ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಳ್ಯ: ತಾಲೂಕು ಪಂಚಾಯತ್ ಬಳಿ ಭಗವತಿ ಸ್ಟೋರ್ ನೂತನ ಆಡಳಿತದೊಂದಿಗೆ ಶುಭಾರಂಭ

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಭಗವತಿ ಸ್ಟೋರ್ ಮಾ. ೦2ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ದೊರಕುವ ಸಾಮಾಗ್ರಿಗಳು, ದಿನಸಿ ವಸ್ತುಗಳಾದ ಅಕ್ಕಿ, ಬೇಳೆ, ದವಸ ಧಾನ್ಯ, ಚಾ ಹುಡಿ, ಸಕ್ಕರೆ, ಬೆಲ್ಲ, ಪರಿಶುದ್ಧ ಎಣ್ಣೆ ಹಾಗೂ ಇತರ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲು, ಜ್ಯೂಸ್, ಐಸ್ ಕ್ರೀಂ, ಸ್ವೀಟ್ಸ್,...
Ad Widget

ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ಕೇರ್ಪಡ ಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 5 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 5,00,000 ಮೊತ್ತದ ಡಿಡಿ ಹಸ್ತಾಂತರ ಮಾಡಲಾಯಿತು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಬೇರೆ ಬೇರೆ ಕಾರ್ಯಕ್ರಮಗಳಿಗೆ ನೀಡುವ ಅನುದಾನಗಳ ಬಗ್ಗೆ.. ಯೋಜನೆಯಿಂದ ಸದಸ್ಯರಿಗೆ...

ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಗಬ್ಬಲಡ್ಕ

ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದ "ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಗಬ್ಬಲಡ್ಕ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರ ಸೂಚನೆಯಂತೆ ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಚಯರ್ ಮೆನ್ ನಿಕೇತ್ ರಾಜ್ ಮೌರ್ಯ ನೇಮಕಗೊಳಿಸಿದ್ದಾರೆ. ಪ್ರಸ್ತುತ ಇವರು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರೋಟರಿ ಸಂಸ್ಥೆಯ ವತಿಯಿಂದ ಸೋಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಉದ್ಘಾಟನೆ

ರೋಟರಿ ಸಂಸ್ಥೆಯ ವತಿಯಿಂದ ಸೋಣಂಗೇರಿಯಲ್ಲಿ ಸುಮಾರು 3.45 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಉದ್ಘಾಟನೆ ಇಂದು ನಡೆಯಿತು. ರೋಟರಿ ಜಿಲ್ಲಾ 3181 ರ ಗವರ್ನರ್ ವಿಕ್ರಂ ದತ್ತ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಡಾ. ಶಿವಪ್ರಸಾದ್ , ಝೋನ್ 5 ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಕೆ., ರೋ.ಪ್ರಭಾಕರ ನಾಯರ್,...

ಮಾರ್ಚ್ 1 & 2 ರಂದು ದೇವಶ್ಯ ಗೌಡ ಕಪ್ -2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ

ಮಾರ್ಚ್ 1 ಹಾಗೂ ಮಾರ್ಚ್ 2 ಗುತ್ತಿಗಾರಿನಲ್ಲಿ ಮೂರನೇ ವರ್ಷದ ದೇವಶ್ಯ ಗೌಡ ಕಪ್-2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.ದಕ್ಷಿಣಕನ್ನಡ, ಕೊಡಗು, ಕಾಸರಗೋಡು ಜಿಲ್ಲೆಗಳ ಮೂರನೇ ವರ್ಷದ ನಿಗದಿತ ಓವರ್ ಗೌಡ ಮನೆತನಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 1 ಶನಿವಾರ ಹಾಗೂ ಮಾರ್ಚ್ 2 ಆದಿತ್ಯವಾರ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಹೆಣ್ಣು ಮಗುವನ್ನು ಓದಿಸಿ ಹೆಣ್ಣು ಮಗುವನ್ನು ರಕ್ಷಿಸಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಅಂಗನವಾಡಿ ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಯೋಜನೆ ಅನುಷ್ಠಾನದಲ್ಲಿ ಮಹಿಳೆಯರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸರ್ಕಾರದ...

ಅರಂಬೂರು : ವ್ಯಕ್ತಿ ಆತ್ಮಹತ್ಯೆ

ಅರಂಬೂರು ನಿವಾಸಿ ವೆಂಕಟೇಶ್ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಷಯ ಗೊತ್ತಾಗಿ ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.

ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದ ಭಾವ ತೀರ ಯಾನ –  ಫೆ.28 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ   ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದೆ.  ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಫೆ.28ರಂದು ಸಂಜೆ 4.15...

ಮಾಸ್ ನಿಂದ ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕ ಆರಂಭ –  ಫೆ.28 ರಂದು ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು ಮಾಸ್ ಲಿಮಿಟೆಡ್ ಇವರಿಂದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕ ಆರಂಭಗೊಳ್ಳಲಿದ್ದು, ಇದರ ಉದ್ಘಾಟನಾ ಸಮಾರಂಭವು ಫೆ.28 ರಂದು ಸುಳ್ಯದ ಎ.ಪಿ.ಎಂ.ಸಿ. ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ...
Loading posts...

All posts loaded

No more posts

error: Content is protected !!