ಕಂದ್ರಪ್ಪಾಡಿ : ಶ್ರೀ ರಾಜ್ಯದೈವ ಮತ್ತು ಪುರುಷ ದೈವಸ್ಥಾನಕ್ಕೆ ಹರ್ಷಕುಮಾರ್ ಮುಂಡೋಡಿ ಮನೆಯವರಿಂದ ಸಮರ್ಪಣೆಯಾಗಲಿರುವ ಪಲ್ಲಕ್ಕಿಗೆ ಸ್ವಾಗತ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಕ್ಕೆ ಹರ್ಷಕುಮಾರ್ ಮುಂಡೋಡಿ ಮನೆಯವರಿಂದ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು ಮಾ. 08 ರಂದು ಕ್ಷೇತ್ರಕ್ಕೆ ಆಗಮಿಸಿದ ಪಲ್ಲಕ್ಕಿಗೆ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಲ್ಲಕ್ಕಿಯ ಕೆತ್ತನೆ ಕೆಲಸ ಮಾಡಿದ ಶಿಲ್ಪಿಗಳಾದ ಹರೀಶ್  ರವರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ದೈವಸ್ಥಾನಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ...

ಕೆ.ಎಸ್.ಎಸ್. ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಏನೆಕಲ್ಲಿನಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮವನ್ನು  ಮಾ.8ರಂದು ಹಮ್ಮಿಕೊಳ್ಳಲಾಯಿತು. ಸಮಾಜಶಾಸ್ತ್ರ ವಿಭಾಗದ ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು....
Ad Widget

ಹರಿಹರ ಸೊಸೈಟಿ ಚುನಾವಣೆ ಫಲಿತಾಂಶ ಹೈಕೋರ್ಟ್ ತಡೆಯಾಜ್ಞೆಯಿಂದ ವಿಳಂಬವಾಗಿದೆ – ಮಾಜಿ ಅಧ್ಯಕ್ಷ ಹರ್ಷಕುಮಾರ ದೇವಜನ

ಕೊಲ್ಲಮೊಗರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 19ರಂದು ನಡೆದಿದ್ದು, ಈ ಚುನಾವಣೆಯಲ್ಲಿ ಸಹಕಾರಿ ಅಭಿವೃದ್ಧಿ ಬಳಗ, ಸಹಕಾರ ಭಾರತಿ, ಹಾಗೂ ಸ್ವಾಭಿಮಾನ ಬಳಗದ ಮೂರು ತಂಡಗಳು ಸ್ಪರ್ಧಿಸಿರುತ್ತವೆ. ಈ ಪೈಕಿ ಆಡಳಿತ ಮಂಡಳಿ ರಚನೆಗೆ ವಿಳಂಬವಾಗಿರುವುದು ಉಚ್ಚ ನ್ಯಾಯಾಲಯದಿಂದ ತಂದಿರುವ ತಡೆಯಾಜ್ಜೆಯಲ್ಲಿ ಮತದಾನದ ಹಕ್ಕಿನಲ್ಲಿ ಸುಸ್ತಿದಾರರು ಹಾಗೂ ಮೃತಪಟ್ಟವರ ಹೆಸರಿರುವುದಿಂದ ಆಗಿರುತ್ತದೆ...

ಐವರ್ನಾಡಿನಲ್ಲಿ ತಮಿಳು ಸಿನಿಮಾ ಶೂಟಿಂಗ್

ಐವರ್ನಾಡಿನಲ್ಲಿ ತಮಿಳು,ತೆಲುಗು ಚಲನಚಿತ್ರಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ. ಕೆಲದಿನಗಳಿಂದ ಗ್ರಾಮದ ಬೇರೆ,ಬೇರೆ ಕಡೆಗಳಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಹಲವು ಜನರು ಭಾಗವಹಿಸುತ್ತಿದ್ದಾರೆ.ಇಂದು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ಎದುರು ಚಿತ್ರೀಕರಣ ನಡೆಯುತ್ತಿದೆ. ತಮಿಳುನಾಡಿನ ಸುಮಾರು 80 ಜನರು ಈ ಚಿತ್ರೀಕರಣ ತಂಡದಲ್ಲಿದ್ದು ಐವರ್ನಾಡಿನ ಯುವಕರು ಕೂಡ ಇವರೊಂದಿಗೆ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣ ತಂಡದವರು ಸುಳ್ಯದ ಕಮಾಂಡ‌ರ್ ಜೀಪುಗಳನ್ನು ಹಾಗೂ ಇತರ...

17ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಪುತ್ತೂರಿನಲ್ಲಿ ನಾಳೆ ಸಂಜೆ 4.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು.   ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ  ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 17 ನೇ ದಿನಕ್ಕೆ ಕಾಲಿರಿಸಿದೆ.  ಮಾ. 09ರಂದು ಸಂಜೆ 4.15 ಕ್ಕೆ  ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ.  ಕೌಂಟರ್‌'ನಲ್ಲಿ ಟಿಕೆಟ್...

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು...

ಕಾಯರ್ತೋಡಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ. ವೆಂಕಪ್ಪ ಗೌಡ

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ  ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ,  ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್  ಕಲ್ಮಡ್ಕ ...

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಮಿತಿಗೆ ಆಡಳಿತ ಹಸ್ತಾಂತರ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಸಮಿತಿಯ ಆಡಳಿತ ಹಸ್ತಾಂತರ ಪ್ರಕ್ರಿಯೆಯು ಮಾ.6 ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಅವರಿಗೆ ಲೆಕ್ಕಪತ್ರಗಳನ್ನು ನೀಡುವ ಮೂಲಕ ಗುತ್ತಿಗಾರು ಪಿಡಿಒರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸನತ್ ಮುಳುಗಾಡು, ಜಯಾನಂದ ಪಟ್ಟೆ, ಪುರುಷೋತ್ತಮ ಬದಿಯಡ್ಕ, ಉಷಾ ಮಲ್ಕಜೆ ಉಪಸ್ಥಿತರಿದರು.

ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಸರಕಾರದಿಂದ ಬಜೆಟ್ ನಲ್ಲಿ ಘೋಷಣೆ, ಸುಳ್ಯದ ಹೋರಾಟ ಸಮಿತಿಯಿಂದ ಅಭಿನಂದನೆ, ಕಾಲೇಜಿಗೆ ಕುಮಾರಿ ಸೌಜನ್ಯ ಹೆಸರಿಡಲು ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಸರಕಾರಿ ಮೆಡಿಕಲ್‌ ಕಾಲೇಜನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವುದನ್ನು ನಾವು ಸ್ವಾಗತಿಸುತ್ತೇವೆ, ಸರಕಾರವನ್ನು ಅಭಿನಂದಿಸುತ್ತೇವೆ ಎಂದು ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಅಶೋಕ್‌ ಎಡಮಲೆ ತಿಳಿಸಿದರು. ಮಾ.7ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು...

ರಸ್ತೆ ಬದಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವುದನ್ನು ತೆರವುಗೊಳಿಸಲು ಸೂಚನೆ

ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ವ್ಯಾಪಾರಿಗಳು...
Loading posts...

All posts loaded

No more posts

error: Content is protected !!