Ad Widget

ಲೋಕೇಶ್.ಕೆ.ಆರ್ ಅವರಿಗೆ ಜೇಸಿಐ ಪಂಜ ಪಂಚಶ್ರೀ ವತಿಯಿಂದ “ಸೆಲ್ಯೂಟ್ ದ ಸೈಲೆಂಟ್ ಸ್ಟಾರ್” ಪ್ರಶಸ್ತಿ

ಜೆ.ಸಿ.ಐ ಪಂಜ ಪಂಚಶ್ರೀ ಇದರ ವತಿಯಿಂದ ಕೊಡಮಾಡುವ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿಗೆ ಗುತ್ತಿಗಾರು ಗ್ರಾಮ ಸಹಾಯಕರಾದ ಲೋಕೇಶ್.ಕೆ.ಆರ್ ಅವರು ಭಾಜನರಾಗಿದ್ದಾರೆ. ಫೆ.27ರಂದು ಪಂಜದ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೇಶ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಜೆ.ಸಿ.ಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆ.ಎಫ್.ಎಮ್ ದೇವಿಪ್ರಸಾದ್ ಚಿಕ್ಮುಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ...

ನಕಲಿಯಾಗಿ ಸಹಾಯಕ ಸಂಚಾರ ನಿರೀಕ್ಷಕರ ಸಮವಸ್ತ್ರವನ್ನು ಧರಿಸಿ ಬಸ್ಸುಗಳ ಪರಿವೀಕ್ಷಣೆ – ಆರೋಪಿ ಖುಲಾಸೆ

ದಿನಾಂಕ 10-12-2012 ರಂದು ವಂಚಿಸಿ ಹಣಗಳಿಸುವ ಉದ್ದೇಶದಿಂದ ಕ.ರಾ.ರ.ಸಾ.ನಿ ಸಂಸ್ಥೆಯ ಸಹಾಯಕ ಸಂಚಾರ ನಿರೀಕ್ಷಕರ ನಕಲಿ ಸಮವಸ್ತ್ರವನ್ನು ಧರಿಸಿ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಕ.ರಾ.ರ.ಸಾ.ನಿ ಸಂಸ್ಥೆಯ ಸುಮಾರು 20 ಬಸ್ಸುಗಳನ್ನು ಕಾನೂನು ಬಾಹಿರವಾಗಿ ಚೆಕ್ ಮಾಡಿ ಕೆಲವು ನಿರ್ವಾಹಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪವನ್ನು ಎದುರಿಸುತ್ತಿದ್ದ ಆರೋಪಿ ರವಿಕುಮಾರ್ ಎಂಬಾತನನ್ನು ಸುಳ್ಯದ ಪ್ರಧಾನ...
Ad Widget

ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅಡಕೆ ಕಳ್ಳತನ ಆರೋಪಿಗಳ ಖುಲಾಸೆ

ಸುಳ್ಯ ತಾಲೂಕು ಕಳಂಜ ಗ್ರಾಮದ ಮುಂಡುಗಾರು ಎಂಬಲ್ಲಿನ ನಿವಾಸಿಗಳಾದ ಹರಿಯಪ್ಪ ಗೌಡ, ರಾಘವ ಮತ್ತು ಲೋಕೇಶ್ವರಿ ಎಂಬುವರು ದಿನಾಂಕ 30-12-2021 ರಂದು ಎಂ.ಸುಬ್ರಹ್ಮಣ್ಯ ಎಂಬುವವರ ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅಡಿಕೆಯನ್ನು ಕದ್ದು ತೆಗೆದು ಕೊಂಡು ಹೋಗಿರುತ್ತಾರೆ ಎಂದು ಆರೋಪಿಸಿ ಎಂ.ಸುಬ್ರಮಣ್ಯ ರವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ಧ...

ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ರಂಜಿತಾ ರವರ ಚಿಕಿತ್ಸೆಗೆ ಬೇಕಿದೆ ದಾನಿಗಳ ನೆರವಿನ ಹಸ್ತ

“ಬದುಕಿನ ಆಸರೆಗಾಗಿ ಸಂತೆ ವ್ಯಾಪಾರ, ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿರುವ ಹೊತ್ತಿನಲ್ಲೇ ಬರಸಿಡಿಲಿನಂತೆ ಎರಗಿದ ಆರೋಗ್ಯ ಸಮಸ್ಯೆ ಇದೀಗ ಇಡೀ ಕುಟುಂಬವನ್ನೇ ನರಕದ ಕೂಪಕ್ಕೆ ತಳ್ಳಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕೆನ್ನಾರು ಎಂಬಲ್ಲಿ 5 ಸೆಂಟ್ಸ್ ಜಾಗದಲ್ಲಿ ಸಣ್ಣ ಮನೆಯನ್ನು ಹೊಂದಿದ್ದು, 2 ಪುಟ್ಟ ಮಕ್ಕಳೊಂದಿಗೆ ಕಷ್ಟದ ಬದುಕು ಸಾಗಿಸುತ್ತಿದ್ದ ರಾಘವೇಂದ್ರರ...

🪐ದ್ವಾದಶ ರಾಶಿಗಳ ದಿನ ಭವಿಷ್ಯ 🪐

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28/02/2026 ಶನಿವಾರ,🪐01,🐏ಮೇಷರಾಶಿ🐏📖,ಇಂದು ನಿಮಗೆ ಮಿಶ್ರ ದಿನವಾಗಲಿದೆ. ಕೆಲಸದ ಕ್ಷೇತ್ರದಲ್ಲಿ ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಈ ಕಾರಣದಿಂದಾಗಿ ನಿಮ್ಮ ಕೆಲವು ಹೊಸ ವ್ಯವಹಾರಗಳನ್ನು ಸಹ ಅಂತಿಮಗೊಳಿಸಬಹುದು. ನಿಮ್ಮ ಆಹಾರಕ್ರಮವನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾತ್ವಿಕ ಆಹಾರವನ್ನು ಸೇವಿಸಿದರೆ, ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಹ...

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ

ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ರು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಚಂದ್ರಶೇಖರ ಭಟ್ ತಳೂರು, ಕೃಷ್ಣಯ್ಯ ಮೂಲೆತೋಟ, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ವೆಂಕಟ್ರಮಣ ಮೆದು, ನಿತ್ಯಾನಂದ ಪಾರೆಪ್ಪಾಡಿ, ಲೋಕೇಶ್ ಪೂಜಾರಿ ತಳೂರು...

ಇಂದಿನ(ಫೆ.27) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 27-02-2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆಯ ವಿವರಗಳನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಂಡು ಸಿದ್ಧಪಡಿಸಲಾಗಿದೆ.ಅಡಿಕೆಹೊಸ ಅಡಿಕೆ : 260-305-460-480ಹಳೆ ಅಡಿಕೆ : 395-430-530/35ಡಬಲ್ ಚೋಲ್...

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:27-02-2026 ಶುಕ್ರವಾರ01,🐏ಮೇಷರಾಶಿ🐏🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು, ಈ ಸಮಯದಲ್ಲಿ ಉದ್ಯೋಗ ಸ್ಥಳದಲ್ಲಿ ನಿಮ್ಮ ಮೇಲೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು, ಆದರೆ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತವಾಗಿಯೂ ಬರಬಹುದು, ಹೆಣ್ಣು ಮಕ್ಕಳು ಅಪರಿಚಿತ ರೋಡನೆ...

ಅಡ್ತಲೆ : ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನಾಟಕ ಹಾಲು ಒಕ್ಕೂಟದ ಸಹಯೋಗದಲ್ಲಿ ಅಡ್ತಲೆಯಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಕುರಿತು ಮಾಹಿತಿ ಕಾರ್ಯಾಗಾರವು ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಮನಮೋಹನ ಮೇಲಡ್ತಲೆ ಇವರ ಮನೆಯಲ್ಲಿ ನಡೆಯಿತು. ಅರಂತೋಡು ಹಾಲು ಉತ್ಪಾದಕರ ಸಂಘದ ನೇತೃತ್ವದಲ್ಲಿ...

ಕಿರ್ಲಾಯ : ಮನೆಗೆ ತೆಂಗಿನ ಮರ ಬಿದ್ದು ಹಾನಿ

ಫೆ.25 ರಂದು ಸುರಿದ ಗಾಳಿ ಮಳೆಗೆ ಆರಂತೋಡು ಕೃಷ್ಣಪ್ಪ ಗೌಡ ಕಿರ್ಲಾಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಹಂಚುಗಳು ಪುಡಿ ಪುಡಿಯಾಗಿದ್ದು, ಸಂಪೂರ್ಣ ಮನೆಗೆ ಕೂಡ ಹಾನಿಯಾಗಿ ನಷ್ಟ ಸಂಭವಿಸಿದೆ.
Loading posts...

All posts loaded

No more posts

error: Content is protected !!