- Tuesday
- August 11th, 2026
ಸುಬ್ರಹ್ಮಣ್ಯ ಮಾ .21: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಮುಂದಿನ ತಿಂಗಳು ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ ಅವರು ಭೇಟಿ ನೀಡುವ ಸಮಯದಲ್ಲಿ ಪೂರ್ವ ತಯಾರಿ ಹಾಗೂ ಪರಿಶೀಲನೆಗಾಗಿ ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಬೆಳ್ಳಾರೆ ಅವರು ಬುಧವಾರ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಭವನದಲ್ಲಿ ಕ್ಲಬ್ ಅಸೆಂಬ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಬ್ರಹ್ಮಣ್ಯ ರೋಟರಿ...
ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ...
ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಂದ ರಸ್ತೆಯ ಬಾಳ್ವಿಕೆ ಕಡಿಮೆಯಾಗಿ ಹೊಸದಾಗಿ ನಿರ್ಮಾಣಗೊಂಡ ರಸ್ತೆಗೂ ಹಾನಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಡ್ತಲೆ ಭಾಗದ ನಾಗರಿಕರು ವಾಹನ ತಡೆದು ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.ಈ ಹಿಂದೆಯೇ ರಸ್ತೆಯ ಧಾರಣಾ ಸಾಮರ್ಥ್ಯಕ್ಕಿಂತ ಅಧಿಕ ಭಾರದ ವಾಹನಗಳನ್ನು ನಿರ್ಬಂಧಿಸಿ...
ಇತ್ತೀಚಿನ ಕೆಲವು ದಿನಗಳಿಂದ ವಾತಾವರಣದ ಉಷ್ಣತೆ ಹೆಚ್ಚಾಗುತ್ತಿದ್ದು ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸಾಯುತ್ತಿವೆ. ಒಂದು ಹನಿ ನೀರಿಗೂ ಪರಿತಪಿಸುವ ಈ ಸಂದರ್ಭದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಸುತ್ತ ನೀರಿಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸ್ಕೌಟ್ಸ್...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಹೌಸ್ ಫುಲ್ ಪ್ರದರ್ಶನದೊಂದಿಗೆ 5 ನೇ ವಾರಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಇಂದು ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಸಂಭ್ರಮಾಚರಣೆ ನಡೆಯಿತು. ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು, ನಟ ತೇಜಸ್ ಕಿರಣ್,ಸಂದೀಪ್ ರಾಜಗೋಪಾಲ್,...
ವಿಶ್ವ ಜಲ ದಿನದ ಅಂಗವಾಗಿ ಕರ್ನಾಟಕದ ಜೀವನಾಡಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾರ್ಯಕ್ರಮ ಕಾವೇರಿ ಆರತಿ ಇಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಭಾಗಮಂಡಲದ ತಲ ಕಾವೇರಿ ಯಲ್ಲಿ ಪೂಜೆ ಸಲ್ಲಿಸಿ ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಆವರಣದಲ್ಲಿ ಕಾವೇರಿ ಆರತಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ಯುವ ಕಾಂಗ್ರೆಸ್...
ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ, ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ. ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ.” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ...
ವಿದ್ಯಾರ್ಥಿಗಳೇ,ಪರೀಕ್ಷೆಗಳು ಬರುತ್ತಿವೆ ಇನ್ನೇನು ಹತ್ತಿರ, ಆಗದಿರಿ ನೀವು ಭಯಪಟ್ಟು ತತ್ತರ, ಧೈರ್ಯದಿಂದ ಬರೆಯಿರಿ ಕೇಳಿರುವ ಪ್ರಶ್ನೆಗಳಿಗೆ ಉತ್ತರ…ನೀವು ವರ್ಷಪೂರ್ತಿ ಓದಿರುವ ಪಾಠಗಳೇ, ಕಲಿತಿರುವ ಪ್ರಶ್ನೆಗಳೇ ಬರುವುದು ಪರೀಕ್ಷೆಯಲ್ಲಿ ಭಯವೇಕೆ ಇನ್ನು, ಮನದೊಳಗಿನ ಭಯಬಿಟ್ಟು ಹಿಡಿದುಕೊಳ್ಳಿರಿ ಪೆನ್ನು…ಓದುವ ಪಾಠಗಳಲ್ಲಿ ಸಂದೇಹಗಳಿದ್ದರೆ ತೆಗೆದುಕೊಳ್ಳಿರಿ ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನು, ಪರೀಕ್ಷೆಗೆ ತೆರಳುವ ಮೊದಲು ಪಡೆದುಕೊಳ್ಳಿರಿ ನಿಮ್ಮ ತಂದೆ-ತಾಯಿಯ ಆಶೀರ್ವಾದವನ್ನು…ಹೆತ್ತವರ ಆಶೀರ್ವಾದದಿಂದ,...
Loading posts...
All posts loaded
No more posts
