ಪುಳಿಕುಕ್ಕು : ಏಳ್ವೆರ್ ದೈವಸ್ಥಾನದ ಪುನರ್ ಪ್ರತಿಷ್ಠೆ

ಪುಳಿಕುಕ್ಕು ಗಿರಿಯಮಜಲು ಕುಟುಂಬಕ್ಕೆ ಸಂಬಂಧಿಸಿದ ಏಳ್ವೆರ್ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ನ.20 ರಂದು ಪುನರ್ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ತಂತ್ರಿಗಳಾದ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.‌ ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ಕುಶಾಲಪ್ಪ ಗೌಡ ಹೊಳೆಕೆರೆ, ಶಿವಪ್ಪ ಗಿರಿಯಮಜಲು, ತಿಮ್ಮಪ್ಪ ಪೊಯ್ಯಮಜಲು, ಪರಮೇಶ್ವರ ಪುಳಿಕುಕ್ಕು ಹಾಗೂ ಕುಟುಂಬಸ್ಥರು, ಊರವರು...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಅಧ್ಯಕ್ಷರಾಗಿ ಹೊನ್ನಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಗೀತಾ ಕಟ್ಟತ್ತಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇಲ್ಲಿ ಇತ್ತೀಚೆಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀ ಹೊನ್ನಪ್ಪ ನಾಯ್ಕ ಉದ್ದಂಪಾಡಿ , ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಕಟ್ಟತ್ತಾರು ಆಯ್ಕೆಯಾದರು. ಸದಸ್ಯರಾಗಿ ಶ್ರೀಮತಿ ಲೀಲಾವತಿ, ಶ್ರೀ ರಮೇಶ, ಶ್ರೀಮತಿ ಕುಸುಮ ಶ್ರೀಮತಿ ಪ್ರೇಮಾ ಮುಚ್ಚಿನಡ್ಕ...
Ad Widget

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಗೆ ಈ ವರ್ಷ ರಾಷ್ಟ್ರ ಅಧ್ಯಕ್ಷರಾದ ಚಿತ್ರ ಕುಮಾರ್ ಅವರು ಮಂಗಳವಾರ ಅಧಿಕೃತ ಭೇಟಿ ನೀಡಿದರು.ಆರಂಭದಲ್ಲಿ ರಾಷ್ಟ್ರಾಧ್ಯಕ್ಷ ರನ್ನು ಕುಮಾರಧಾರ ದ್ವಾರದ ಬಳಿ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ನ ಅಧ್ಯಕ್ಷ ಡಾ.ರವಿಕಕ್ಕೆ ಪದವು, ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಸದಸ್ಯರುಗಳಾದ ಗೋಪಾಲ ಎಣ್ಣೆ...

ಕಳಂಜ-ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 71ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು, ಸಹಕಾರ ಇಲಾಖೆ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನಿ., ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ಇತರ ಸಹಕಾರಿ ಸಂಘಗಳ ಸಹಕಾರದೊಂದಿಗೆ...

ಒಸಾಟ್ ಸಂಸ್ಥೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಸುಳ್ಯ ಸ.ಪ.ಪೂ. ಕಾಲೇಜು ಕೊಠಡಿ ಮತ್ತು ನೂತನ ಸಭಾಭವನಕ್ಕೆ ಶಿಲಾನ್ಯಾಸ

ಸಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಅಮೇರಿಕಾದ ಒಸಾಟ್ ಸಂಸ್ಥೆ ವತಿಯಿಂದ ರೂ.1 ಕೋಟಿ ವೆಚ್ಚದಲ್ಲಿ ನಾಲ್ಕು ಕೊಠಡಿ ನಿರ್ಮಾಣವಾಗಲಿದ್ದು, ಅದರ ಶಿಲಾನ್ಯಾಸ ಕಾರ್ಯಕ್ರಮ ನ.20ರಂದು ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಪುರೋಹಿತ ನಾಗರಾಜ ಭಟ್ ರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಕಾಡೆಮಿ...

ನೂತನ ಉದ್ಯಾನವನಕ್ಕೆ ಸರದಾರ ವಲ್ಲಭಭಾಯಿ ಪಟೇಲ್ ನಾಮಕರಣ ಮಾಡುವಂತೆ ರಾಷ್ಟ್ರಾಭಿಮಾನಿಗಳ ಬಳಗದವರಿಂದ ಮನವಿ

ಸುಳ್ಯ ನಗರ ಪಂಚಾಯತ್ ವತಿಯಿಂದ ಜ್ಯೋತಿ ಸರ್ಕಲ್ ನಿಂದ ನಿರೀಕ್ಷಣಾ ಮಂದಿರದ ರಸ್ತೆಯ ಬಲಬದಿಯಲ್ಲಿ ನೂತನವಾಗಿ ನಿರ್ಮಿಸಿದ ಉದ್ಯಾನವನಕ್ಕೆ ಸರ್ದಾ‌ರ್ ವಲ್ಲಭಾಯಿ ಪಟೇಲ್ ನಾಮಕರಣ ಮಾಡುವಂತೆ ಹಾಗೂ ಪುತ್ಥಳಿ ನಿರ್ಮಿಸುವಂತೆ ಸುಳ್ಯರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಇಂದು ಮನವಿ ನೀಡಲಾಯಿತು.ನಗರ ಪಂಚಾಯತ್ ಉಪಾಧ್ಯಕ್ಷ ಬುದ್ದ ನಾಯ್ಕ ರವರಲ್ಲಿ ಮನವಿ ಪತ್ರವನ್ನು ರಾಷ್ಟ್ರಾಭಿಮಾನಿಗಳ ಬಳಗದ ಸಂಚಾಲಕ ಉಮೇಶ್ ಪಿ.ಕೆ...

ಸುಳ್ಯ ಸರಕಾರಿ ಆಸ್ಪತ್ರೆ – ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಗೆ ಕಾಯ್ದಿರಿಸಿದ ಸ್ಥಳದಲ್ಲಿ ಖಾಸಗಿ ಆಂಬುಲೆನ್ಸ್ ವಾಹನ ನಿಲುಗಡೆ

ವೈದ್ಯರಿಗೊಂದು ನ್ಯಾಯ ಆಂಬುಲೆನ್ಸ್ ಚಾಲಕರಿಗೊಂದು ನ್ಯಾಯವಾ? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ವಾಹನ ನಿಲುಗಡೆಗೆ ಕಾಯ್ದಿರಿಸಿದ ಸ್ಥಳದಲ್ಲಿ ನ.19 ರಂದು ಮಧ್ಯಾಹ್ನ ವೇಳೆ ಖಾಸಗಿ ಆಂಬುಲೆನ್ಸ್‌ ವಾಹನವೊಂದು ನಿಲ್ಲಿಸಿದ್ದು ಇದರ ಫೋಟೋ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣ ವಾಗಿದೆ.ಇದೇ ರೀತಿಯ ಘಟನೆ ಕಳೆದ ಕೆಲವು ದಿನಗಳ...

ಕೂಟೇಲು: ಕಾಡು ಹಂದಿ ತಿವಿದು ಟ್ಯಾಪರ್ಸ್ ಮಹಿಳೆಗೆ ಗಾಯ

ಕೆ ಎಫ್ ಡಿ ಸಿ ರಬ್ಬರ್ ಪ್ಲಾಂಟೇಷನ್ ನಲ್ಲಿ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಸುಮಾರು 7 ಗಂಟೆ ಹೊತ್ತಿಗೆ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ...

ದೇವಚಳ್ಳ : ಎಂ ಆರ್ ಪಿ ಎಲ್ ನಿಂದ ಕಂದ್ರಪ್ಪಾಡಿ ಶಾಲೆಯಲ್ಲಿ ನಿರ್ಮಾಣಗೊಳ್ಳುವ ಕೊಠಡಿಗೆ ಗುದ್ದಲಿಪೂಜೆ

ಶತಮಾನೋತ್ಸವ ಆಚರಿಸಿಕೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿ ಗೆ ಎಂ.ಆರ್.ಪಿ.ಎಲ್‌.ನ ವತಿಯಿಂದ ನಿರ್ಮಾಣವಾಗಲಿರುವ ರೂ.15 ಲಕ್ಷದ ಕೊಠಡಿಗೆ ಗುದ್ದಲಿಪೂಜೆಯು ನ.18ರಂದು ನಡೆಯಿತು. ಸುಳ್ಯ ಶಾಸಕಿ ಕು। ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್‌ ಸದಸ್ಯರಾದ ಭವಾನಿ ಶಂಕರ...

ಅರಂತೋಡು: ಅನಾರೋಗ್ಯದ ಹಿನ್ನೆಲೆ, ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಅನಾರೋಗ್ಯದ ಹಿನ್ನೆಲೆಯಲ್ಲಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದ ಉಳುವಾರಿನಲ್ಲಿ ನ.19ರಂದು ಸಂಜೆ ಸಂಭವಿಸಿದೆ.ಅರಂತೋಡು ಗ್ರಾಮದ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು. ಪುಟ್ಟಣ್ಣ ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ. ಮೃತರ ಪತ್ನಿ ಈ ಹಿಂದೆ ನಿಧನರಾಗಿದ್ದು, ಪುತ್ರ ಶರತ್, ಪುತ್ರಿ ರಮ್ಯ...
Loading posts...

All posts loaded

No more posts

error: Content is protected !!