ಗುತ್ತಿಗಾರು ಮಲ್ಕಜೆ ಎಂಬಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಬಂದ್

ಗುತ್ತಿಗಾರು ಗ್ರಾಮದ ಮಲ್ಕಜೆ ಎಂಬಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಬಂದ್ ಆಗಿದೆ. ಹಲವಾರು ಕಂಬಗಳು ನೆಲಕ್ಕುರುಳಿ ಊರಿಗೆ ಕರೆಂಟ್ ಇಲ್ಲದಂತೆ ಆಗಿದೆ.

ಎಲಿಮಲೆ ಮಿತ್ರ ಬಳಗದ ಮಹಾಸಭೆ ; ನೂತನ ಅಧ್ಯಕ್ಷರಾಗಿ ಜಯಂತ್ ಹರ್ಲಡ್ಕ- ಕಾರ್ಯದರ್ಶಿಯಾಗಿ ಪ್ರಶಾಂತ್ ಅಂಬೆಕಲ್ಲು

ಮಿತ್ರ ಬಳಗ(ರಿ.) ಎಲಿಮಲೆ ಇದರ ಮಹಾಸಭೆಯು ಜು.21 ರಂದು ಬಳಗದ ಅಧ್ಯಕ್ಷರಾದ ಉದಯ ಕುಮಾರ್ ಚಳ್ಳ ಅವರ ಅಧ್ಯಕ್ಷತೆಯಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಬಳಗದ ಕಾರ್ಯದರ್ಶಿಯಾದ ಕುಲದೀಪ್ ಹರ್ಲಡ್ಕ ವಾರ್ಷಿಕ ವರದಿಯನ್ನು ಮಂಡಿಸಿದರು. ನಂತರ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಉದಯ ಕುಮಾರ್ ಚಳ್ಳ, ಅಧ್ಯಕ್ಷರಾಗಿ ಜಯಂತ್ ಹರ್ಲಡ್ಕ, ಉಪಾಧ್ಯಕ್ಷರುಗಳಾಗಿ ನಾಗೇಶ್...
Ad Widget

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ : ರೂ. 5.60 ಕೋಟಿ ವ್ಯವಹಾರ, 31.95 ಸಾವಿರ ಲಾಭ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯು ಜು. 21ರಂದು‌ ಸುಳ್ಯದ ಗ್ಯಾರೇಜು ಮಾಲಕರ ಸಂಘದ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ಧನ ದೋಳ ಇವರ ಅಧ್ಯಕ್ಷತೆಯಲ್ಲಿ ಜರಗಿತು.2023ರಲ್ಲಿ ಅಸ್ತಿತ್ವಕ್ಕೆ ಬಂದ ಸಂಘವು ಕೇವಲ ಒಂಬತ್ತು ತಿಂಗಳಿನಲ್ಲಿ ರೂ. 5,60,70,219 ವ್ಯವಹಾರ ನಡೆಸಿ ರೂ. 31,951 ಲಾಭ ಗಳಿಸಿದೆ. ಸಂಘವು...

ಮನವಿಗೆ ಸ್ಪಂದಿಸಿದ ಶಾಸಕಿ ಕು.ಭಾಗೀರಥಿ ಮುರುಳ್ಯ – ಅರಮನೆಗಯ ಸಂಪರ್ಕ ಕಲ್ಪಿಸುವ ಬಗ್ಗೆ ನೀರಾವರಿ ನಿಗಮದ ಇಂಜಿನಿಯರ್ ಗಳಿಂದ ಸ್ಥಳ ಪರಿಶೀಲನೆ

ಅರಂತೋಡು ಪಂಚಾಯತ್ ವ್ಯಾಪ್ತಿಯ ಅರಮನೆಗಯ ತೂಗು ಸೇತುವೆಯ ಸಂಚಾರ ನಿರ್ಬಂಧಿಸಿದ್ದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಆಡ್ತಲೆ, ಸಹಕಾರಿ ಸಂಘ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭವಾನಿ. ಸಿ. ಎ. ಪಂಚಾಯತ್ ಸದಸ್ಯರಾದ ವೆಂಕಟರಮಣ ಪೆತ್ತಾಜೆ ಇವರು ನಿಯೋಗ ಶಾಸಕರಿಗೆ ಮನವಿ...

ಕೇರ – ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಕೇರ, ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ ಜು.21 ರಂದು ನೆರವೇರಿತು. ಅಂಬೆಕಲ್ಲು ಹೂವಪ್ಪ ಗೌಡ ಹಾಗೂ ವೆಂಕಟ್ರಮಣ ಗೌಡರು ರಿಬ್ಬನ್ ಕತ್ತರಿಸಿ ಉದ್ಘಾಟನೆ ನೆರವೇರಿಸಿದರು. ಕೃಷ್ಣಕುಮಾರ್ ದಂಪತಿಗಳು ದೀಪ ಬೆಳಗಿಸಿದರು. ಹುಕ್ರ ತೆಗಿನಕಾಯಿ ಒಡೆದರು. ವಿಶೇಷ ಅನುದಾನದಲ್ಲಿ  ನಡೆದ ಕಾಮಗಾರಿ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ನಾಗೇಶ್ ಅಂಬೆಕಲ್ಲು,...

ಸುಳ್ಯ ದಸರಾ 2024 ಶ್ರೀ ಶಾರದಾಂಬಾ ಮಹಿಳಾ ಸಮಿತಿ ಸಭೆ

ಸುಳ್ಯ ದಸರಾ ಉತ್ಸವದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಶಾರದಾಂಬಾ ಮಹಿಳಾ ಸಮಿತಿಯ ಸಭೆ ಇಂದು ಬೂಡು ಶ್ರೀ ಭಗವತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ಸಮಿತಿಯ ಅಧ್ಯಕ್ಷೆ ಯಾದ ಶ್ರೀಮತಿ ಶಶಿಕಲಾ ನೀರಬಿದಿರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಗೆ ಮಹಿಳಾ ಸದಸ್ಯರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಮುಂದಿನ ಭಾನುವಾರ ನಡೆಯಲಿರುವ ಕ್ರೀಡಾ ದಸರಾದ ಅಂಗವಾಗಿ ನಡೆಯುವ...

ಸುಳ್ಯ ತಾಲೂಕು ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ವೀಣಾ ಕರ್ತವ್ಯಕ್ಕೆ ಹಾಜರು - ನಿಟ್ಟುಸಿರು ಬಿಟ್ಟ ಬಡ ಜನತೆ ಸುಳ್ಯ ಸರಕಾರಿ ಆಸ್ಪತ್ರೆಯ ಸ್ಟಾಪ್ ನರ್ಸ್ ಗಳ ಆರೋಪದಿಂದ ಬೇಸತ್ತು ಕರ್ತವ್ಯಕ್ಕೆ ಗೈರಾಗಿದ್ದ  ಪ್ರಸೂತಿ ತಜ್ಞೆಯಾಗಿರುವ ಡಾ. ವೀಣಾ ರವರು ಜು.16 ರಿಂದ ಸರಕಾರಿ ಆಸ್ಪತ್ರೆಗೆ ಕರ್ತವ್ಯಕ್ಕೆ ಮರು ಹಾಜರಾಗಿರುವುದಾಗಿ ತಿಳಿದುಬಂದಿದೆ.ತನ್ನ ಮೇಲೆ ಬಂದ ಆರೋಪದಿಂದ...

ಜು.21 : ಗುರುಪೂರ್ಣಿಮಾ (ವ್ಯಾಸ ಪೂರ್ಣಿಮಾ) – ಈ ದಿನದ ಮಹತ್ವವೇನು?

ಯಾಂತ್ರಿಕೃತ ಬದುಕಿನಲ್ಲಿ ನೊಂದವರ ಮನಸ್ಸಿಗೆ ಮುದ, ನೆಮ್ಮದಿ ಶಾಂತಿ ಸಂತಸ ತರುವಲ್ಲಿ ಹಬ್ಬಗಳ ಪಾತ್ರ ಬಹಳ ಹಿರಿದಾಗಿದೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನವೂ ಒಂದಲ್ಲ ಒಂದು ಹಬ್ಬ ಇರುವುದು ಬಹಳ ಸಂತಸದ ವಿಚಾರ. ಈ ಹಬ್ಬಗಳು ನಮ್ಮ ಜೀವನಕ್ಕೆ ನವಚೈತನ್ಯ, ಉಲ್ಲಾಸ, ಸಡಗರ ಮತ್ತು ಸಂಭ್ರಮವನ್ನು ತರುತ್ತದೆ. ಭಾರತದಲ್ಲಿ ನಾವು ವಿಶೇಷವಾಗಿ ನಾಲ್ಕು...

ಬಾಳಿಲ:ಬ್ಯಾಂಕ್ ಆಫ್ ಬರೋಡಾದಿಂದ ಕೊಡುಗೆ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡಾ ಬೆಳ್ಳಾರೆ ಶಾಖೆಯ ವತಿಯಿಂದ ಬ್ಯಾಂಕಿನ 117ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಜು.20ರಂದು ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (CSR) ನಿಧಿಯಿಂದ ರೂ 10,000 ಮೌಲ್ಯದ (Ryak) ತೆರೆದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆಯನ್ನು ಬೆಳ್ಳಾರೆ ಶಾಖೆಯ ಹಿರಿಯ ಅಧಿಕಾರಿಯಾಗಿರುವ ಶ್ರೀಮತಿ ಶುಭಶ್ರೀ ಅವರು...

ಕನಕಮಜಲು : ಬಾಲಕನಿಗೆ ಗುದ್ದಿದ ಓಮಿನಿ – ತಲೆಗೆ ಗಾಯ

ರಸ್ತೆ ದಾಟುತ್ತಿದ್ದ ಬಾಲಕನಿಗೆ ಓಮಿನಿ ಕಾರೊಂದು ಗುದ್ದಿದ ಘಟನೆ ಇಂದು ಸಂಜೆ ವರದಿಯಾಗಿದೆ. ಕನಕಮಜಲಿನ‌ಲ್ಲಿ ಅಜ್ಜಿ ಮನೆಗೆ ಬಂದಿದ್ದ  ಆಸಿಮ್ ರಸ್ತೆ ದಾಟುತ್ತಿದ್ದಾಗ ಪುತ್ತೂರು ಕಡೆಯಿಂದ  ಬಂದ ಓಮಿನಿ ಕಾರು ಢಿಕ್ಕಿಯಾಗಿದೆ. ತಲೆಗೆ ಸ್ವಲ್ಪ ಗಾಯಗೊಂಡಿರುವ ಬಾಲಕನಿಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Loading posts...

All posts loaded

No more posts

error: Content is protected !!