ಕಲ್ಲುಗುಂಡಿ : ಹನುಮನ ಗುಡಿಯಲ್ಲಿ ವಿಶೇಷ ಪ್ರಾರ್ಥನೆ

ಕಲ್ಲುಗುಂಡಿಯ ಹನುಮನ ಗುಡಿಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠಾ ಮುಹೂರ್ತ ದಲ್ಲಿ ವಿಶೇಷ ಪೂಜೆ ನಡೆಯಿತು.ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಉಸ್ತುವಾರಿ ಸಚಿವರ ನೇತ್ರತ್ವದಲ್ಲಿ ಜನಸಂಪರ್ಕ ಸಭೆ ಅಧಿಕಾರಿಗಳ ದಂಡು ಆಗಮನ

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತ್ರತ್ವದಲ್ಲಿ ಇಂದು ಜನಸಂಪರ್ಕ ಸಭೆಯು ಇಂದು ಕೆವಿಜಿ ಪುರಭವನದಲ್ಲಿ ನಡೆಯಲಿದ್ದು ಈ ಹಿನ್ನಲೆಯಲ್ಲಿ ಇದೀಗ ಅಧಿಕಾರಿಗಳ ದಂಡೇ ಹರಿದು ಬಂದಿದ್ದು ಭಾರಿ ಜನತೆ ಆಗಮಿಸುವ ನಿರೀಕ್ಷೆಯಿದೆ.
Ad Widget

ಅಜ್ಜಾವರ ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಕುಮಾರಿ ಹರ್ಷಿತಾ.ಕೆ ತುಳುಪಾಡ್ಡನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಜಿಲ್ಲಾಡಳಿತ ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು,ಜಿಲ್ಲಾ ಮಟ್ಟದ "ಯುವಜನ ಮೇಳ" 2023-2024 ರ ತುಳುಪಾಡ್ಡನ ಸ್ಪರ್ಧೆಯಲ್ಲಿ ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಕುಮಾರಿ ಹರ್ಷಿತಾ.ಕೆ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಹಾಗೆಯೇ ಭಜನಾ ಸ್ಪರ್ಧೆಯಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ದ್ವಿತೀಯ ಸ್ಥಾನ ಪಡೆದಿರುತ್ತದೆ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ – ಸುಳ್ಯದ ಪ್ರಮುಖ ದೇವಸ್ಥಾನಗಳಲ್ಲಿ ಕಾಂಗ್ರೆಸ್ ಮುಖಂಡರಿಂದ ವಿಶೇಷ ಪೂಜೆ ಪ್ರಾರ್ಥನೆ

ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸುಳ್ಯದ ಕಾಂಗ್ರೆಸ್ ಮುಖಂಡರು ಸುಳ್ಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಮಹಾಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ, ಶ್ರೀ ರಾಮ ತಾರಕ ಜಪ ಯಜ್ಞದಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ನಂತರ ಸುಳ್ಯದ ಶ್ರೀ ರಾಮ ಭಜನಾ ಮಂದಿರ...

ಅಜ್ಜಾವರ: ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ರಾಮೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ತಾಲೂಕು ಅಜ್ಜಾವರ ವಲಯದ ಮೇನಾಲ ಕಾರ್ಯಕ್ಷೇತ್ರದಲ್ಲಿ ಕೇವಲ ಮಹಿಳೆಯರು ಮೂರು ಮಂದಿ ಮಾತ್ರ ಇರುವ ಭಾಗೀರಥಿರವರಿಗೆ ಹಲವು ವರ್ಷಗಳಿಂದ ಪ್ರತಿ ತಿಂಗಳಿಗೆ ಮಾಸಾಶನ ಸೌಲಭ್ಯ ಮತ್ತು ಆಹಾರದ ಕಿಟ್ ಮತ್ತು ವಸ್ತ್ರ ಗೃಹ ಉಪಯೋಗಿ ವಸ್ತು ಕ್ಷೇತ್ರದ ವತಿಯಿಂದ ನೀಡಲಾಗುತ್ತಿದೆ ಇವರ ಮನೆಯಲ್ಲಿ ಒಬ್ಬ ಮಹಿಳೆ ಅಂಗವಿಕಲರಾಗಿ...

ಶ್ರೀರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ರೆಂಜಾಳ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ – ಕರಸೇವಕರಿಗೆ ಸನ್ಮಾನ

ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ಅಂಗವಾಗಿ ಬೆಳಿಗ್ಗೆ 9.30 ರಿಂದ 11.15 ರತನಕ ಶ್ರೀ ಶಿವಪಂಚಾಕ್ಷರಿ ಭಜನಾ ಮಂಡಳಿ ರೆಂಜಾಳ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ, ನಂತರ ಪ್ರೋಜೆಕ್ಟರ್ ಮೂಲಕ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ನೇರಪ್ರಸಾರವನ್ನು ವೀಕ್ಷಿಸಲಾಯಿತು. ಅಯೋಧ್ಯಾ ಕರಸೇವಕರಾದ ಚಂದ್ರಶೇಖರ ರಾವ್ ಆಕಿರೆಕಾಡು, ಲೋಕಯ್ಯ...

ಹೂವುಗಳ ರಾಶಿಯಲ್ಲಿ ಕಂಗೊಳಿಸಿದ ಜಲದುರ್ಗಾದೇವಿ – ಪ್ರತಿ ವರ್ಷ ಹೂವಿನ ಅಲಂಕಾರ ಮಾಡುತ್ತಿರುವ ಪೆರುವಾಜೆಯ ಭಕ್ತ ಉಮೇಶ್‌ ಕೊಟ್ಟೆಕಾೖ

ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....

ರಾಜ್ಯ ಮಟ್ಟದ ಕರಾಟೆಯಲ್ಲಿ ತನ್ವಿತ್ ಗೆ ಬಹುಮಾನ

ಸ್ಪರ್ಶ ಕಲಾ ಮಂದಿರ ಬಿ. ಸಿ ರೋಡ್ ಇಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತರ ಕರಾಟೆ ಸ್ಪರ್ಧೆಯಲ್ಲಿ ಕಲ್ಲುಗುಂಡಿಯ ಸವೆರಪುರ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ತನ್ವಿತ್ ಯು. ಕೆ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಉಳುವಾರು ಮನೆಯ ಶ್ರೀಮತಿ ಪುಲತಾಕ್ಷಿ...

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಕರಸೇವಕರಾದ ವಾರಣಾಶಿ ಗೋಪಾಲಕೃಷ್ಣ ಹಾಗೂ ಅಶೋಕ್ ಕೆದಿಲ ಅಯೋಧ್ಯೆಯಲ್ಲಿ ತಮ್ಮ ಕರಸೇವೆಯ ಅನುಭವದ ಸಿಹಿ ನೆನಪುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಅರ್ಚಕರು ಹಾಗೂ ಭಕ್ತರು...

ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಪದ್ಮಾನಂದ ಗೌಡ ಕೊರತ್ಯಡ್ಕರಿಗೆ ಸನ್ಮಾನ

ಅಯೋಧ್ಯೆಯ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಪದ್ಮಾನಂದ ಗೌಡ ಕೊರತ್ಯಡ್ಕ ರವರ ಮನೆಗೆ ಭೇಟಿಕೊಟ್ಟು ರಾಮ ಭಕ್ತರಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುರಳಿ ನಾಳಿಯಾರು,ಅರುಣ್ ಪರಮಲೆ, ಗರುಡಯುವಕ ಮಂಡಲ ಚೊಕ್ಕಾಡಿ ಅಧ್ಯಕ್ಷರಾದ ಮನೋಜ್ ಪಡ್ಪು, ಶರಣ್ ಕರ್ಮಜೆ, ಯಕ್ಷಿತ್ ಬೊಳ್ಳುರು, ರಾಮ ಭಕ್ತರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!