- Friday
- July 31st, 2026
ಬೆಳ್ಳಾರೆ ಗ್ರಾಮದ ಉಮಿಕ್ಕಳ ದಿ.ಇಬ್ರಾಹಿಂ ಹಾಜಿಯವರ ಪತ್ನಿ ಕುಂಞ್ಞಲಿಮಾ (85) ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ಸ್ವಗೃಹದಲ್ಲಿ ನಿಧನರಾದರು.ಅವರು ಅಬ್ದುಲ್ ಕರೀಂ,ಹಮೀದ್, ಹನೀಫ್ ಪಿ. ಕೆ. ಸೇರಿದಂಥೆ ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳು,ಮರಿಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ
ಮೆಸ್ಕಾಂ ನ ಬೆಳ್ಳಾರೆ, ಸುಳ್ಯ ಹಾಗೂ ಬೆಸ್ಕಾಂ ನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಾಪಿ ಹಾಜಿ ಜೂ.05 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಜ್ ಯಾತ್ರೆ ಮುಗಿಸಿ ಅಗಮಿಸುತ್ತಿದ್ದ ಅವರಿಗೆ ಆರೋಗ್ಯದಲ್ಲಿ ಏರುಪೇರು ಆದ ಕಾರಣ ಏರ್ಪೋರ್ಟ್ ನಿಂದ ನೇರ ಚಿಕಿತ್ಸೆ ಗಾಗಿ ಅಸ್ಪತ್ರೆಗೆ ತೆರಳಿದ್ದರು ಅಲ್ಲಿ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು....
ಬಾಳಿಲ ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ )ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್ ಶುಭಕೋರಿದರು. ವೇದಿಕೆ ಯಲ್ಲಿ ಪ್ರೌಢಶಾಲಾ...
ಸುಬ್ರಹ್ಮಣ್ಯ ಜೂನ್ 05 : ಮಂಗಳೂರಿನ ನಿಟ್ಟೆ ಪಿಜಿಯೋಥೆರಪಿ ಮಹಾವಿದ್ಯಾಲಯ(ಕ್ಷೇಮ) ಆಯೋಜಿಸಿರುವ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 05 ಶುಕ್ರವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರಿಸರದಲ್ಲಿ ಕ್ಲೀನ್ ಕುಮಾರಧಾರ, ಗ್ರೀನ್ ಸುಬ್ರಹ್ಮಣ್ಯ ಎಂಬ ಸ್ಲೋಗನ್ನೊಂದಿಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಅಭಿಯಾನವನ್ನು ಫ್ಲಾಗ್ ಹಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ ಜೂನ್ 05 : ಸುಬ್ರಹ್ಮಣ್ಯದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವವು ಸಂಭ್ರಮದಿಂದ ಜೂನ್ 01 ರಂದು ಜರಗಿತು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದರು. ತದನಂತರ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ...
“ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ” ಎಂದು ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. “ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ...
ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ, ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯ ಮಾಯಿಲಪ್ಪ.ಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಸಹಾಯಕಿ...
ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಗತಿಗಳು ಜೂ.07 ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳು ನಡೆಯಲಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 223 ವಿದ್ಯಾರ್ಥಿಗಳು...
ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಯನ್ನು ಜೂ. 04ರಂದು ಕಾಲೇಜಿನ ಶ್ವಾಸಕೋಶ ವೈದ್ಯಕೀಯ ವಿಭಾಗದ ಆಯೋಜನೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
Loading posts...
All posts loaded
No more posts
