ಆಲೆಟ್ಟಿ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಅವಿರೋಧ ಆಯ್ಕೆ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜ.31 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದು ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ ಹಾಗೂ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಯವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಸುಧಾಕರ ಆಲೆಟ್ಟಿ, ಚಿದಾನಂದ ಕೋಲ್ಟಾರು, ಶ್ರೀಮತಿ ವಿದ್ಯಾ ಕುಡೆಕಲ್ಲು,ಶ್ರೀಮತಿ ಉಷಾ...

ಕಜ್ಜೋಡಿ, ಮುಳ್ಳುಬಾಗಿಲು, ಕರಂಗಲ್ಲು ಹಾಗೂ ಕಟ್ಟ-ಗೋವಿಂದನಗರ ಭಾಗದಲ್ಲಿ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಅವ್ಯವಸ್ಥೆ

ಪ್ರಯೋಜನಕ್ಕೆ ಬಾರದಂತಾಯಿತೇ ಮುಳ್ಳುಬಾಗಿಲು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಟವರ್..!? ಸಂಬಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಜನತೆ ದೇಶದ ಅಭಿವೃದ್ಧಿ ಆಗಬೇಕಾದರೆ ಹಳ್ಳಿಗಳು ಅಭಿವೃದ್ಧಿ ಆಗಬೇಕು. ಹಳ್ಳಿ-ಹಳ್ಳಿಗಳನ್ನು ಸೇರಿಸುವ ನಿಟ್ಟಿನಲ್ಲಿ ಬಿ.ಎಸ್.ಎನ್.ಎಲ್ ದೇಶದ ಅನೇಕ ಪ್ರದೇಶಗಳಲ್ಲಿ ಹೊಸ ಟವರ್ ಗಳನ್ನು ನಿರ್ಮಿಸಿ 4ಜಿ ಸೇವೆಯನ್ನು ನೀಡುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಅನೇಕ...
Ad Widget

ಜ.31- ಕಡಬ ತಾ.ಪಂ. ನ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ ನಿವೃತ್ತಿ

ಕಡಬ ತಾಲ್ಲೂಕು ಪಂಚಾಯತ ನ ಸಹಾಯಕ ನಿರ್ದೇಶಕ, ಸಹಾಯಕ ಲೆಕ್ಕಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ನಾಲ್ಕನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ಕಡಬದ ಪಿಜಕ್ಕಳದಲ್ಲಿ ಪಡೆದ ಇವರು 7 ನೇ ತರಗತಿವರೆಗೆ ಕೋಟೆಮುಂಡುಗಾರು ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಬಾಳಿಲ ವಿದ್ಯಾಭೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದರು....

ಸುಳ್ಯ‌ದಲ್ಲಿ ಆಧಾರ್ ಸೇವೆ ಸರಿಪಡಿಸಲು ತಹಶೀಲ್ದಾರ್ ಗೆ ಎಸ್.ಡಿ.ಪಿ.ಐ. ಮನವಿ – ವಾರದೊಳಗೆ ಸರಿಪಡಿಸುವ ಭರವಸೆ

ಸುಳ್ಯ : ಕಳೆದ ಕೆಲವು ತಿಂಗಳುಗಳಿಂದ ಸುಳ್ಯದಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧಾರ್ ಸೇವಾ ಸೌಲಭ್ಯವು ಸ್ಥಗಿತಗೊಂಡಿದ್ದುಅಗತ್ಯ ಕಾರ್ಯಗಳಿಗೆ ಆಧಾರ್ ಕಡ್ಡಾಯವಾಗಿರುವ ಕಾರಣದಿಂದ ಆಧಾರ್ ಸೇವಾ ಸೌಲಭ್ಯವಿಲ್ಲದ ಕಾರಣ ಯಾವುದೇ ಅಗತ್ಯ ಕಾರ್ಯಗಳಿಗೆ ಕಷ್ಟ ಪಡುವಂತಾಗಿದೆ.ಸುಳ್ಯ ತಾಲೂಕಿನಲ್ಲಿ 40 ಗ್ರಾಮಗಳಿದ್ದು, ಬೆಳ್ಳಾರೆಯ ಅಂಚೆ ಕಚೇರಿಯಲ್ಲಿ ಏಕ ಮಾತ್ರ ಆಧಾರ್ ಸೇವಾ ಕೇಂದ್ರವಿದೆ.ಆದುದರಿಂದ ತ್ವರಿತವಾಗಿ ಸ್ಪಂದಿಸಿ...

ಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ

ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೇಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ...

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಪಡ್ಪಿರೆ ಉದ್ಘಾಟನೆ

ಕೊಡಗಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ: ಶಾಸಕ ಎ.ಎಸ್. ಪೊನ್ನಣ್ಣ ದೇವಾಲಯ ಅಭಿವೃದ್ಧಿಗೊಂಡರೆ ಊರಿನ ಅಭಿವೃದ್ಧಿ: ಶಾಸಕಿ ಭಾಗೀರಥಿ ದೇವಸ್ಥಾನದ ಅಭಿವೃದ್ಧಿಯಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ: ಕೆ.ಜಿ. ಬೋಪಯ್ಯ ಶಾಸ್ತಾವು ದೇವಾಲಯ ಕನ್ನಡ, ಮಲೆಯಾಳಿ, ತುಳು ದೈವಗಳ ಸಂಗಮವಿರುವ ಐತಿಹಾಸಿಕ ಕ್ಷೇತ್ರ: ಪ್ರೊ. ಕೆ.ಇ. ರಾಧಾಕೃಷ್ಣ ಶ್ರೀ ಶಾಸ್ತಾವು ದೇವರ...

ಕಲ್ಮಡ್ಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮಾಜಿ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಉಪಾಧ್ಯಕ್ಷರಾಗಿ ರಾಮ ನಾಯ್ಕ ಉಡುವೆಕೋಡಿ

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಜ.30 ರಂದು ನಡೆಯಿತು. . ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮಾಜಿ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಉಪಾಧ್ಯಕ್ಷರಾಗಿ ರಾಮ ನಾಯ್ಕ ಉಡುವೆಕೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಶೋಕ ಜಿ. ಗೋಳ್ತಾಜೆ, ತೃಪ್ತಿ ಯು., ರವಿಕಿರಣ ಎ.,...

ಮುರುಳ್ಯ ಎಣ್ಮೂರು ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಎರಡನೇ ಬಾರಿಗೆ ಆಯ್ಕೆ – ಉಪಾಧ್ಯಕ್ಷರಾಗಿ ಬಂಡಾಯ ಅಭ್ಯರ್ಥಿ ನಾಗೇಶ್ ಆಳ್ವ ಆಯ್ಕೆ – ಶಾಸಕರ ತವರಲ್ಲೇ ಬಿಜೆಪಿಗೆ ಬಂಡಾಯದ ಬಿಸಿ – ಬಣ ರಾಜಕೀಯ ತಾರಕಕ್ಕೆ

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಜ.30 ದಿನ ನಿಗದಿಯಾಗಿತ್ತು. ಪಕ್ಷ ಸೂಚಿಸಿದ ಅಭ್ಯರ್ಥಿಗಳ ಬಗ್ಗೆ ಮಾಜಿ ಅಧ್ಯಕ್ಷ ವಸಂತ ನಡುಬೈಲು ತಂಡ ಅಸಮಾಧಾನಗೊಂಡು ಪಕ್ಷದ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆದು ಬಂಡಾಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಅಧ್ಯಕ್ಷರಾಗಿ ವಸಂತ ನಡುಬೈಲು...

ನಿವೃತ್ತ ವನಪಾಲಕ ಶಿವರಾಮ ಬಲ್ಯಾಯ ಅಡ್ಕಾರು ನಿಧನ

ಜಾಲ್ಲೂರು ಗ್ರಾಮದ ಅಡ್ಕಾರು ನಿವಾಸಿ, ನಿವೃತ್ತ ವನಪಾಲಕರಾದ ಶಿವರಾಮ ಬಲ್ಯಾಯ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜ.30ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶಿವರಾಮ ಬಲ್ಯಾಯರು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಸರೋಜಿನಿ, ಪುತ್ರರಾದ ಶಶಿ ಅಡ್ಕಾರು, ಸಂದೇಶ್ ಅಡ್ಕಾರು, ಸುದೀಶ್ ಅಡ್ಕಾರು, ಪುತ್ರಿಯರಾದ...

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸಿದ ಸುಳ್ಯ ಪೊಲೀಸ್!.

ಸುಳ್ಯ: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು ಯಾನೆ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ...
Loading posts...

All posts loaded

No more posts

error: Content is protected !!