ಮಂಡೆಕೋಲು : ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿ

ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...

ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧಿ ಯೋಜನೆ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಮಾವಿನಕಟ್ಟೆ ಶ್ರೀ ವಿಷ್ಣು ಮೂರ್ತಿ ದೈವಸ್ಥಾನ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾಪ್ರತಿನಿಧಿ ಭಾಗವಹಿಸಿ ಸಹಕರಿಸಿದರು.
Ad Widget

ಸೂಡ ಅಧ್ಯಕ್ಷರಿಂದ ನೂತನ ಪುತ್ತೂರು ಸಹಾಯಕ ಕಮಿಶನರ್ ಭೇಟಿ – ಪೌರ ಕಾರ್ಮಿಕರಿಗೆ ಜಮೀನು ಮಂಜೂರಾತಿಗೆ ಮನವಿ

ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟೆಲ್ಲ. ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂಮುಸ್ತಫ ಪುತ್ತೂರು ಎಸಿ ಕಚೇರಿ ಯಲ್ಲಿ ಭೇಟಿಯಾದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ...

ಕಾಜಿಮಡ್ಕ : ಕಾರು ಪಲ್ಟಿ – ಮೂವರು ಪ್ರಯಾಣಿಕರು ಪಾರು

ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...

ಮಾ.31:ತಾಲೂಕು ವೈದ್ಯಾಧಿಕಾರಿ ನಂದಕುಮಾರ್ ನಿವೃತ್ತಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನ

ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾ‌ರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಮಾ.೨೦ ರಂದು ಡಾ.ನಂದಕುಮಾರ್‌ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್‌ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ'...

ಸುಬ್ರಹ್ಮಣ್ಯ : ಬಸ್ಸಿನ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಪ್ರತಿಭಟನೆ – ಸರಿಪಡಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎಚ್ಚರಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ “ಭಾವ ತೀರ ಯಾನ – ಮಾರ್ಚ್ 21ರಂದು ಸಂಜೆ 4.00 ಗಂಟೆಗೆ ಚಿತ್ರ ಪ್ರದರ್ಶನ – 5 ನೇ ವಾರಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ನಾಯಕ, ನಾಯಕಿ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಭೇಟಿ

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ "ಭಾವ ತೀರ ಯಾನ " ಮಾ. 21ರಂದು ಶುಕ್ರವಾರ ಸಂಜೆ 4.00 ಗಂಟೆಗೆ ಪುತ್ತೂರಿನ ಭಾರತ್ ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರ 5 ನೇ ವಾರಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಚಿತ್ರತಂಡದ ನಾಯಕ, ನಾಯಕಿಯರೂ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಆಗಮಿಸಲಿದೆ. ಜತೆಗೆ ತುಳು ಚಿತ್ರರಂಗದ...

ಕೆ. ಎಸ್.ಎಸ್ ಕಾಲೇಜಿನಲ್ಲಿ ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸ

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ 01/03/2025 ರಂದು ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.ಖ್ಯಾತ ವನ್ಯಜೀವಿ ಸಂರಕ್ಷಕ ಭುವನೇಶ್ ಕೈಕಂಬ ಅವರು ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯನಾಶ, ಪರಿಸರ ಮಾಲಿನ್ಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಮುಂತಾದ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗುವ ಮಾನವ...

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ನೂತನ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ರವರಿಗೆ ಅಭಿನಂದನೆ

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕಿ ಡಾ.ಅಭಿಜ್ಞಾ ಕೆ.ಆರ್ ಮುಖ್ಯ ಕಾರ್ಯನಿರ್ವವಣಾಧಿಕಾರಿ ಡಾ.ಉಜ್ವಲ್ ಯು.ಜೆ,...
Loading posts...

All posts loaded

No more posts

error: Content is protected !!