- Friday
- August 14th, 2026
ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ.
ಸುಳ್ಯ ಬಿಎಸ್ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಈ ಬಗ್ಗೆ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರು ಡಿ. 14ರಂದು ಸುಳ್ಯ ಪೋಲೀಸರಿಗೆ ದೂರು ನೀಡಿದ್ದಾರೆ. ಬಿಎಸ್ಎನ್ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್ ಸಿಮ್ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ...
ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಗಡಿ ಗುರುತು ಮಾಡಿ ಜಂಟಿ ಸರ್ವೇ ಮಾಡಬೇಕು : ಕಿಶೋರ್ ಶಿರಾಡಿ ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಡಿ.15 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಹಾಗೂ ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳ ಗ್ರಾಮಸ್ಥರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...
ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.
ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಇದರ ವತಿಯಿಂದ ಬಲ್ಕಜೆ ಮತ್ತು ಮಡಪ್ಪಾಡಿ ಒಕ್ಕೂಟಗಳ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ದೀಪ ಪ್ರಜಲ್ವಿಸುವ ಮುಖೇನಾ ಚಾಲನೆಯನ್ನು...
ಸೌದೆಗಾಗಿ ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಮಾವ ಹಾಗೂ ಸೊಸೆಯ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಬಾಳುಗೋಡು ಗ್ರಾಮದ ಕೊತ್ನಡ್ಕ ಎಂಬಲ್ಲಿ ವರದಿಯಾಗಿದ್ದು, ಕೊತ್ನಡ್ಕದ ಬಾಬು(ಮಾವ) ಹಾಗೂ ಹರಿಣಾಕ್ಷಿ(ಸೊಸೆ) ಎಂಬುವವರು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸೌದೆ ತರಲು ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಕಾಡು ಹಂದಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಮಹಿಳೆಯ ತೊಡೆ...
https://youtu.be/Glt6qIcvuAM?si=PC9WP7Egr8tMj9AW ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ವತಿಯಿಂದ ಆಯೋಜಿಸಿದ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬವಾರು ಹಗ್ಗ ಜಗ್ಗಾಟ ಪಂದ್ಯಾವಳಿಯ ಪ್ರಥಮ ವರ್ಷದ ಕೊಡಗು ಗೌಡ ಹುತ್ತರಿ ಕಪ್ - 2024 ಅನ್ನು ಪೆರಾಜೆಯ ಕುಂಬಳಚೇರಿ ಮನೆತನ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಪುರುಷರ...
Loading posts...
All posts loaded
No more posts
