ಸುಬ್ರಹ್ಮಣ್ಯ: ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ  

  ಸೋಮವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಎದುರು ನಡೆದ ಸುಬ್ರಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಕಾಂಗ್ರೆಸ್ಸಿಗರು ನಡೆಸಿದ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡದೆ ನಮ್ಮ ಗ್ರಾಮ ಪಂಚಾಯತ್ ಅಭಿವೃದ್ಧಿಯನ್ನು ಸಹಿಸಲಾಗದೆ ಈ ರೀತಿ ಪ್ರತಿಭಟನೆ ಮಾಡುವುದನ್ನು ಭಾರತೀಯ...

ಅರಂತೋಡು ಗ್ರಾ.ಪಂ.ಸಾಮಾನ್ಯ ಸಭೆ

ಅರಂತೋಡು ಗ್ರಾಮ ಪಂಚಾಯಿತಿನ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸ್ವರಾಜ್ ಸಭಾಂಗಣದಲ್ಲಿ ಫೆ.14 ರಂದು ನಡೆಯಿತು.‌ ಸರಕಾರದ ಸುತ್ತೋಲೆಯನ್ನು ಪಿಡಿಓ ವಾಚಿಸಿದರು. ಕರ್ನಾಟಕ ಸರಕಾರದ ನಾಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರು ಹೊರಡಿಸಿದ ಆದೇಶದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ನಿವೇಶನ ಅನುಮೋದನೆಯನ್ನು ನೀಡುವುದನ್ನು ತಡೆಹಿಡಿಯಲಾದ...
Ad Widget

ಮುಡ್ನೂರು ಮರ್ಕಂಜ ಭೋಜನಾಲಯ ಮತ್ತು ಡಿಜಿಟಲ್ ಗ್ರಂಥಾಲಾಯ ಕೊಠಡಿ ಉದ್ಘಾಟನೆ-ಪ್ರತಿಭಾ ಪುರಸ್ಕಾರ

ಮುಡ್ನೂರು ಮರ್ಕಂಜ ಸ.ಹಿ.ಪ್ರಾ.ಶಾಲೆಯ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ-ಪ್ರತಿಭಾ ಪುರಸ್ಕಾರದ ಸಭ ಕಾರ್ಯಕ್ರಮವು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೀನಾಕ್ಷಿ ಬೊಮ್ಮೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶ್ರೀ ಶ್ರೀ ರಾಜೇಶ್ ನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ರಾಜಕೀಯವನ್ನು ಮಾಡುವುದು ಬೇಡ ಜೊತೆ...

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ಯುದ್ದ ಸ್ಮಾರಕದಲ್ಲಿ ಪುಲ್ವಾಮಾ ದಾಳಿಯ ಹುತಾತ್ಮರಿಗೆ ಪುಷ್ಪ ನಮನ ಸಮರ್ಪಣೆ

2019ರ ಫೆಬ್ರವರಿ 14ರಂದು ಪುಲ್ವಾಮಾ ಜಿಲ್ಲೆಯ ಅವಂತಿ ಪಾರದಲ್ಲಿ ಆತ್ಮಹುತಿ ದಾಳಿ ಕೋರನ ಕಾರ್ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ 40 ಜನ ಸಿಆರ್ಪಿಎಫ್ ಯೋಧರಿಗೆ ಗೌರವ ನಮನ ಸಲ್ಲಿಕೆ ಕಾರ್ಯಕ್ರಮವು ನಗರ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಯುದ್ಧ ಸ್ಮಾರಕದ ಎದುರು ಭಾಗದಲ್ಲಿ ನಡೆಯಿತು. ನಗರ ಪಂಚಾಯಿತ್ ಮಾಜಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಪುಲ್ವಾಮಾ...

ಫೆ.15 ಮತ್ತು 16 ರಂದು ದೇವರಗದ್ದೆಯಲ್ಲಿ ಮೊಗೇರ್ಕಳ ಮತ್ತು ಕೊರಗಜ್ಜ ದೈವದ ನೇಮೋತ್ಸವ

ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ ಫೆ.15 ಮತ್ತು 16ರಂದು ಜರುಗಲಿದೆ. ಗುರುವಾರ ಬೆಳಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.ಸಂಜೆ ಆದಿ ಮೊಗೇರ್ಕಳರು ಗರಡಿ...

ಫೆ. 17-18 ; ಕಣ್ಕಲ್ ತರವಾಡು ಧರ್ಮದೈವ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ

ಕೇನ್ಯ ಗ್ರಾಮದ ಕಣ್ಕಲ್ ತರವಾಡು ಮನೆಯ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ ಫೆ. 17 ಮತ್ತು ಫೆ.18 ರಂದು ನಡೆಯಲಿದೆ. ಫೆ. 17 ರಂದು ರಾತ್ರಿ ಶ್ರೀ ದೈವಗಳ ಭಂಡಾರ ತೆಗೆದು ದೈವಗಳ ನೇಮೋತ್ಸವ ನಡೆಯಲಿದೆ. ಫೆ. 18 ರಂದು ಧರ್ಮದೈವ ರುದ್ರಚಾಮುಂಡಿ ದೈವದ ನೇಮ ನಡೆಯಲಿದೆ. ಮಧ್ಯಾಹ್ನ ಪ್ರಸಾದ...

ಫೆ.20-22 ; ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ – ಇಂದು ಗೊನೆ ಮುಹೂರ್ತ

ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ. 20ರಿಂದ22ರ ವರೆಗೆ ಜಾತ್ರೋತ್ಸವ ನಡೆಯಲಿದ್ದು, ಗೊನೆ ಮುಹೂರ್ತ ಫೆ. 14ರಂದು ನಡೆಯಿತು.ದೇವಸ್ಥಾನದ ಪ್ರದಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್ ಕೂಜುಗೋಡು, ಸದಸ್ಯರುಗಳಾದ ಭವಾನಿಶಂಕರ ಪೈಲಾಜೆ,ಚಂದ್ರಹಾಸ ಶಿವಾಲ,ಆನಂದ ಕೆರೆಕ್ಕೋಡಿ,ಚಂದ್ರಶೇಖರ ಕಿರಿಭಾಗ,ರೇಷ್ಮಾ ಕಟ್ಟೆಮನೆ,ಜ್ಯೋತಿ ಕಳಿಗೆ,ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೇಷಪ್ಪ ಗೌಡ ಕಿರಿಭಾಗ,ಸದಸ್ಯರುಗಳಾದ...

ಅನುದಾನ,ಸಿಬ್ಬಂದಿಗಳ ಕೊರತೆಯಿಂದ ಗ್ರಾ.ಪಂ.ಗಳಲ್ಲಿ ಸಮಸ್ಯೆ: ವಿಧಾನಸಭೆಯ ಗಮನ ಸೆಳೆದ ಶಾಸಕಿ ಭಾಗೀರಥಿ ಮುರುಳ್ಯ

ವಿಧಾನಸಭೆಯಲ್ಲಿ ಧ್ವನಿ ಎತ್ತಿದ  ಶಾಸಕಿ ಭಾಗೀರಥಿ ಮುರುಳ್ಯರವರು, ಅನುದಾನದ ಮತ್ತು ಅಧಿಕಾರಿಗಳ ಸಿಬ್ಬಂದಿಗಳ ಕೊರತೆಯಿಂದ ಗ್ರಾಮ ಪಂಚಾಯತ್ಗಳ ಕಾರ್ಯನಿರ್ವಹಣೆಯಲ್ಲಿ ತೀವ್ರ ಆಗುತಿದೆ ಎಂದು ಹೇಳಿದರು. ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು ಅನುದಾನ ಬಾರದೆ ಸುಳ್ಯ ವಿಧಾನ ಸಭಾ ಕ್ಷೇತ್ರದಸುಳ್ಯ ಹಾಗೂ ಕಡಬ ತಾಲೂಕಿನ ಗ್ರಾ.ಪಂ.ಕಟ್ಟಡಗಳ ನಿರ್ಮಾಣ ಪೂರ್ತಿಯಾಗಿಲ್ಲ. ಡಾಟಾ ಎಂಟ್ರಿ ಆಫರೇಟರ್ಗಳ ನೇಮಕ...

ರಂಗಕರ್ಮಿ ಜೀವನ್ ರಾಂ ಸುಳ್ಯರಿಗೆ ‘ಸೆಂಟರ್ ಸ್ಟೇಜ್ ಕಪ್ಪಣ್ಣ ಪ್ರಶಸ್ತಿ’ ಪ್ರದಾನ

ರಂಗಭೂಮಿಯನ್ನೇ ಬದುಕು ಮಾಡಿಕೊಂಡವರಲ್ಲಿ ಜೀವನ್ ರಾಂ ಪ್ರಮುಖರು. ಇವರ ನಾಟಕಗಳಿಗೆ ಎಂದೂ ಪ್ರೇಕ್ಷಕರ ಕೊರತೆ ಆಗಿಲ್ಲ.. ತನ್ನ ವಾಸದ ಮನೆಯನ್ನೇ ಸಾಂಸ್ಕೃತಿಕ ಕೇಂದ್ರವನ್ನಾಗಿಸಿದ ಜೀವನ್  ನಾಡು ಕಂಡ ಅಪರೂಪದ ಶ್ರೇಷ್ಠ ರಂಗಕರ್ಮಿ' ಎಂದು ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಹೇಳಿದರು.ಅವರು ಶ್ರೀ ಮಾತಾ ಚಾರಿಟೇಬಲ್ ಟ್ರಸ್ಟ್ ಹುಳಿಯಾರು ಮತ್ತು ಸೆಂಟರ್ ಸ್ಟೇಜ್ ಬೆಂಗಳೂರು ಇವರು...

ಮುಡ್ನೂರು ಮರ್ಕಂಜ ಭೋಜನಾಲಯ ಮತ್ತು ಡಿಜಿಟಲ್  ಗ್ರಂಥಾಲಯದ ಕೊಠಡಿ ಉದ್ಘಾಟನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಇಲ್ಲಿ  ನೂತನವಾಗಿ ನಿರ್ಮಿಸಲಾದ ಶ್ರೀ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆಯನ್ನು ಸಹಾಯಕ ಕಮೀಷನ್ ಪುತ್ತೂರು ಜುಬೀನ್ ಮಹಾಪಾತ್ರ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್ ಅಂಗಾರ, ಸುಳ್ಯ ತಹಶೀಲ್ದಾರ್ ಜಿ ಮಂಜುನಾಥ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತ ಹೊಸಳಿಕೆ, ಬಾಲಕೃಷ್ಣ...
Loading posts...

All posts loaded

No more posts

error: Content is protected !!