ಕುಕ್ಕುಜಡ್ಕ : ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಅಂಚೆ ಜನಸಂಪರ್ಕ ಅಭಿಯಾನ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಪಘಾತ ವಿಮೆ ನೊಂದಣಿ ಶಿಬಿರ ಮಾ. 16 ರಂದು ಕುಕ್ಕುಜಡ್ಕ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಾಪಕಾಧ್ಯಕ್ಷರಾದ ಪ್ರದೀಪ್ ಬೊಳ್ಳೂರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಎಂ ಬಿ...

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ಮೃತ್ಯು

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ. ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ...
Ad Widget

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025

ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ...

ಏ.01 ರಂದು ಸುಳ್ಯದಲ್ಲಿ ನಿರಂತರ ಯೋಗ ಕೇಂದ್ರದ ಯೋಗ ತರಗತಿ ಆರಂಭ

ಈಗಾಗಲೇ ಏನೆಕಲ್ಲು, ಪಂಜ, ನಿಂತಿಕಲ್ಲು ಹಾಗೂ ಪೆರ್ಲಂಪಾಡಿ ಯಲ್ಲಿ ಯೋಗ ತರಗತಿಯನ್ನು ನಡೆಸುತ್ತಿರುವ ಶರತ್ ಮರ್ಗಿಲಡ್ಕ ರವರ “ನಿರಂತರ ಯೋಗ ಕೇಂದ್ರ”ದ ನೂತನ ಯೋಗ ತರಗತಿಯು ಏಪ್ರಿಲ್ 01 ರಂದು ಸುಳ್ಯದ ಬಸ್ ನಿಲ್ದಾಣದ ಎದುರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪ್ರಾರಂಭಗೊಳ್ಳಲಿದ್ದು, ಯೋಗಾಸಕ್ತರು ಈ ಯೋಗ ತರಗತಿಯು ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಯೋಗ...

ಕೈಕಂಬ : ನಡುತೋಟ ಶಿರಾಡಿ ದೈವದ ನೇಮೋತ್ಸವ

ಸುಬ್ರಹ್ಮಣ್ಯ ಮಾ.15: ಸುಬ್ರಹ್ಮಣ್ಯ ಸಮೀಪದ ಕೈಕಂಬ ನಡುತೋಟ ಶ್ರೀ ಶಿರಾಡಿ ದೈವದ ವಾರ್ಷಿಕ ನೇಮೋತ್ಸವ ಶುಕ್ರವಾರ ರಾತ್ರಿಯಿಂದ ಆರಂಭಗೊಂಡು ಶನಿವಾರ ಮಧ್ಯಾಹ್ನ ತನಕ ಜರಗಿತು.ಶುಕ್ರವಾರ ಸಂಜೆ ಶಿರಾಡಿ ದೈವದ ಚಾವಡಿಯಿಂದ ಭಂಢಾರ ತೆಗೆದು ಕೊಡಿನಾಡದಲ್ಲಿ ಇಡಲಾಯಿತು. ತದನಂತರ ದೈವಗಳಿಗೆ ಎಣ್ಣೆ ಇಡಲಾಯಿತು.ನಾಗಭ್ರಹ್ಮ, ಪಂಜುರ್ಲಿ, ಗುಳಿಗ, ಸತ್ಯದೇವತೆ ಮುಂತಾದ 15 ದೈವಗಳು ನರ್ತನ ಸೇವೆಯನ್ನು ಮಾಡಿ ಕೊನೆಗೆ...

ದ.ಕ.ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕಿಗೆ 29 ಪ್ರಶಸ್ತಿ

ದಕ್ಷಿಣ ಕನ್ನಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಮಾ.13 ಹಾಗೂ 14 ರಂದು ನಡೆದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರುಗಳು ಭಾಗವಹಿಸಿ 29 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.ಮಾ.13 ರಂದು ನಡೆದ ಕ್ರೀಡಾಕೂಟದಲ್ಲಿ ಕಂದಾಯ...

ಹರಿಹರ ಪಳ್ಳತ್ತಡ್ಕ : ಸತತ ನಾಲ್ಕೈದು ದಿನಗಳಿಂದ ನಿರಂತರ ಆನೆ ದಾಳಿ ; ಕೃಷಿಗೆ ಅಪಾರ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ದೇವರುಳಿಯ ಎಂಬಲ್ಲಿನ ಪುಂಡರೀಶ ಎಂಬುವವರ ತೋಟಕ್ಕೆ ಹಾಗೂ ಅವರ ತೋಟದ ಅಕ್ಕಪಕ್ಕದ ತೋಟಗಳಿಗೆ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಆನೆ ದಾಳಿ ಮಾಡುತ್ತಿದ್ದು, ಆನೆ ದಾಳಿಯಿಂದ ತೋಟದಲ್ಲಿ ಬೆಳೆದ ಕಂಗು, ತೆಂಗು, ಬಾಳೆ ಕೃಷಿಗೆ ಅಪಾರ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಂದಿ ರಥಯಾತ್ರೆಗೆ ಸ್ವಾಮೀಜಿ ಹಾಗೂ ಸಾರ್ವಜನಿಕರಿಂದ ಭವ್ಯ ಸ್ವಾಗತ

ವಿಷಮುಕ್ತ ಗಾಳಿ, ಮಣ್ಣು, ಆಹಾರ, ಪ್ರಕೃತಿ, ಪರಿಸರ ಸಂರಕ್ಷಣೆ, ಪಂಚಗವ್ಯ ಚಿಕಿತ್ಸೆ, ರೋಗಮುಕ್ತ ಭಾರತ, ಸಾಮೂಹಿಕ 1,11,108 ವಿಷ್ಣು ಸಹಸ್ರನಾಮ ಪಾರಾಯಣ, ಒಂದು ಕೋಟಿ ಗೋಮಯ ದೀಪ ಬೆಳಗಿಸುವುದು, ನಂದಿ ಪೂಜೆ, ಗೋಕಥೆ, ಮನೆಮನೆಯಲ್ಲಿ ಗೋವು, ದೇಶಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವುದು, ದೇಶಿ ಗೋಮಾತೆ ಹಾಗೂ ಭೂಮಾತೆಗೆ ಇರುವ ಸಂಬಂಧ ಜನರಿಗೆ ತಿಳಿಸುವುದು, ಗೋಮಾತೆ...

ಕೊಲ್ಲಮೊಗ್ರು : ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ವಾಹನ ಹಸ್ತಾಂತರ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ತ್ಯಾಜ್ಯ ವಿಲೇವಾರಿ ವಾಹನದ ಹಸ್ತಾಂತರ ಕಾರ್ಯಕ್ರಮವು ಮಾ.12 ರಂದು ನಡೆಯಿತು.ಕೀರ್ತಿ ಸಂಜೀವಿನಿ ಒಕ್ಕೂಟದ ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿದೆ. ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಕಟ್ಟ ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರುಗಳಾದ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಚಲನಚಿತ್ರ ನಟ ಪ್ರಭುದೇವ

ಸುಬ್ರಹ್ಮಣ್ಯ ಮಾ.15: ಖ್ಯಾತ ನೃತ್ಯ ಸಂಯೋಜಕ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಹಾಗೂ ನಟರಾದ ಪ್ರಭುದೇವ ಅವರು ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.ಪ್ರಭುದೇವ, ಅವರ ಪತ್ನಿ ಹಾಗೂ ಕುಟುಂಬವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.ತದನಂತರ ದೇವಳದ ಕಚೇರಿಯಲ್ಲಿ...
Loading posts...

All posts loaded

No more posts

error: Content is protected !!