- Monday
- August 31st, 2026
ನವೆಂಬರ್ 10 ರಂದು ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾ ಸಂಸ್ಥೆಯಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಲಾಯಿತು. ಬಾಲ್ಯ ವಿವಾಹ ಆಚರಣೆಯಿಂದ ಆಗುವ ಶಿಕ್ಷೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಇದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕಿ ಮಿಸ್ರಿಯಾ ರವರು ಸವಿಸ್ತಾರವಾಗಿ ವಿವರಿಸಿದರು. ಸಭಾಧ್ಯಕ್ಷತೆಯನ್ನು...
ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ಕೇರಳ ನೋಂದಾವಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿಯಾದ ಕಾರ್ತಿಕ್ ಅವರು ಘಟನಾ ಸ್ಥಳಕ್ಕೆ ಬಂದು ಓಡಿಹೋದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು....
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷ ವಿಭಿನ್ನ ರೀತಿಯ ಶೈಕ್ಷಣಿಕ ಚಟುವಟಿಕೆ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಮನಸೆಳೆಯುತ್ತದೆ. ಈ ಬಾರಿ ಶಾಲೆಯ ಅಂಗಳದಲ್ಲೆ ಗದ್ದೆ ನಿರ್ಮಾಣ ಮಾಡಿ ಮಕ್ಕಳಿಗೆ ಭತ್ತದ ಬೇಸಾಯದ ಅರಿವು ಮೂಡಿಸಿದೆ. ಜೂನ್ ತಿಂಗಳಲ್ಲಿ ನೆಟ್ಟ ನೇಜಿ ಕಟಾವಿಗೆ ಬಂದಿದ್ದು, ಇಂದು ಕೊಯ್ಲು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ ಇದರ ವತಿಯಿಂದ ನ. 18 ರಂದು ನಡೆಯುವ ಗೋಪೂಜೆ ಕಾರ್ಯಕ್ರಮದ ಕರಪತ್ರ ಬಿಡುಗಡೆಯು ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ಬಜರಂಗದಳ ನಗರದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನ. 8ರಂದು ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ನ.8ರಂದು ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.
ಮದುವೆಗದ್ದೆಯ ನಿವಾಸಿಯಾಗಿರುವ ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪತಿ ಮನೆಯವರ ಮತ್ತು ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಕೆಯ ಡೆತ್ ನೋಟ್ ಮತ್ತು ತಾಯಿಯ ದೂರಿನ ಮೇರೆಗೆ ಕೇಸು ದಾಖಲಾಗಿದ್ದ ಹತ್ತು ಆರೋಪಿಗಳ ಪೈಕಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಹತ್ತು ಆರೋಪಿಗಳ ಪೈಕಿ ಐಶ್ವರ್ಯ , ಪತಿ ರಾಜೇಶ್, ಮಾವ ಗಿರಿಯಪ್ಪ ಕಾಪಿಲ, ಅತ್ತೆ ಸೀತಾ,...
ಅಮರ ಸುಳ್ಯ ಸುದ್ದಿ ಬಳಗ ಸತತ 7 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕ 2023 ರ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಸ್ವರ್ಣಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಬಿಳಿಮಲೆ ಸಂಚಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಹಿರಿಯ ವರದಿಗಾರ ಪದ್ಮನಾಭ ಅರಂಬೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಧಾನ ಸಂಪಾದಕ ಮುರಳೀಧರ ಅಡ್ಡನಪಾರೆ ಕೃತಜ್ಞತೆ ಸಲ್ಲಿಸಿದರು....
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್,ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ರಾಜ್ಯ ಧಾರ್ಮಿಕ...
ಪೆರಾಲು ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೇರಾಲು ನಿವಾಸಿ ಮಹೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪೇರಾಲು ಎಂಬಲ್ಲಿ ಅಂಚೆ ಕಛೇರಿಯಲ್ಲಿ ಗುತ್ತಿಗೆ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತ್ ನೀರಿನ ಟ್ಯಾಂಕ್ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳೀಯರಿಂದ ವಿಚಾರ ತಿಳಿದು ಸ್ಥಳಕ್ಕೆ ಪೋಲೀಸರು ಆಗಮಿಸಿದ್ದಾರೆಂದು ಎಂದು ತಿಳಿದುಬಂದಿದೆ.
ಸುಳ್ಯ ಪೇರಾಲು ನಿವಾಸಿ ಪೆರಾಲು ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಮಹೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪೇರಾಲು ಎಂಬಲ್ಲಿ ಅಂಚೆ ಕಛೇರಿಯಲ್ಲಿ ಗುತ್ತಿಗೆ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಆತನು ಗ್ರಾಮ ಪಂಚಾಯತ್ ಗೆ ಸಂಭದ ಪಟ್ಟ ನೀರಿನ ಟ್ಯಾಂಕ್ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಪ್ರಕಣವು ಸ್ಥಳೀಯರು ಗಮನಿಸಿ...
Loading posts...
All posts loaded
No more posts
