ಕುಂಬರ್ಚೋಡು :ಮಾಣಿ-  ಮೈಸೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಪಾಯ ಕಾರಿ ಮರತೆರವು ಗೊಳಿಸಿ ಕೊಡುವಂತೆ ಸ್ಥಳೀಯರ ಅಗ್ರಹ

ಕುಂಬರ್ಚೋಡು ಮಾಣಿ ಮೈಸೂರು ಹೆದ್ದಾರಿ ಬಳಿ ರಸ್ತೆಗೆ ವಾಲಿಕೊಂಡು ಬೀಳುವ ಸ್ಥಿತಿಯಲ್ಲಿ ಅಪಾಯಕಾರಿ ಮರವೊಂದು ಅಪಾಯದ ಮುನ್ಸೂಚನೆ ನೀಡುತ್ತಿದೆ. ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಮರವು ವಾಹನಗಳ ಮೇಲೆ ಬಿದ್ದರೆ ಜೀವ ಹಾನಿ ಸಂಭವಿಸುವ ಸಂದರ್ಭ ಇದ್ದು ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಈ ಮರವನ್ನು ತೆರೆಗುಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 16.07.2024 ಮಂಗಳವಾರದಂದು ಜರುಗಿತು.ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸ್ಕೌಟ್ ಆಯುಕ್ತರಾದ ಮಹಮ್ಮದ್ ತುಂಬೆ ಉದ್ಘಾಟಿಸಿ, ಪಂಜ ಸ್ಥಳೀಯ ಸಂಸ್ಥೆಯ ಕಾರ್ಯಕ್ರಮಗಳ...
Ad Widget

ಸೋಣಂಗೇರಿ: ಭಾರೀ ಮಳೆಗೆ ಅಂಗನವಾಡಿ ಕೇಂದ್ರ ಜಲಾವೃತ

ಭಾರೀ ಮಳೆ ಸುರಿಯುತ್ತಿರುವ ಕಾರಣ ಸೋಣಂಗೇರಿ ಅಂಗನವಾಡಿ ಕೇಂದ್ರವು ಮಳೆ ನೀರಿನಿಂದ ಜಲಾವೃತಗೊಂಡಿದೆ.    ಅಂಗನವಾಡಿ ಕೇಂದ್ರವು ತಗ್ಗುಪ್ರದೇಶದಲ್ಲಿರುವುದರಿಂದ  ನೀರು ಆವರಿಸಿದೆ. ರಸ್ತೆ ಮತ್ತು ಪರಿಸರದ ಮೇಲ್ಭಾಗದಿಂದ ಹರಿದು ಬಂದ ನೀರು ಕಟ್ಟಡದ ಸುತ್ತ ಆವರಿಸಿ ಅಂಗನವಾಡಿಯ ಒಳ ಭಾಗಕ್ಕೆ ನೀರು ನುಗ್ಗಿ, ಪುಸ್ತಕ ಪರಿಕರಗಳು, ಟೇಬಲ್, ಕುರ್ಚಿ ನೆನೆದಿದ್ದು, ಸ್ಥಳೀಯರಾದ ಸತ್ಯ ಶಾಂತಿ ತ್ಯಾಗ...

ವೃದ್ಧರನ್ನು ಹಿರಿಯರನ್ನ ಅಶಕ್ತರನ್ನ ಗೌರವಿಸುವುದು, ಶ್ರೇಷ್ಠ ಕಾರ್ಯ – ರೋ. ಕೃಷ್ಣಕುಮಾರ್ ರೈ ,           
ನೂಜಿ ಬಾಳ್ತಿಲ ವೃದ್ದಾಶ್ರಮದಲ್ಲಿ ಹಿರಿಯರನ್ನ ಗೌರವಿಸುವ  ಸಮಾರಂಭ          

                ಸುಬ್ರಹ್ಮಣ್ಯ ಜುಲೈ 18: “ತಂದೆ ತಾಯಿಯರು ತಮ್ಮ ಮಕ್ಕಳು ಒಳ್ಳೆಯವರಾಗಬೇಕು, ಭವಿಷ್ಯದಲ್ಲಿ ಉಜ್ವಲ ಭವಿಷ್ಯವನ್ನು ಕಾಣಬೇಕು, ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕೆಂದು, ಆಶಿಸಿ ಅವರನ್ನು ಪೋಷಿಸಿ, ಸಾಕುತ್ತಾರೆ. ಆದರೆ ಕೆಲವು ಮಕ್ಕಳು ಹಿಂದಿನದನ್ನೆಲ್ಲ ಮರೆತು ತಂದೆ ತಾಯಿಯರನ್ನು ಗೌರವಿಸದೆ ಅವರನ್ನ ಮೂಲೆಗುಂಪು ಮಾಡುತ್ತಿರುವುದು ವಿಷಾದನೀಯ. ಮನುಷ್ಯರು ಮನುಷ್ಯರಂತೆ ವರ್ತಿಸಬೇಕು ವಿನಃ ಪ್ರಾಣಿಗಳಂತೆ ವರ್ತಿಸಬಾರದು. ಇದು...

ಜು. 21: ಬೆಳ್ಳಾರೆಯಲ್ಲಿ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ

ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ, ಸ್ನೇಹಿತರ ಕಲಾ ಸಂಘ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ಜು.21ರಂದು ಆದಿತ್ಯವಾರ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ ಬೆಳ್ಳಾರೆ ಸಮೀಪದ ಪಡ್ಪು ಕೃಷಿಕ ಶೇಷಪ್ಪ ಗೌಡರ ಮನೆಯಲ್ಲಿ ನಡೆಯಲಿದೆ. ಆ ದಿನ ಬೆಳಿಗ್ಗೆ  ರಂಗ ಕಲಾವಿದ, ಚಲನಚಿತ್ರ ನಟ ರವಿ ರಾಮಕುಂಜಕಾರ್ಯಕ್ರಮವನ್ನು ಉದ್ಘಾಟೀಸಲಿದ್ದಾರೆ....

ವಾಲ್ತಾಜೆ – ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ವಾಲ್ತಾಜೆಯ ಮೂರು ಕಡೆಗಳಲ್ಲಿ ಬಹು ಬೇಡಿಕೆಯ ಒಟ್ಟು ನೂರು ಮೀಟರ್ ಗಳ ವಾಲ್ತಾಜೆ ಉಳ್ಳಾಕಳು ರಸ್ತೆಯ ಕಾಂಕ್ರೀಟ್ ಕಾಮಗಾರಿ ಗ್ರಾಮಪಂಚಾಯತ್ ಹಾಗೂ ವಿಶೇಷ ಅನುದಾನದೊಂದಿಗೆ ಪೂರ್ಣಗೊಂಡು ಅದರ ಉದ್ಘಾಟನಾ ಕಾರ್ಯಕ್ರಮ ಜು.17dರಂದು ನೆರವೇರಿತು. ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗಳನ್ನು ಗ್ರಾಮದ ಹಿರಿಯರಾದ ಶ್ರೀ ಮತಿ ಧರ್ಮಾವತಿ ಮುಂಡೋಡಿ, ಶ್ರೀ ಮಹಾಬಲ ಮುಂಡೋಡಿ, ಶ್ರೀ...

ಸುಳ್ಯದಲ್ಲಿ ಅಪೋಲೋ ಫಾರ್ಮಸಿ ಶುಭಾರಂಭ

ಸುಳ್ಯದ ಶ್ರೀರಾಂ ಪೇಟೆಯ ಗೋಪಿಕಾ ಬಿಲ್ಡಿಂಗ್ ನಲ್ಲಿ ಅಪೋಲೋ ಹಾಸ್ಪಿಟಲ್ ಗ್ರೂಪ್ ನ ಅಪೋಲೋ ಫಾರ್ಮಸಿ ಇಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ರೋ.ಯೋಗಿತಾ ಗೋಪಿನಾಥ್ ಉದ್ಘಾಟಿಸಿದರು. ಗೋಪಿಕಾ ಬಿಲ್ಡಿಂಗ್ ನ ಮಾಲಕರಾದ ಎಂ.ಪಿ.ಗೋಪಿನಾಥ್, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲರಾದ ಎಂ.ಬಿ.ಸದಾಶಿವ , ಪ್ರಣಾವ್ ಗೋಪಿನಾಥ್ ಉಪಸ್ಥಿತರಿದ್ದರು.ಸಂಸ್ಥೆಯ ವತಿಯಿಂದ ಎಂ.ಪಿ.ಗೋಪಿನಾಥ್, ಯೋಗಿತಾ...

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹತ್ತು ಅಡಿ ಆಳದ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ಪೆರಾಜೆ ಗ್ರಾಮದ ದಾಸರಹಿತ್ಲುವಿನಲ್ಲಿ ಜು.18ರಂದು ಬೆಳಿಗ್ಗೆ ಸಂಭವಿಸಿದೆ.ಕಾಸರಗೋಡಿನಿಂದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು ಮೂಲದ ಮೂವರು ಪ್ರಯಾಣಿಕರಿಗೆ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಸುಳ್ಯ ತಾಲೂಕು ಒಳಗೊಂಡು ಜಿಲ್ಲೆಯ ಐದು ತಾಲೂಕುಗಳಿಗೆ ರಜೆ ಘೋಷಣೆ.

ಸುಳ್ಯ: ಭಾರೀ ಮಳೆ ಮುಂದುವರಿದಿರು ಕಾರಣ ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18ರಂದು ಗುರುವಾರ ರಜೆ ಘೋಷಣೆ ಮಾಡಲಾಗಿದೆ. ಸುಳ್ಯ, ಪುತ್ತೂರು, ಕಡಬ,ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಿ...

ಜಿಲ್ಲೆಯಲ್ಲಿ ನಾಳೆ(ಜು.18) ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ನಕಲಿ ಆದೇಶ ಪ್ರಚಾರ ಪಡಿಸಿದರೆ ಕಠಿನ ಕ್ರಮ – ಜುಬಿನ್ ಮೊಹಪಾತ್ರ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆ ಪ್ರಮಾಣ ಹೆಚ್ಚಾಗಲಿದ್ದು ಈ ಹಿನ್ನಲೆಯಲ್ಲಿ ಕೆಲ ದಿನಗಳಿಂದ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿದ್ದರು. ಅದರೇ ಜು.18 ರಂದು ರಜೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡಿಸುತ್ತಿದ್ದು ಇದು ನಕಲಿ ಆದೇಶವಾಗಿದೆ. ಅಲ್ಲದೇ ಭಾರೀ ಮಳೆಯ ಸೂಕ್ಷ್ಮ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವುದು...
Loading posts...

All posts loaded

No more posts

error: Content is protected !!