನಲ್ಲಿ ರಸ್ತೆ ಯ ಬದಿಯಲ್ಲಿದ್ದ ತೆಂಗಿನ ಮರವೊಂದು 11ಕೆ.ವಿ. ವಿದ್ಯುತ್ ಲೈನ್  ಮೇಲೆ ಬಿದ್ದು ರಸ್ತೆಯ ಕಡೆ ವಾಲಿ ನಿಂತಿದೆ. ಮರ ಬಿದ್ದ ಸಂದರ್ಭ ವಿದ್ಯುತ್ ತಂತಿ ತುಂಡು ಆಗದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ತೆಂಗಿನ ಮರ ಇನ್ನಷ್ಟೇ ತೆರವುಗೊಳ್ಳಬೇಕಿದೆ.
Loading posts...

All posts loaded

No more posts

error: Content is protected !!