ಜು.28 : ಅರಂತೋಡಿನಲ್ಲಿ ಆಟಿ ಗೌಜಿ ಕಾರ್ಯಕ್ರಮ – ಪಿಂಡಿಮನೆ ಪವನ್ ಗೆ ಸನ್ಮಾನ

ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು,ಗ್ರಾಮ ಗೌಡ ಸಮಿತಿ, ಮಹಿಳಾ ಘಟಕ ಮತ್ತು ತರುಣ ಘಟಕ ಅರಂತೋಡು ಇವುಗಳ ಆಶ್ರಯದಲ್ಲಿ ಜು.28ರಂದು ಅರಂತೋಡಿನ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಆಟಿ ಗೌಜಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಕೇಶವ ಆಡ್ತಲೆ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಸಮಿತಿ...

ಕಮಲ ತಳೂರು ನಿಧನ

ಮಡಪಾಡಿ ಗ್ರಾಮದ ತಳೂರು ಹೂವಪ್ಪ ಗೌಡರ ಧರ್ಮಪತ್ನಿ ಕಮಲ ರವರು ಅಲ್ಪ ಕಾಲದ ಅಸೌಖ್ಯದಿಂದ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಇವರು ಪತಿ ಹೂವಪ್ಪ ಗೌಡ ತಳೂರು,ಮಗ ರವಿ ತಳೂರು, ಮಗಳು ಶ್ರೀಮತಿ ರಶ್ಮಿ ಹಾಗೂ ಕುಟುಂಬಸ್ಥರನ್ನು ಅಗಲಿರುತ್ತಾರೆ.
Ad Widget

ಬಿಎಸ್ಎನ್ ಎಲ್ ಗ್ರಾಹಕರ ಗೋಳು ಕೇಳುವವರು ಇಲ್ಲವೇ? – ಜನ ಪ್ರತಿಭಟಿಸಿದರೇ ಮಾತ್ರ ವ್ಯವಸ್ಥೆ ಸರಿಯಾಗುವುದೇ?

ಮಳೆ ಬಂತೆಂದರೇ ಸಾಕು ವಿದ್ಯುತ್ ಮಾಯಾವಾಗುತ್ತದೆ. ಅದರ ಜತೆಗೆ ಬಿಎಸ್ಎನ್ ಎಲ್ ನೆಟ್ವರ್ಕ್ ಕೂಡ ಮಾಯವಾಗುತ್ತದೆ. ಸುಳ್ಯ ತಾಲೂಕಿನ ಗ್ರಾಮಂತರ ಪ್ರದೇಶಗಳಲ್ಲಿ ಪರ್ಯಾಯ ನೆಟ್ವರ್ಕ್ ಇಲ್ಲದೇ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದ್ದ ಟವರ್ ಗಳನ್ನೇ ಸರಿಯಾಗಿ ಮೈಂಟೆನೆನ್ಸ್ ಮಾಡುತ್ತಿಲ್ಲ, ಇದೀಗ ತಾಲೂಕಿನಾದ್ಯಂತ ಹೊಸ ಟವರ್ ನಿರ್ಮಾಣ ಮಾಡಿದೆ. ಟವರ್ ನಿರ್ಮಾಣಗೊಂಡರೂ ಇದರ ಕಾರ್ಯಾರಂಭಕ್ಕೆ ಅಧಿಕಾರಿಗಳು ಮೀನಾಮೇಷ...

ರೆಂಜಾಳ : ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ ಕಾರ್ಗಿಲ್ ವಿಜಯೋತ್ಸವ,ಯೋಧ ನಮನ ಕಾರ್ಯಕ್ರಮ

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ಶಾಸ್ತಾವು ಯುವಕ ಮಂಡಲ(ರಿ.) ರೆಂಜಾಳ ಮರ್ಕಂಜ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ,ಯೋಧ ನಮನ ಕಾರ್ಯಕ್ರಮವು ಜು.26 ರಂದು ವಿನಾಯಕ ಸಭಾಭವನ ರೆಂಜಾಳದ ಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೇರಿಕೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ನಿವೃತ್ತ ಸೈನಿಕ ಉಮೇಶ್ ಮಣಿಯಾಣಿ ನಿಂತಿಕಲ್ಲು ಭಾಗವಹಿಸಿ ಕಾರ್ಗಿಲ್ ಯುದ್ಧದ ಸಮಯದಲ್ಲಿನ ತಮ್ಮ ಅನುಭವವನ್ನು...

ಅಜ್ಜಾವರ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ, ಜನರ ಪರದಾಟ

ಅಜ್ಜಾವರ: ಅಜ್ಜಾವರ ಗ್ರಾಮದಲ್ಲಿ ಕೇಂದ್ರ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಸುಸಜ್ಜಿತ ಕಟ್ಟಡ ಮತ್ತು ಅತ್ಯಾಧುನಿಕ ಜನರೇಟರ್ ಸೇರಿದಂತೆ ಇತರೆ ಸಕಲ ವ್ಯವಸ್ಥೆಗಳು ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಇದೀಗ ಕಟ್ಟಡ ಸೇರಿದಂತೆ ಎಲ್ಲಾ ಸಾಧನಗಳು ಸರಿಯಾದ ನಿರ್ವಹಣೆಯಿಲ್ಲದೆ ಉಪಯೋಗಕ್ಕಿಲ್ಲ, ನೆಟ್ವರ್ಕ್ ಕೂಡ ತುಸು ದೂರವಾಗಿದೆ. ಅಜ್ಜಾವರ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸೇರಿದಂತೆ ಎಲ್ಲಾ ಕಛೇರಿಗಳಿಗೆ ನೆಟ್ವರ್ಕ್ ಸಮಸ್ಯೆಗಳಿಂದಾಗಿ...

ಗುತ್ತಿಗಾರು: ಪದ್ಮರಾಜ್ ಆರ್ ಪೂಜಾರಿ ಭೇಟಿ – ಹಾನಿಗೀಡಾದ ಕೃಷಿಕನ ಅಡಿಕೆ ತೋಟ ವೀಕ್ಷಣೆ

ಮಂಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿಯವರು ಇಂದು ಗುತ್ತಿಗಾರು ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ತಯಾರಾಗುವಂತೆ ಸಲಹೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್ ಜಯಪ್ರಕಾಶ್ ರೈ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಮುಖರಾದ ಗಿರೀಶ್ ಕೊರಂಬಟ, ಎಸ್....

ಕುಲ್ಕುಂದ : ಗಣೇಶೋತ್ಸವ ಸಮಿತಿ ಪುನರ್ ರಚನೆ – ಅಧ್ಯಕ್ಷರಾಗಿ ಮಿಥುನ್ ಕುಲ್ಕುಂದ, ಕಾರ್ಯದರ್ಶಿಯಾಗಿ ವಿನೋದ್ ಕುಲ್ಕುಂದ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಮಿಥುನ್ ಕುಲ್ಕುಂದ, ಉಪಾಧ್ಯಕ್ಷ ರಾಗಿ ಪ್ರದೀಪ್ ಬಸವನಮೂಲೆ, ಕಾರ್ಯದರ್ಶಿಯಾಗಿ ವಿನೋದ್ ಕುಲ್ಕುಂದ, ಜೊತೆ ಕಾರ್ಯದರ್ಶಿಯಾಗಿ ದಿವಿಶ್ ಕುಲ್ಕುಂದ, ಖಜಾಂಜಿಯಾಗಿ ಭರತ್‌ ಪಲ್ಲಿಗದ್ದೆ, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿತ್ ಇಂಜಿರಾಡಿ ಮತ್ತು ಅಶ್ವಿಥ್ ಕುಲ್ಕುಂದ ಆಯ್ಕೆಯಾದರು.

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬ್ಯಾಂಕ್ ವ್ಯವಹಾರದ ಬಗ್ಗೆ ಮಾಹಿತಿ

ಸುಬ್ರಹ್ಮಣ್ಯ ಜುಲೈ 26 : ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಗುರುವಾರ ಸಂಜೆ ವಾರದ ಸಪ್ತಾಹಿಕ ಸಭೆಯಲ್ಲಿ ಬ್ಯಾಂಕ್ ವ್ಯವಹಾರ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಯಿತು. ಸುಬ್ರಹ್ಮಣ್ಯ ಬ್ಯಾಂಕ್ ಆಫ್ ಬರೋಡ ಶಾಖೆಯ ಮ್ಯಾನೇಜರ್ ವಿಶ್ರುತ್ ಕುಮಾರ್ ಅವರು ಬ್ಯಾಂಕಿನ ವಿವಿಧ ಖಾತೆಗಳು, ವಾಣಿಜ್ಯ-ಕೃಷಿ ಸಾಲಗಳು, ಶಿಕ್ಷಣ ಸಾಲಗಳು ಸೇರಿದಂತೆ ಬ್ಯಾಂಕ್ ನಿಂದ ನೀಡುವ...

ಕೊಲ್ಲಮೊಗ್ರು : ಕಾರ್ಗಿಲ್ ವಿಜಯ ದಿವಸ್ ಮತ್ತು ಸನ್ಮಾನ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಜು.26 ಶುಕ್ರವಾರದಂದು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇಲ್ಲಿ ಕಾರ್ಗಿಲ್ ವಿಜಯ ದಿವಸ್ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ನಿವೃತ್ತ ಯೋಧರಾದ ಪದ್ಮನಾಭ ಗೋಳ್ಯಾಡಿ ಅವರು ದೀಪ ಪ್ರಜ್ವಲನೆ ಮಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಎಂ.ಜೆ.ಎಫ್ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು....

ಸಂಪಾಜೆ : ಹಟ್ಟಿಯಿಂದ ಗೋವುಗಳನ್ನು ಕದ್ದೊಯ್ದ ಕಳ್ಳರು

ಸಂಪಾಜೆಯಲ್ಲಿ ಹಟ್ಟಿಯೊಂದರಿಂದ ಕಳೆದ ರಾತ್ರಿ ಗೋವುಗಳನ್ನು ಕದ್ದೊಯ್ದ ಘಟನೆ ಕಳೆದ ರಾತ್ರಿ ನಡೆದಿದೆ.ಸಂಪಾಜೆಯ ವಕೀಲರಾದ ಪುಷ್ಪರಾಜ್ ಅವರ ಹಟ್ಟಿಯಿಂದ ಎರಡು ದನಗಳನ್ನು ಕಳೆದ ರಾತ್ರಿ ಗೋಕಳ್ಳರು ಕದ್ದೊಯ್ದಿದ್ದು ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಭಾಗದಲ್ಲಿ ನಿರಂತರ ಕಳ್ಳತನ ನಡೆಯುತ್ತಿದ್ದರೂ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ.
Loading posts...

All posts loaded

No more posts

error: Content is protected !!