ಕಡಬ : ಪಿಜಕಳ – ಗೊಡಾಲು ರಸ್ತೆ ಉದ್ಘಾಟನೆ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕಳ-ಗೊಡಾಲು ರಸ್ತೆಯು 15 ಲಕ್ಷ ರೂ. ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ಅದರ ಉದ್ಘಾಟನೆಯನ್ನು ಇಂದು ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ.ಪಿ, ಅಕ್ಷತಾ ಬಾಲಕೃಷ್ಣ ಗೌಡ, ಪ್ರೇಮ ಅಂಗಡಿಮಜಲು, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಲಿಕೆ, ಕಡಬ ಶಕ್ತಿ...

ಸುಳ್ಯ : ಮಿಲಿಟರಿ ಗ್ರೌಂಡ್ – ಜಯನಗರ ರಸ್ತೆ ಉದ್ಘಾಟನೆ

ಸುಳ್ಯ ಕಸಬಾ ಗ್ರಾಮದ‌ ಮಿಲಿಟರಿ ಗ್ರೌಂಡ್ - ಜಯನಗರ ರಸ್ತೆ ಕಾಮಗಾರಿಯು ಶಾಸಕರ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕರಾದ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಾಹಾರೈಸಿದರು.ರಸ್ತೆ ಉದ್ಘಾಟನಾ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ ಮಾಜಿ ಉಪಾಧ್ಯಕ್ಷ ಬುದ್ಧ ನಾಯ್ಕ್, ನ.ಪಂ.ಮಾಜಿ ಸದಸ್ಯೆ...
Ad Widget

ಬಾಳಿಲ : ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಬಾಳಿಲ ಜೂನ್ 06 : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣ ನಾಟ್ಯ ತರಬೇತಿಯು ವಿದ್ಯಾ ಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಜಿಲ್ಲೆಯಾದ್ಯಂತ ವಿವಿಧ ಶಾಲೆಗಳಲ್ಲಿ ಯಕ್ಷಗಾನ ನಾಟ್ಯ ತರಬೇತಿಯು ನಡೆದುಕೊಂಡು ಬರುತ್ತಿದೆ ಪ್ರಸ್ತುತ 2026-27ನೆಯ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ಉಚಿತ ನಾಟ್ಯ ತರಬೇತಿಗೆ ದೀಪ ಬೆಳಗಿಸಿ...

ಪೈಚಾರು : ನಿಲ್ಲಿಸಿದ್ದ ಲಾರಿಗೆ ಕಾರು ಢಿಕ್ಕಿ – ಇಬ್ಬರಿಗೆ ಗಾಯ

ಪೈಚಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಹಿಂಬದಿಯಿಂದ ಕಾರೊಂದು ಢಿಕ್ಕಿಯಾಗಿ ಇಬ್ಬರು ಪ್ರಯಾಣಿಕರಿಗೆ ಹೆಚ್ಚಿನ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮಗು ಅಪಾಯದಿಂದ ಪಾರಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.

ಸುಳ್ಯ : ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ

ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ. ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್...

ಸುಬ್ರಹ್ಮಣ್ಯ : ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸ್ವಚ್ಛತಾ ಅಭಿಯಾನ – “ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ ” : ರಾಜಶೇಖರ ಕೋಟ್ಯಾನ್

ಸುಬ್ರಹ್ಮಣ್ಯ ಜೂನ್ 07 : ದಿನನಿತ್ಯ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಕುಕ್ಕೆ ಕ್ಷೇತ್ರಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಾರೆ. ಆದರೆ ಬರುವಾಗ ಅಥವಾ ಹೋಗುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ, ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಮಾರ್ಗದ ಬದಿಯ ಚರಂಡಿಗೆ ಎಸೆದು ಹೋಗುವುದು...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ನೂತನ ಸಮಿತಿ ಪದಗ್ರಹಣ ಹಾಗೂ ಬೈಲುವಾರಿ ಸಮಿತಿ ಸದಸ್ಯರ ಆಯ್ಕೆ

ಸುಳ್ಯ : ಇತ್ತೀಚೆಗೆ ನಡೆದ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಮಹಾಸಭೆಯಲ್ಲಿ ಆಯ್ಕೆಯಾದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ಹಾಗೂ ಉಪಸಮಿತಿಗಳ ರಚನಾ ಕಾರ್ಯಕ್ರಮವು ಭಾನುವಾರ ಸುಳ್ಯ ಕೇರ್ಪಳ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು. ನೂತನ ಕಾರ್ಯಕಾರಿ ಸಮಿತಿ ಆಧ್ಯಕ್ಷ ಸುರೇಶ್ ಕರ್ಲಪ್ಪಾಡಿ ನೇತೃತ್ವದ ಸಮಿತಿಯಲ್ಲಿ ಕಾರ್ಯದರ್ಶಿ ಗೋಪಾಲಕೃಷ್ಣ ಮೊರಂಗಲ್ಲು, ಕೋಶಾಧಿಕಾರಿ ರಾಧಾಕೃಷ್ಣ ಬೇರ್ಪಡ್ಕ,...

3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ – ಜೂ.16ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಅರಣ್ಯ ಸಂರಕ್ಷಕರು ಹಾಗೂ ಗೌರವ ವನ್ಯಜೀವಿ ವಾರ್ಡನ್ ಭುವನೇಶ್ವರ್ ಉಪಸ್ಥಿತರಿದ್ದು “ವನ್ಯಜೀವಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಮುಂದಿನ ಭವಿಷ್ಯಕ್ಕಾಗಿ ಪ್ರಕೃತಿಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರ ಕಡೆಗೆ ಹೆಚ್ಚು ಗಮನ ಹರಿಸಬೇಕು”...

ಸಂತೋಷ್ ಪಾಯಿಕ್ ನಿರ್ಮಾಣದ ಹಾಸ್ಯ ಚಲನಚಿತ್ರದ ಶೂಟಿಂಗ್ ಸೆಟ್ ನಲ್ಲಿ ಭೀಮರಾವ್ ವಾಷ್ಠರ್ ಜನ್ಮದಿನಾಚರಣೆ

ಚಿತ್ರ ನಿರ್ಮಾಪಕ ಸಂತೋಷ್.ವಿ ಪಾಯಿಕ್ ರವರ ಮ್ಯಾರೇಜ್ ಪಾರ್ಟಿ ಹಾಸ್ಯ ಚಲನಚಿತ್ರದ ಶೂಟಿಂಗ್ ಸೆಟ್ ನಲ್ಲಿ ಕವಿ, ಲೇಖಕ, ಜ್ಯೋತಿಷ್ಯರು ಹಾಗೂ ಈ ಚಲನಚಿತ್ರದ ಕಲಾವಿದರಾದ ಎಚ್.ಭೀಮರಾವ್ ವಾಷ್ಠರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ನಾಯಕ ನಟ ವಿನೀತ್ ಕುಮಾರ್, ನಟಿ ರಕ್ಷಿತಾ ಕಾರ್ಕಳ, ನಿರ್ಮಾಪಕ ಸಂತೋಷ್.ವಿ ಪಾಯಿಕ್, ಖ್ಯಾತ ಹಾಸ್ಯ ನಟರಾದ ದೀಪಕ್ ರೈ...
Loading posts...

All posts loaded

No more posts

error: Content is protected !!