- Sunday
- August 23rd, 2026
ಗುತ್ತಿಗಾರು ಗ್ರಾಮದ ವಳಲಂಬೆ ದಂಬೆಕೋಡಿ ನಿವಾಸಿ ರಾಘವ ಗೌಡರು ಅಲ್ಪಕಾಲದ ಅಸೌಖ್ಯದಿಂದ ಎ.22ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಯಶೋಧಾ, ಪುತ್ರ ಜೀವನ್, ಪುತ್ರಿಯರಾದ ಪ್ರೀತಿಕಾ, ಜಶ್ಮಿ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ನಿನ್ನೆ ಬೀಸಿದ ಗಾಳಿಮಳೆಗೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾದ ಘಟನೆ ನಡೆದಿದೆ. ಆನಂದ ನಾಯ್ಕರವರ ಮನೆಯಲ್ಲಿ ಮರ ಬೀಳುವ ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಆಲೆಟ್ಟಿ ಪಂಚಾಯತ್ ಸದಸ್ಯಸತ್ಯಕುಮಾರ್ ಆಡಿಂಜ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸುವಲ್ಲಿ ಪ್ರಯತ್ನಿಸಿದರು.
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಎ.12ರಂದು ಮಕ್ಕಳ ಬೇಸಿಗೆ ಶಿಬಿರವನ್ನು ಅಮರಮಡ್ನೂರು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೂಪವಾಣಿ ಉದ್ಘಾಟಿಸಿದರು. ಎ. 22ವರೆಗೆ ಲತಾಮಧುಸೂದನ್ ರವರ ಮುಖೇನ ಶಿಬಿರವು ಸಂಪನ್ನಗೊಂಡಿತು.ಶಿಬಿರದಲ್ಲಿ ವಿವಿಧ ಚಟುವಟಿಕೆಗಳಾದ ಯೋಗ ,ಧ್ಯಾನ, ಕ್ರಾಪ್ಟ್ , ಕಸದಿಂದ ರಸ, ಹಸಿರು ಎಲೆಗಳಿಂದ ಚಿತ್ರಗಳ ರಚನೆ ವ್ಯಕ್ತಿತ್ವ ವಿಕಸನ ಇಂಗ್ಲಿಷ್ ಸ್ಪೋಕನ್ ಕ್ಲಾಸ್ ಸ್ಕಿಲ್ ಡೆವಲವ್...
ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ಹಾಗೂ ನಗರ ಪಂಚಾಯತ್ ಸದಸ್ಯರು, ನಗರ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ನಗರದ ಪ್ರಮುಖರು ಸೇರಿ ಸುಳ್ಯ ನಗರದಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚನೆ ಮಾಡಿದರು.
ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ...
ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು.ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆಯನ್ನು...
ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ ಘಟನೆ ಇದೀಗ ವರದಿಯಾಗಿದೆ. ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು...
ಅಂಜುಮಾನ್ ಸಂಸ್ಥೆಯ ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ - ಟಿ ಎಂ ಶಾಹೀದ್ . ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ನಾವು ಖಂಡಿಸುತಿದ್ದು, ಇಂತಹ ಕೃತ್ಯ ಎಸಗುವ ಯಾರೇ ಆಗಲಿ ಅಂತವರನ್ನು ಎನ್ಕೌಂಟರ್ ಮಾಡುವಂತಹ ಕಾನೂನು ಜಾರಿಯಾಗಬೇಕೆಂದು ಮತ್ತು ಅಂತವರಿಗೆ ಎನ್ ಕೌಂಟರ್ ಮಾಡಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಕೆ.ಪಿ.ಸಿ.ಸಿ. ಪ್ರಧಾನ...
ಸುಳ್ಯ:ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಇದೀಗ ಲೋಕಸಭಾ ಚುನಾವಣಾ ಕಣ ಮತ್ತಷ್ಟು ರಂಗೇರುತ್ತಿದೆ, ಕಡಬ ತಾಲೂಕಿನಲ್ಲಿ ನಾಳೆ ತಮಿಳುನಾಡು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಪರ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಖಾಡದಲ್ಲಿ ಇನ್ನಷ್ಟು ಕಳೆ ಹೆಚ್ಚಿಸಲಿದ್ದಾರೆ....
ನೋಟಾಕ್ಕೆ ಮತ ನೀಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ - ಪ್ರವೀಣ್. ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನೋಟಾ ಮತದಾನ ಮಾಡಿ ಮತದಾನದ ಪ್ರಾಮುಖ್ಯತೆಯನ್ನು ಕಳೆದುಕೊಳ್ಳಬೇಡಿ, ನೋಟಾ ಮತದಾನ ಮಾಡುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ ಹೊರತು ಅದರಿಂದ ಪರಿಹಾರ ಶೂನ್ಯ ಎಂದು ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಪ್ರವೀಣ್ ವಿಟ್ಲ...
Loading posts...
All posts loaded
No more posts
