Ad Widget

ಅರಂಬೂರು : ಗೌಡ ಗ್ರಾಮ ಉಪಸಮಿತಿಯ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ಫಲಿತಾಂಶ ಘೋಷಿಸಲು ಆದೇಶಿಸಿದ ಕೋರ್ಟ್ – ಶೀಘ್ರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕೋರ್ಟ್ ಮುಖಾಂತರ ಮತದಾನದ ಹಕ್ಕನ್ನು ಪಡೆದವರೂ ಮತ ಚಲಾವಣೆ ಮಾಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಣೆ ಮಾಡಬಾರದೆಂಬ ಆದೇಶ ಇದ್ದುದರಿಂದ ಫಲಿತಾಂಶ ಘೋಷಣೆಯಾಗದೇ ಇದ್ದು, ಬಳಿಕ ಸಂಘಕ್ಕೆ ಆಡಳಿತಾಧಿಕಾರಿಗಳ ನೇಮಕವಾಗಿತ್ತು.ಚಲಾವಣೆಗೊಂಡ ಮತಗಳಲ್ಲಿ ತೀರಿಕೊಂಡವರ ಹೆಸರುಗಳೂ...
Ad Widget

ಹರಿಹರ ಪಳ್ಳತಡ್ಕದಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ಏ.06 : ಕೌಸ್ತುಭ ಕಲಾ ಟ್ರಸ್ಟ್ (ರಿ) ಕೂಜುಗೋಡು, ಸುಬ್ರಹ್ಮಣ್ಯ ಆಯೋಜಿಸಿರುವ ಎ.4 ರಿಂದ ಎ.11 ರವರೆಗೆ ಹರಿಹರೇಶ್ವರ ದೇವಾಲಯದಲ್ಲಿ ನಡೆಯಲಿರುವ ಮಕ್ಕಳ ಬೇಸಿಗೆ ಶಿಬಿರ ಕಲರವ ಎ.04 ರಂದು ಉದ್ಘಾಟನೆಗೊಂಡಿತು.ಹರಿಹರ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀಯುತ ಚಂದ್ರಹಾಸ ಶಿವಾಲ ದೀಪ ಬೆಳಗಿ ಶಿಬಿರವನ್ನು ಉದ್ಘಾಟಿಸಿದರು. ಹರಿಹರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...

ಎ.12 ರಿಂದ ರಂಗಮನೆಯಲ್ಲಿ ಚಿಣ್ಣರ ಮೇಳ ಆರಂಭ – ಶಿಬಿರದ ಸಮಾರೋಪದಲ್ಲಿ ವೇದಿಕೆಯೇರಿ ನಟಿಸಲಿರುವ 150 ಮಕ್ಕಳು

   ಸುಳ್ಯ ಹಳೆಗೇಟಿನಲ್ಲಿರುವ  ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19 ರ ವರೆಗೆ  ಅಭಿನಯ ಪ್ರಧಾನ ಚಿಣ್ಣರಮೇಳವನ್ನು ಏರ್ಪಡಿಸಲಾಗಿದೆ .ಎ.12 ರಂದು ಪೂ.9.30 ಕ್ಕೆ ಮಕ್ಕಳ  ಬೇಸಿಗೆ ಶಿಬಿರವನ್ನು ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಪ್ರಭಾಕರ ಶಿಶಿಲರು ಉದ್ಘಾಟಿಸಲಿದ್ದಾರೆ. ಸುಳ್ಯ ನಗರ ಪಂಚಾಯತ್ ಉಪಾಧ್ಯಕ್ಷರಾದ ಬುದ್ದ ನಾಯ್ಕ್, ದಾಮಾಯಣ...

ನಡುಗಲ್ಲು : ವಿಷ ಸೇವಿಸಿದ ತಾಯಿ ಹಾಗೂ ಮಗ – ಮಗ ಮೃತ್ಯು

ನಾಲ್ಕೂರು ಗ್ರಾಮದ ನಡುಗಲ್ಲು ಶಾಲಾ ಬಳಿಯ ಕುಶಾಲಪ್ಪ ದೇರಪ್ಪಜ್ಜನ ಮನೆಯಲ್ಲಿ ಅವರ ಪತ್ನಿ ಹಾಗೂ ಮಗ ವಿಷ ಸೇವಿಸಿದ ಘಟನೆ ನಡೆದಿದ್ದು, ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಕುಶಾಲಪ್ಪ ರವರ ಪತ್ನಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ ಘಟನೆ ನಡೆದಿದ್ದು, ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.07ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.07ರಂದು ಸೋಮವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಐವರ್ನಾಡು : ಮಾಸಿಕ ಸ್ವಚ್ಛತಾ ಕಾರ್ಯಕ್ರಮ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...

ಗೌಡರ ಯುವ ಸೇವಾ ಸಂಘದ ತಾಲೂಕು ಮಹಿಳಾ ಘಟಕದ ವತಿಯಿಂದ ತಾಲೂಕು ಮಟ್ಟದ ಚೆಸ್ ಸ್ಪರ್ಧೆ

ಸುಳ್ಯ:ಗೌಡರ ಯುವ ಸೇವಾ ಸಂಘದ ತಾಲೂಕು ಮಹಿಳಾ ಘಟಕದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಮಕ್ಕಳ ಚೆಸ್ ಸ್ಪರ್ಧೆ ಎ.22ರಂದು ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದುವತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸ್ಪರ್ಧೆಯ ವಿವರ ನೀಡಿದರು. ಅವರು 1ರಿಂದ 10ನೇ ತರಗತಿಯವರೆಗಿನ...

ಮಿತ್ತಮಜಲು : ವಿದ್ಯುತ್ ಕಂಬಕ್ಕೆ ಕಾರು ಗುದ್ದಿ ಹಾನಿ – ಚಾಲಕ ಪರಾರಿ

ಮಿತ್ತಮಜಲು ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಗುದ್ದಿದ ಘಟನೆ ಕಳೆದ ರಾತ್ರಿ ನಡೆದಿದೆ. ಕಾರು ಗುದ್ದಿದ ರಭಸಕ್ಕೆ ಕಂಬ ಮುರಿದಿದೆ. ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದು ನಂಬರ್ ಪ್ಲೇಟ್ ಬಿದ್ದು ಸಿಕ್ಕಿದೆ ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜರೋಹಣ

ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಧ್ವಜರೋಹಣ ಕಾರ್ಯಕ್ರಮ ಹಮ್ನಿಕೊಳ್ಳಲಾಗಿದ್ದು ಅದರ ಅಂಗವಾಗಿ ದೇವಚಳ್ಳ ಗ್ರಾಮದ ದೇವ ಬೂತ್ ನಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ದೇವ ಬೂತ್ ಅಧ್ಯಕ್ಷರಾದ ಲಕ್ಷ್ಮೀಶ ಅಡ್ಡನಪಾರೆ ಯವರ ಮನೆಯಲ್ಲಿ ಪಕ್ಷದ ಧ್ವಜರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಬೂತ್...
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ