ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಂದ ಜಾಗೃತಿ ಕಾರ್ಯ – ಮಹಾಶಿವರಾತ್ರಿ ಪಾದಯಾತ್ರಿಗಳಿಗೆ ಪೂರಕ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಧರ್ಮಸ್ಥಳಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ - ಮರ್ಧಾಳ ಮೂಲಕ ಪಾದಯಾತ್ರೆ ಕೈಗೊಂಡಿರುವ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸ್ವಚ್ಚತೆ ಹಾಗೂ ಪೂರಕ ವ್ಯವಸ್ಥೆ ಮೂಲಕ ಜಾಗೃತಿ ಕಾರ್ಯ ಕೈಗೊಳ್ಳಲಾಗಿದೆ.ಬಿಸ್ಲೆ ಘಾಟ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪಾದಯಾತ್ರಿಗಳು ಸುಬ್ರಹ್ಮಣ್ಯದ ಕುಲ್ಕುಂದ - ಕೈಕಂಬ ಮೂಲಕ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಹಬ್ಬ

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮಾಚರಣೆಯ, ದಶ ಕಾರ್ಯಕ್ರಮಗಳ ಅಂಗವಾಗಿ ಚಿಣ್ಣರ ಹಬ್ಬ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಉದ್ಘಾಟಿಸಿ ಮಾತನಾಡಿ ಪುಟಾಣಿಗಳ ಮನಸ್ಸನ್ನು ಅರಳಿಸುವುದೇ ಚಿಣ್ಣರ ಹಬ್ಬ ಕಾರ್ಯಕ್ರಮ ಮುಖ್ಯ ಆಶಯ ವಾಗಲಿ ಎಂದರು. ಕರ್ನಾಟಕ...
Ad Widget

ಪೀಚೆಮನೆ ಪವನಕುಮಾರ್ ನಿಧನ

ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.25 ನಿಧನರಾದರು. ಪತ್ನಿ ಸುಮಕಲಾ, ಪುತ್ರಿ ವೈಷ್ಣವಿ, ಪುತ್ರ ಸುಹಾನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಫೆ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು, ಆ ಪ್ರಯುಕ್ತ ಮದ್ಯಾಹ್ನ ಏಕಾದಶ ರುದ್ರಾಭಿಷೇಕ ಹಾಗೂ ರಾತ್ರಿ 7:00 ಗಂಟೆಗೆ ಶಿವಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಹಳೆಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಬೋಳಾರ ಮಂಗಳೂರು ಇವರಿಂದ...

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಆರೋಪಿಗಳ ದೋಷಮುಕ್ತಿ

ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಅವರನ್ನು ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದರು.‌ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು...

ಅರಂಬೂರು (ಆಲೆಟ್ಟಿ ಗ್ರಾಮ ಕುದ್ಕುಳಿ) ಮನೆತನದ ದೈವಸ್ಥಾನದಲ್ಲಿ ಶ್ರೀ ದೈವಗಳ ನಡಾವಳಿ ನೇಮೋತ್ಸವ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿರುವ ಅರಂಬೂರು ಮನೆತನದ ಕುದ್ಕುಳಿ ಎಂಬಲ್ಲಿ ಶ್ರೀ ವಿಷ್ಣುಮೂರ್ತಿ ಶ್ರೀ ಧರ್ಮದೈವ ಹಾಗೂ ಶ್ರೀ ಕುಕ್ಕೆತ್ತಿಬಲ್ಲು ಸಪರಿವಾರ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ರುದ್ರ ಚಾಮುಂಡಿ, ಕುಕ್ಕೆತ್ತಿ ಬಲ್ಲು ಹಾಗೂ ಉಪದೈವಗಳ ನಡಾವಳಿ ನೇಮೋತ್ಸವ ಫೆ.22 ಹಾಗೂ 23 ರಂದು ನಡೆಯಿತು. ಫೆ.22 ರಂದು ಬೆಳಿಗ್ಗೆ ಚಾವಡಿಯಲ್ಲಿ ಶ್ರೀ ವೆಂಕಟೇಶ ಶಾಸ್ತ್ರೀ...

ಸುಳ್ಯ ನಗರಕ್ಕೆ ಯೋಜನಾ ಪ್ರಾಧಿಕಾರ ರಚಿಸಿ ಸರಕಾರದ ಆದೇಶ

ಸುಳ್ಯ ಪಟ್ಟಣಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 2011 ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿಯಲ್ಲಿ ಸುಳ್ಯ ಪಟ್ಟಣ ಪಂಚಾಯತ್‌ ವ್ಯಾಪ್ತಿಯನ್ನು ಸ್ಥಳೀಯ ಯೋಜನಾ ಪ್ರದೇಶವನ್ನಾಗಿ ಘೋಷಿಸಿ ಸುಳ್ಯ ಪಟ್ಟಣ ಪಂಚಾಯತ್ ಯೋಜನಾ ಪ್ರಾಧಿಕಾರ ಎಂದು ಆದೇಶಿಸಲಾಗಿತ್ತು. ಅದರಂತೆ ಇದನ್ನು ಇದೀಗ ಪ್ರತ್ಯೇಕ ಯೋಜನಾ...

ಕಲ್ಲುಗುಂಡಿ : ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ

ಸುಳ್ಯ ರೈತ ಉತ್ಪಾದಕರ ಕಂಪನಿ ವತಿಯಿಂದ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ....

ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟರ್ ಕೊಡುಗೆ -ಜಿ.ಎಲ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದನೆ

ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್‌ಾನ್‌ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ...

ತಂಗಮ್ಮ ಕಲ್ಲಾಜೆ ನಿಧನ

ನಾಲ್ಕೂರು ಗ್ರಾಮದ ಕಲ್ಲಾಜೆ ದಿ.ಕರಿಯಪ್ಪ ಇವರ ಪತ್ನಿ ತಂಗಮ್ಮ ಅಲ್ಪಕಾಲದ ಅಸೌಖ್ಯದಿಂದ ಫೆ. 22 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಶ್ರೀಮತಿ ಸೀತಮ್ಮ ಶೀರಾಜೆ, ಶ್ರೀಮತಿ ದುರ್ಗೆಶ್ವರಿ ಕಿರಿಭಾಗ ( ಕೊತ್ನಡ್ಕ) ಹಾಗೂ ಸೊಸೆಯಂದಿರು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!