ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುಳ್ಯಕ್ಕೆ ಭೇಟಿ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ರವರು ಜ.23ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುಳ್ಯಕ್ಕೆ ಬರುವ ಅವರು ಮಧ್ಯಾಹ್ನ 3 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ‌ನಡೆಸಲಿದ್ದಾರೆ.

ಮಂಡೆಕೋಲಿನಲ್ಲಿ ಹಿಂಡಿನಿಂದ ಬೇರೆಯಾದ ಆನೆ ಮರಿ

https://youtu.be/814YkJw0gUE?si=MZlEv88Q9OZS8DGE ಸುಳ್ಯ ಮಂಡೆಕೋಲಿನಲ್ಲಿ ಆನೆಗಳ ಹಿಂಡು ಈ ಹಿಂದಿನಿಂದಲೇ ಕಾಣಿಸುತ್ತಿದ್ದು ಇದೀಗ ಇಂದು ಮುಂಜಾನೆ ಆನೆ ಮರಿಯೊಂದು ಹಿಂಡುವಿನಿಂದ ಬೇರ್ಪಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆಯಲ್ಲಿ ಇದ್ದು ಇದೀಗ ಅದನ್ನು ಕಾಡಿನಲ್ಲಿನ ಅವುಗಳ ಹಿಂಡುಗಳ ಜೊತೆ ಸೇರಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ.
Ad Widget

ವಳಲಂಬೆ : ಜಾತ್ರೋತ್ಸವ ಆಮಂತ್ರಣ ಬಿಡುಗಡೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.1 ಮತ್ತು 2 ರಂದು ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಮುಖರಾದ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಪದ್ಮನಾಭ ದಂಬೆಕೋಡಿ, ಲಿಂಗಪ್ಪ ನಾಯ್ಕ್ ಕಾಜಿಮಡ್ಕ, ಮಾಧವ ಮಾಸ್ಟರ್ ಮೂಕಮಲೆ, ಕಿಶೋರ್ ಕುಮಾರ್ ಪೈಕ,...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಮಂಡೆಕೋಲು ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮತ್ತು ರಾಮ ಮಂದಿರ ಲೋಕಾರ್ಪಣೆ ದಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸಿ ಅರ್ಚನೆ, ವಿಶೇಷಪೂಜೆ ಹಾಗೂ ಬಲಿವಾಡುಕೂಟ ನಡೆಯುವುದು. ಸಂಜೆ ಮಂಡೆಕೋಲು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಹಸ್ರ ದೀಪ ಪ್ರಜ್ವಲನೆ, ರಾಮನಾಮ ಸಂಕೀರ್ತಣಾ ಕಾರ್ಯಕ್ರಮ ನಡೆಯಲಿದೆ.

ಸಂಪಾಜೆ ಧಾನ್ಯದ ಸಹಕಾರಿ ಸಂಘದ ಚುನಾವಣೆ – ಅವಿರೋಧ ಆಯ್ಕೆ

ಸಂಪಾಜೆ ಧಾನ್ಯದ ಸಹಕಾರಿ ಸಂಘ ನಿಯಮಿತ , ಸುಳ್ಯ ದ.ಕ. ಇದರ ಮುಂದಿನ ಐದು ವರ್ಷಗಳಿಗೆ ನಡೆದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ 17 ಜನ ಅರ್ಹ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಜ.15 ರಂದು ನಡೆದು ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ನಾಲ್ಕು ಜನ ನಾಮಪತ್ರ ಹಿಂಪಡೆದಿದ್ದುದರಿಂದ ಎಲ್ಲಾ ನಿರ್ದೇಶಕರು ಅವಿರೋಧವಾಗಿ...

ಪೆರುವಾಜೆ : ದರ್ಶನ ಬಲಿ – ಬಟ್ಟಲು ಕಾಣಿಕೆ : ಹರಿದು ಬಂದ ಭಕ್ತ ಸಾಗರ

*ಪೆರುವಾಜೆ*: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಶ್ರೀ ದೇವರ ಪೇಟೆ ಸವಾರಿ ನಡೆಯಿತು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...

ಅರಂತೋಡು ಅಡ್ತಲೆ ರಸ್ತೆ ಡಾಮರೀಕರಣ ಮತ್ತೆ ಆರಂಭ

ಅರಂತೋಡು - ಅಡ್ತಲೆ ಲೋಕೋಪಯೋಗಿ ರಸ್ತೆ ಅಗಲೀಕರಣ ಹಾಗೂ ಡಾಮರೀಕರಣ ಸಂಪೂರ್ಣಗೊಳ್ಳದೆ ಬಾಕಿ ಉಳಿದಿತ್ತು. ಈ ಬಗ್ಗೆ ನಾಗರಿಕ ಹಿತರಕ್ಷಣ ವೇದಿಕೆಯು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಮನವಿ ಮಾಡಿತ್ತು. ಇದೀಗ ಅರಂತೋಡು - ಅಡ್ತಲೆ ರಸ್ತೆಯಲ್ಲಿ ಬಾಕಿ ಇರುವ ಎರಡನೇ ಕೋಟ್ ಡಾಮಾರಿಕರಣ ಪ್ರಾರಂಭವಾಗಿದೆ. ಮನವಿಗೆ ಸ್ಪಂದಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...

ಪೆರುವಾಜೆ : ಜಲದುರ್ಗಾದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
Loading posts...

All posts loaded

No more posts

error: Content is protected !!