ಇಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.26ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕಾವು ಹಾಗೂ ಸುಳ್ಯ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುಳ್ಯ :  ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆಯನ್ನು ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷರಾದ ಯತೀಶ್ ರೈ ದುಗಲಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಈ...
Ad Widget

ಹಳೆಗೇಟು : ಅನಾರೋಗ್ಯದಿಂದ ಯುವಕ ಮೃತ್ಯು

ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್‌ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ...

ಗುತ್ತಿಗಾರು : ಆಂಬ್ಯುಲೆನ್ಸ್ ಸೇವಾ ಯೋಜನೆಗೆ ಧನ ಸಹಾಯ ನೀಡಿದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ ಶಿವಪ್ರಸಾದ್ ಕೆ. ವಿ.

7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...

ಗುತ್ತಿಗಾರು : ಆಂಬ್ಯುಲೆನ್ಸ್ ಸೇವಾ ಯೋಜನೆಗೆ ಧನ ಸಹಾಯ ನೀಡಿದ ಸುಳ್ಯ ಕ್ಷೇತ್ರ ಶಿಕ್ಷಣಧಿಕಾರಿ ಕಚೇರಿ ಸಿಬ್ಬಂದಿ ಶಿವಪ್ರಸಾದ್ ಕೆ. ವಿ.

7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರರಿಗೆ ಪಿತೃ ವಿಯೋಗ

ದಕ್ಷಿಣ ಕನ್ನಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಅವರ ತಂದೆ ಕೊಡಿಯಾಲ ಗ್ರಾಮದ ದೇರಣ್ಣ ಗೌಡ ಅರ್ವಾರ ಇಂದು ನಿಧನರಾಗಿದ್ದಾರೆ.

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾ.ಪಂ. ಮುಖಾಂತರ ಸರ್ಕಾರಕ್ಕೆ ಮನವಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ...

ಹರಿಹರ ಪಳ್ಳತ್ತಡ್ಕ : ಅಗಲಿದ ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ ರವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಸುಳ್ಯ ವಲಯ ಸಮಿತಿಯ ಅಧ್ಯಕ್ಷರಾಗಿ, ಉದ್ಯಮ-ವ್ಯವಹಾರದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಕೂಡ ಸಕ್ರಿಯರಾಗಿ, ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರಾಗಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿ, ನೇತಾಜಿ ಯುವಕ ಮಂಡಲ ಹರಿಹರ ಪಳ್ಳತ್ತಡ್ಕ ಇದರ ಮಾಜಿ ಅಧ್ಯಕ್ಷರಾಗಿ...

ಪೆರಾಜೆ : ಕಾಡು ಪ್ರಾಣಿ ಬೇಟೆ – ಓರ್ವನ ಬಂಧನ

ಪೆರಾಜೆ ಗ್ರಾಮದ ಪೆರುಮುಂಡ ಎಂಬಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅ. 23 ರಂದು ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ....

108 ಆಂಬ್ಯುಲೆನ್ಸ್ ನಿಲ್ಲಿಸಲು ಆಸ್ಪತ್ರೆಯ ಆವರಣದಲ್ಲಿ ಜಾಗವಿಲ್ಲದೆ ಪರದಾಟ – ಸಿಬ್ಬಂದಿಗಳ ಅಳಲು ಕೇಳುವವರಾರು?

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
Loading posts...

All posts loaded

No more posts

error: Content is protected !!